ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು..?

Published 25 ಮಾರ್ಚ್ 2024, 14:35 IST
Last Updated 25 ಮಾರ್ಚ್ 2024, 14:35 IST
ಅಕ್ಷರ ಗಾತ್ರ
ಯುವಕರಿಗೆ ಎರಡು ಕೋಟಿ ಉದ್ಯೋಗ ಕೊಡುವುದಾಗಿ ಹೇಳಿ ಪ್ರಧಾನಿ ನರೇಂದ್ರ ಮೋದಿ ಮಾತು ತಪ್ಪಿದ್ದಾರೆ. ಉದ್ಯೋಗ ಕೊಡಿ ಎಂದು ಕೇಳಿದರೆ ಪಕೋಡಾ ಮಾರಲು ಹೋಗಿ ಎಂದಿದ್ದಾರೆ. ಈಗಲೂ ಯುವಕರು ಹಾಗೂ ವಿದ್ಯಾರ್ಥಿಗಳು ಮೋದಿ ಮೋದಿ ಎಂದರೆ ಅವರನ್ನು ಕಪಾಳಕ್ಕೆ ಹೊಡೆಯಬೇಕು
–ಶಿವರಾಜ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ 
ಶಿವರಾಜ ತಂಗಡಗಿ ಅವರು ಸಂಸ್ಕಾರವಿಲ್ಲದ ಸಂಸ್ಕೃತಿ ಸಚಿವರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಗೌರವಿಸಿ ಮಾತನಾಡಬೇಕೆನ್ನುವ ಕನಿಷ್ಠ ಸಂಸ್ಕಾರವಿಲ್ಲದ ತಂಗಡಗಿಯವರು ಅವರ ಬಗ್ಗೆ ತುಚ್ಛ ಭಾಷೆ ಬಳಸಿರುವುದು ಖಂಡನಾರ್ಹ
–ಭಗವಂತ ಖೂಬಾ, ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ 
ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಯುವ ಪಡೆಗೆ ಕಪಾಳ ಮೋಕ್ಷ ಮಾಡುವ ಶಕ್ತಿ  ‘ಕೈ’ಗೆ ಇದೆಯೇ? ದೇಶದ ಪ್ರಧಾನಿಯನ್ನು ಹೇಗೆ ಗೌರವಿಸಬೇಕು ಎಂಬ ಸೌಜನ್ಯ ಕಾಂಗ್ರೆಸ್ ನಾಯಕರಿಗೆ ಇಲ್ಲ. ಉಡಾಫೆಯಿಂದ ಮಾತನಾಡುತ್ತಾರೆ. ಇಂಥ ಅಸಹನೀಯ ಪದ ಬಳಕೆಗೆ ಯುವ ಪಡೆಯೇ ಉತ್ತರ ಕೊಡುವ ಸಮಯ ದೂರವಿಲ್ಲ
–ಪ್ರಲ್ಹಾದ ಜೋಶಿ, ಕೇಂದ್ರ ಸಚಿವ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT