<p><strong>ಬೆಂಗಳೂರು:</strong> ಕೈಗಾರಿಕಾ ನಿವೇಶನದ ಸರ್ವೆ ಸ್ಕೆಚ್ ನೀಡಲು ₹1.50 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಸರ್ವೆ ಸೂಪರ್ವೈಸರ್ ಅನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p>.<p>‘ಬೆಂಗಳೂರು ನಿವಾಸಿ ರವಿ ಅವರಿಗೆ ಕೆಐಎಡಿಬಿಯಿಂದ ಕೈಗಾರಿಕಾ ನಿವೇಶನ ಮಂಜೂರಾಗಿದ್ದು, ಅದರ ಸರ್ವೆ ಸ್ಕೆಚ್ಗಾಗಿ ಕೆಐಎಡಿಬಿಯ ಬೆಂಗಳೂರು ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಸಂಬಂಧಿತ ಸರ್ವೆ ಸೂಪರ್ವೈಸರ್ ನರೇಂದ್ರ ಕುಮಾರ್ ಅವರು ₹1.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<p>‘ರವಿ ದೂರು ನೀಡಿದ್ದರು. ಲೋಕಾಯುಕ್ತ ಎಸ್ಪಿ ಕೋನ ವಂಶಿ ಕೃಷ್ಣ ಅವರ ಮಾರ್ಗದರ್ಶನದಂತೆ ಕಾರ್ಯಾಚರಣೆ ರೂಪಿಸಲಾಗಿತ್ತು. ರವಿ ಅವರು ಕೆಐಎಡಿಬಿ ಕಚೇರಿ ಬಳಿ ನರೇಂದ್ರ ಅವರಿಗೆ ಹಣ ನೀಡಿದಾಗ ಬಂಧಿಸಲಾಯಿತು’ ಎಂದು ತಿಳಿಸಿದರು.</p>.<p>‘ಬಂಧಿತರಿಂದ ಲಂಚದ ಹಣ ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೈಗಾರಿಕಾ ನಿವೇಶನದ ಸರ್ವೆ ಸ್ಕೆಚ್ ನೀಡಲು ₹1.50 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಸರ್ವೆ ಸೂಪರ್ವೈಸರ್ ಅನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p>.<p>‘ಬೆಂಗಳೂರು ನಿವಾಸಿ ರವಿ ಅವರಿಗೆ ಕೆಐಎಡಿಬಿಯಿಂದ ಕೈಗಾರಿಕಾ ನಿವೇಶನ ಮಂಜೂರಾಗಿದ್ದು, ಅದರ ಸರ್ವೆ ಸ್ಕೆಚ್ಗಾಗಿ ಕೆಐಎಡಿಬಿಯ ಬೆಂಗಳೂರು ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಸಂಬಂಧಿತ ಸರ್ವೆ ಸೂಪರ್ವೈಸರ್ ನರೇಂದ್ರ ಕುಮಾರ್ ಅವರು ₹1.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<p>‘ರವಿ ದೂರು ನೀಡಿದ್ದರು. ಲೋಕಾಯುಕ್ತ ಎಸ್ಪಿ ಕೋನ ವಂಶಿ ಕೃಷ್ಣ ಅವರ ಮಾರ್ಗದರ್ಶನದಂತೆ ಕಾರ್ಯಾಚರಣೆ ರೂಪಿಸಲಾಗಿತ್ತು. ರವಿ ಅವರು ಕೆಐಎಡಿಬಿ ಕಚೇರಿ ಬಳಿ ನರೇಂದ್ರ ಅವರಿಗೆ ಹಣ ನೀಡಿದಾಗ ಬಂಧಿಸಲಾಯಿತು’ ಎಂದು ತಿಳಿಸಿದರು.</p>.<p>‘ಬಂಧಿತರಿಂದ ಲಂಚದ ಹಣ ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>