ಮದ್ದೂರು: ‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಯೋಚಿಸಲು ಸಾಕಷ್ಟು ಕಾಲಾವಕಾಶವಿದೆ’ ಎಂದು ನಟ ನಿಖಿಲ್ ಕುಮಾರಸ್ವಾಮಿ ಇಲ್ಲಿ ಗುರುವಾರ ಹೇಳಿದರು.
‘ಈಗಾಗಲೇ ಕಾರ್ಯಕರ್ತರು ಮಂಡ್ಯ ಹಾಗೂ ರಾಮನಗರದಿಂದ ಸ್ಪರ್ಧಿಸಲು ಒತ್ತಾಯಿಸುತ್ತಿದ್ದಾರೆ. ಈ ಕುರಿತು ಅಂತಿಮ ತೀರ್ಮಾನ ಕೈಗೊಂಡಿಲ್ಲ’ ಎಂದು ಹೇಳುವ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದರು.
ಮಂಡ್ಯಕ್ಕೆ ಹೋಗುವ ಮಾರ್ಗದಲ್ಲಿ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.