ಪೊಲೀಸ್ ಇನ್ಸ್ಪೆಕ್ಟರ್ ಅವರ ನೋಟಿಸ್ ಉಲ್ಲೇಖಿಸಿ ದೇವಸ್ಥಾನದ ಪ್ರಧಾನ ಅರ್ಚಕರಿಗೆ ಜ್ಞಾಪನ ಪತ್ರ ನೀಡಿರುವ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ‘ದೇವಸ್ಥಾನಗಳಲ್ಲಿ ಮಹಾ ಮಂಗಳಾರತಿ, ಅಭಿಷೇಕ ಇತ್ಯಾದಿ ಸಂದರ್ಭಗಳಲ್ಲಿ ಹಾಗೂ ದೇವಾಲಯದ ಆವರಣದಲ್ಲಿ ಉಪಯೋಗಿಸುವ ಢಮರುಗ, ಧ್ವನಿವರ್ಧಕ ಯಂತ್ರಗಳಿಂದ ನಿಗದಿತ ಮಿತಿಗಿಂತ ಹೆಚ್ಚು ಧ್ವನಿ ಹೊರಡಿಸಬಾರದು’ ಎಂದೂ ಸೂಚಿಸಿದ್ದಾರೆ.