‘ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ವಿಷಯ ಬಂದಾಗ ನನ್ನ ಹೆಸರು ಮುಂಚೂಣಿಗೆ ಬಂದಿತ್ತು. ಟಿಕೆಟ್ ಪಡೆದುಕೊಳ್ಳಲು ಪ್ರಯತ್ನವೂ ನಡೆದಿತ್ತು. ಆದರೂ ಬೇರೊಬ್ಬರಿಗೆ ಟಿಕೆಟ್ ನೀಡಲಾಗಿದೆ. ಪರಿಶಿಷ್ಟ ಜಾತಿ ಅದರಲ್ಲೂ ಮಾದಿಗ ಸಮುದಾಯದಲ್ಲಿರುವ ಪ್ರತಿಭಾವಂತರನ್ನು ಈ ರೀತಿ ಕಾಂಗ್ರೆಸ್ ನಿರ್ಲಕ್ಷಿಸುವುದು ಸರಿಯಲ್ಲ ಎಂದು ಸಭೆಯಲ್ಲಿ ಚರ್ಚೆ ನಡೆಯಿತು. ಕಾಂಗ್ರೆಸ್ನಿಂದ ಆಗಿರುವ ತಾರತಮ್ಯ, ಅನ್ಯಾಯದ ಮಧ್ಯೆಯೂ, ಸಮುದಾಯದ ಮತಗಳು ಇತರ ಪಕ್ಷಗಳಿಗೆ ಚದುರಿ ಹೋಗದೆ ಕಾಂಗ್ರೆಸ್ನ್ನು ಬೆಂಬಲಿಸಬೇಕು ಎಂದು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ’ ಎಂದು ಎಲ್. ಹನುಮಂತಯ್ಯ ತಿಳಿಸಿದರು.