ಪ್ರಕರಣವೇನು?: ರಾಜರಾಜೇಶ್ವರಿ ನಗರದ ಅಪಾರ್ಟ್ಮೆಂಟ್ ನಿವಾಸಿಗಳೊಂದಿಗೆ ಚುನಾವಣಾ ಪ್ರಚಾರ ಸಭೆ ನಡೆಸಿದ್ದ ಡಿ.ಕೆ.ಶಿವಕುಮಾರ್, ‘ಅಪಾರ್ಟ್ಮೆಂಟ್ಗೆ ಸಿಎ ನಿವೇಶನ ನೀಡಬೇಕು ಹಾಗೂ ಕಾವೇರಿ ನೀರು ಒದಗಿಸಬೇಕು ಎಂದು ನಿವಾಸಿಗಳು ಬೇಡಿಕೆಯಿಟ್ಟಿದ್ದಾರೆ. ಕಾಂಗ್ರೆಸ್ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ (ಡಿ.ಕೆ.ಸುರೇಶ್) ಮತ ನೀಡಿದರೆ ನಿಮ್ಮ ಬೇಡಿಕೆಯನ್ನು ಎರಡು ಮೂರು ತಿಂಗಳಲ್ಲಿ ಈಡೇರಿಸುತ್ತೇನೆ. ಇಲ್ಲವಾದರೆ ನನ್ನನ್ನು ಏನೂ ಕೇಳಬೇಡಿ’ ಎಂದು ಮಾತನಾಡಿದ್ದ ವಿಡಿಯೊ ತುಣುಕು ಬಹಿರಂಗವಾಗಿತ್ತು.