<p><strong>ಹುಬ್ಬಳ್ಳಿ</strong>: ‘ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯಿಂದ ಕರ್ನಾಟಕವು ಕೇರಳ ಮಾದರಿ ಅನುಸರಿಸುತ್ತಿದ್ದು, ಲವ್ ಜಿಹಾದ್ ಪ್ರಕರಣ ಹೆಚ್ಚುತ್ತಿವೆ. ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.</p>.<p>‘ಕೊಲೆಗಡುಕರಿಗೆ ರಾಜ್ಯ ಸರ್ಕಾರ ಪರೋಕ್ಷವಾಗಿ ಸಹಕರಿಸುತ್ತಿದೆ. ಹಿಂದೂ ಯುವತಿಯರಿಗೆ ಭಯಗ್ರಸ್ಥ ವಾತಾವರಣ ನಿರ್ಮಾಣವಾಗಿದೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಕೊಲೆಗಡುಕರ ಬಂಧನಕ್ಕೆ ರಾಜ್ಯ ಸರ್ಕಾರ ನೂರು ಸಲ ಯೋಚಿಸುತ್ತದೆ. ಲವ್ ಜಿಹಾದ್ನಲ್ಲಿ ತಪ್ಪಿತಸ್ಥರನ್ನು ಒಳಗೆ ಹಾಕಬೇಕೆಂದರೆ ಅಲ್ಪಸಂಖ್ಯಾತರಿಗೆ ನೋವು ಆಗುವುದೆಂದು ಭಾವಿಸುತ್ತದೆ’ ಎಂದರು.</p>.<p>ಬಿಜೆಪಿ ನಾಯಕ ಸಿ.ಟಿ.ರವಿ ಮಾತನಾಡಿ, ‘ರಾಜ್ಯದಲ್ಲಿ ಲವ್ ಜಿಹಾದ್ ವ್ಯವಸ್ಥಿತ, ಯೋಜನಾಬದ್ಧವಾಗಿ ನಡೆದಿದೆ. ಇದರ ಜಾಡು ಪತ್ತೆಗೆ ರಾಜ್ಯ ಸರ್ಕಾರ ಪ್ರತ್ಯೇಕ ಎಸ್ಐಟಿ ರಚಿಸಿ, ತನಿಖೆ ನಡೆಸಬೇಕು’ ಎಂದರು.</p>.<p>‘ಔರಂಗಜೇಬನ ಕಾಲದಲ್ಲಿ ಪ್ರಾಣ ಬೆದರಿಕೆಯೊಡ್ಡಿ ಹಿಂದೂಗಳನ್ನು ಮತಾಂತರ ಮಾಡಲಾಗುತ್ತಿತ್ತು. ಈಗ ಪ್ರೀತಿ ನೆಪದಲ್ಲಿ ಮಾಡಲಾಗುತ್ತಿದೆ. ಲವ್ ಜಿಹಾದ್, ಲ್ಯಾಂಡ್ ಜಿಹಾದ್ (ಭೂ ಕಬಳಿಕೆ) ಹಾಗೂ ವೋಟ್ ಜಿಹಾದ್ ಮಾಡಲಾಗುತ್ತಿದೆ. ಇದೆಲ್ಲವನ್ನೂ ಒಳಗೊಂಡಂತೆ ಸಮಗ್ರ ತನಿಖೆಯಾಗಬೇಕು’ ಎಂದು ಅವರು ಆಗ್ರಹಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯಿಂದ ಕರ್ನಾಟಕವು ಕೇರಳ ಮಾದರಿ ಅನುಸರಿಸುತ್ತಿದ್ದು, ಲವ್ ಜಿಹಾದ್ ಪ್ರಕರಣ ಹೆಚ್ಚುತ್ತಿವೆ. ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.</p>.<p>‘ಕೊಲೆಗಡುಕರಿಗೆ ರಾಜ್ಯ ಸರ್ಕಾರ ಪರೋಕ್ಷವಾಗಿ ಸಹಕರಿಸುತ್ತಿದೆ. ಹಿಂದೂ ಯುವತಿಯರಿಗೆ ಭಯಗ್ರಸ್ಥ ವಾತಾವರಣ ನಿರ್ಮಾಣವಾಗಿದೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಕೊಲೆಗಡುಕರ ಬಂಧನಕ್ಕೆ ರಾಜ್ಯ ಸರ್ಕಾರ ನೂರು ಸಲ ಯೋಚಿಸುತ್ತದೆ. ಲವ್ ಜಿಹಾದ್ನಲ್ಲಿ ತಪ್ಪಿತಸ್ಥರನ್ನು ಒಳಗೆ ಹಾಕಬೇಕೆಂದರೆ ಅಲ್ಪಸಂಖ್ಯಾತರಿಗೆ ನೋವು ಆಗುವುದೆಂದು ಭಾವಿಸುತ್ತದೆ’ ಎಂದರು.</p>.<p>ಬಿಜೆಪಿ ನಾಯಕ ಸಿ.ಟಿ.ರವಿ ಮಾತನಾಡಿ, ‘ರಾಜ್ಯದಲ್ಲಿ ಲವ್ ಜಿಹಾದ್ ವ್ಯವಸ್ಥಿತ, ಯೋಜನಾಬದ್ಧವಾಗಿ ನಡೆದಿದೆ. ಇದರ ಜಾಡು ಪತ್ತೆಗೆ ರಾಜ್ಯ ಸರ್ಕಾರ ಪ್ರತ್ಯೇಕ ಎಸ್ಐಟಿ ರಚಿಸಿ, ತನಿಖೆ ನಡೆಸಬೇಕು’ ಎಂದರು.</p>.<p>‘ಔರಂಗಜೇಬನ ಕಾಲದಲ್ಲಿ ಪ್ರಾಣ ಬೆದರಿಕೆಯೊಡ್ಡಿ ಹಿಂದೂಗಳನ್ನು ಮತಾಂತರ ಮಾಡಲಾಗುತ್ತಿತ್ತು. ಈಗ ಪ್ರೀತಿ ನೆಪದಲ್ಲಿ ಮಾಡಲಾಗುತ್ತಿದೆ. ಲವ್ ಜಿಹಾದ್, ಲ್ಯಾಂಡ್ ಜಿಹಾದ್ (ಭೂ ಕಬಳಿಕೆ) ಹಾಗೂ ವೋಟ್ ಜಿಹಾದ್ ಮಾಡಲಾಗುತ್ತಿದೆ. ಇದೆಲ್ಲವನ್ನೂ ಒಳಗೊಂಡಂತೆ ಸಮಗ್ರ ತನಿಖೆಯಾಗಬೇಕು’ ಎಂದು ಅವರು ಆಗ್ರಹಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>