ರಾಜ್ಯ ಸರ್ಕಾರದ ಸಾಲದ ಕುರಿತು ಕೆಣಕಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ‘ಅಶೋಕ ಅವರೇ, ಯಾಕೆ ನಮ್ಮ ಕೈಯಲ್ಲಿ ಬಡಿಗೆ ಕೊಟ್ಟು ಬಡಿಸಿಕೊಳ್ಳುತ್ತೀರಿ? ರಾಜ್ಯ ಸರ್ಕಾರದ ಸಾಲದ ಲೆಕ್ಕ ಹೇಳಿದ್ದೀರಿ, ಮೋದಿ ನೇತೃತ್ವದ ನಿಮ್ಮದೇ ಪಕ್ಷದ ಸರ್ಕಾರದ ಸಾಲದ ಕತೆಯನ್ನು ಸ್ವಲ್ಪ ಹೇಳಿ ಬಿಡಿ. ನೀವು ಮರೆತಿದ್ದರೆ ನಾನು ಹೇಳುತ್ತೇನೆ ಕೇಳಿ’ ಎಂದು ಕುಟುಕಿದ್ದಾರೆ.