<p><strong>ಮಂಡ್ಯ: </strong>‘22 ವರ್ಷಗಳಿಂದ ನಿರಂತರವಾಗಿ ಸೋಲು ಕಂಡಿದ್ದೇನೆ. ನನ್ನ ನಂತರ ಬಂದವರೆಲ್ಲರೂ ಗೆಲುವು ಸಾಧಿಸಿದ್ದಾರೆ. ಸೋಲುಗಳಿಂದ ರಾಜಕೀಯವಾಗಿ ಬಳಲಿದ್ದೇನೆ. ಈ ಚುನಾವಣೆಯಲ್ಲಾದರೂ ನನ್ನನ್ನು ಗೆಲ್ಲಿಸಿ’ ಎಂದು ಲೋಕಸಭೆ ಉಪ<br />ಚುನಾವಣೆ ಜೆಡಿಎಸ್ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಬಿಕ್ಕಿ ಬಿಕ್ಕಿ ಅತ್ತರು.</p>.<p>ನಾಗಮಂಗಲ ಪಟ್ಟಣದಲ್ಲಿ ಸೋಮವಾರ ನಡೆದ ಜೆಡಿಎಸ್– ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾವುಕರಾಗಿ ಕಣ್ಣೀರು ಹಾಕಿದರು.</p>.<p>‘ಪತ್ರಕರ್ತ ಕಂಚನಹಳ್ಳಿ ಗಂಗಾಧರಮೂರ್ತಿ ಕೊಲೆ ಕೇಸಿಗೂ ನನಗೂ ಯಾವುದೇ ಸಂಬಂಧವಿಲ್ಲ. ಕೋರ್ಟ್ನಲ್ಲೇ ಖುಲಾಸೆಯಾಗಿದ್ದೇನೆ ’ ಎಂದರು.</p>.<p class="Subhead"><strong>ಮುಖಂಡರ ಗೈರು:</strong> ಕಾಂಗ್ರೆಸ್ ಮುಖಂಡ ಎನ್.ಚಲುವರಾಯಸ್ವಾಮಿ, ಉಪ ಚುನಾವಣೆ ಟಿಕೆಟ್ ವಂಚಿತರಾದ ಲಕ್ಷ್ಮಿ ಅಶ್ವಿನ್ಗೌಡ ಸಭೆಗೆ ಗೈರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>‘22 ವರ್ಷಗಳಿಂದ ನಿರಂತರವಾಗಿ ಸೋಲು ಕಂಡಿದ್ದೇನೆ. ನನ್ನ ನಂತರ ಬಂದವರೆಲ್ಲರೂ ಗೆಲುವು ಸಾಧಿಸಿದ್ದಾರೆ. ಸೋಲುಗಳಿಂದ ರಾಜಕೀಯವಾಗಿ ಬಳಲಿದ್ದೇನೆ. ಈ ಚುನಾವಣೆಯಲ್ಲಾದರೂ ನನ್ನನ್ನು ಗೆಲ್ಲಿಸಿ’ ಎಂದು ಲೋಕಸಭೆ ಉಪ<br />ಚುನಾವಣೆ ಜೆಡಿಎಸ್ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಬಿಕ್ಕಿ ಬಿಕ್ಕಿ ಅತ್ತರು.</p>.<p>ನಾಗಮಂಗಲ ಪಟ್ಟಣದಲ್ಲಿ ಸೋಮವಾರ ನಡೆದ ಜೆಡಿಎಸ್– ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾವುಕರಾಗಿ ಕಣ್ಣೀರು ಹಾಕಿದರು.</p>.<p>‘ಪತ್ರಕರ್ತ ಕಂಚನಹಳ್ಳಿ ಗಂಗಾಧರಮೂರ್ತಿ ಕೊಲೆ ಕೇಸಿಗೂ ನನಗೂ ಯಾವುದೇ ಸಂಬಂಧವಿಲ್ಲ. ಕೋರ್ಟ್ನಲ್ಲೇ ಖುಲಾಸೆಯಾಗಿದ್ದೇನೆ ’ ಎಂದರು.</p>.<p class="Subhead"><strong>ಮುಖಂಡರ ಗೈರು:</strong> ಕಾಂಗ್ರೆಸ್ ಮುಖಂಡ ಎನ್.ಚಲುವರಾಯಸ್ವಾಮಿ, ಉಪ ಚುನಾವಣೆ ಟಿಕೆಟ್ ವಂಚಿತರಾದ ಲಕ್ಷ್ಮಿ ಅಶ್ವಿನ್ಗೌಡ ಸಭೆಗೆ ಗೈರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>