‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹಿಳೆಯರಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಇದಕ್ಕಾಗಿ ಮಹಿಳಾ ಮೋರ್ಚಾ ಸಕ್ರಿಯವಾಗಿದೆ. ಮತಗಟ್ಟೆಗೆ ಐವರು ಕಾರ್ಯಕರ್ತೆಯರಂತೆ, ರಾಜ್ಯದ 51,178 ಬೂತ್ಗಳಲ್ಲಿ 11,635 ಮಂದಿಯನ್ನು ಮೋರ್ಚಾದಿಂದ ಸಜ್ಜುಗೊಳಿಸಲಾಗುತ್ತಿದೆ. ಇದಕ್ಕಾಗಿ ರಾಜ್ಯದಾದ್ಯಂತ ಕಾರ್ಯಾಗಾರ ನಡೆಸಲಾಗುತ್ತಿದೆ. ಇವರು, ಕೇಂದ್ರದ ಯೋಜನೆಗಳ ಫಲಾನುಭವಿ ಮಹಿಳೆಯರನ್ನು ಸಂಪರ್ಕಿಸುತ್ತಾರೆ. ಪ್ರಚಾರ ಮಾಡುತ್ತಾರೆ. ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಕೊಡಿಸುತ್ತಾರೆ. ಇದಕ್ಕಾಗಿ ಕಮಲ ಶಕ್ತಿ ಹಾಗೂ ಕಮಲ ಜ್ಯೋತಿ ಅಭಿಯಾನ ನಡೆಸಲಾಗುತ್ತಿದೆ. ಸೈನಿಕರ ರೀತಿಯಲ್ಲಿ ಕೆಲಸ ಮಾಡಿ, ಬಿಜೆಪಿ ಸರ್ಕಾರದ ಅವಶ್ಯಕತೆಯನ್ನು ಜನರಿಗೆ ಮನವರಿಕೆ ಮಾಡಿಕೊಡಲಿದ್ದೇವೆ’ ಎಂದರು.