<p><strong>ಬೆಂಗಳೂರು</strong>: ಕೋರ್ಟ್ ನಿರ್ದೇಶನ, ಸಂಪುಟ ಸಭೆಯ ನಿರ್ಣಯದಂತೆ ಕಾನೂನಿಗೆ ಅನುಸಾರವಾಗಿ ಜಿಂದಾಲ್ ಉಕ್ಕು ಕಂಪನಿಗೆ 3,677 ಎಕರೆ ಗುತ್ತಿಗೆ ನೀಡಲಾಗಿದೆ. ಹಾಗೆ ಮಾಡದಿದ್ದಲ್ಲಿ, ಬಂಡವಾಳ ಹೂಡಿಕೆದಾರರಿಗೆ ತಪ್ಪು ಸಂದೇಶ ರವಾನೆಯಾಗುತ್ತಿತ್ತು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಹೇಳಿದರು.</p>.<p>ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, ಹಿಂದೆ ಇದ್ದ ಮಾರುಕಟ್ಟೆ ಬೆಲೆಗೆ ಅನುಗುಣವಾಗಿ ನೀಡಲಾಗಿದೆ. ಕಂಪನಿ ಸರ್ಕಾರದ ಷರತ್ತುಗಳನ್ನು ಪಾಲಿಸಿದೆ. ರಾಜ್ಯದ ಕೈಗಾರಿಕೆಗಳಿಗೆ ಅನುಸರಿಸುವ ನಿಯಮಗಳನ್ನೇ ಜಿಂದಾಲ್ಗೂಗೂ ಅನ್ವಯಿಸಲಾಗಿದೆ. ವಾಸ್ತವವಾಗಿ ಒಂಬತ್ತು ವರ್ಷಗಳು ವಿಳಂಬವಾಗಿದೆ’ ಎಂದರು.</p>.<p>ರಾಜ್ಯದಲ್ಲಿ ಜಿಂದಾಲ್ ಕಂಪನಿ ₹90 ಸಾವಿರ ಕೋಟಿ ಹೂಡಿಕೆ ಮಾಡಿದೆ, 50 ಸಾವಿರ ಉದ್ಯೋಗ ಕೊಟ್ಟಿದೆ. ಸರ್ಕಾರ ನೀಡಿದ ಜಮೀನಿನಲ್ಲಿ ಶೇ 51ರಷ್ಟನ್ನು 10 ವರ್ಷಗಳಲ್ಲಿ ಬಳಸಿಕೊಂಡಿದೆ. ಹಾಗಾಗಿ, ಕೈಗಾರಿಕಾ ನೀತಿಯಂತೆ ಗುತ್ತಿಗೆ ಮಾರಾಟ ಮಾಡಲಾಗಿದೆ ಎಂದು ಹೇಳಿದರು.</p>.<p>‘ಕೈಗಾರಿಕಾ ಕ್ಷೇತ್ರದಲ್ಲಿ ತಮಿಳುನಾಡು, ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶ ಮತ್ತು ತೆಲಂಗಾಣಗಳ ಜೊತೆಗೆ ಪೈಪೋಟಿ ಎದುರಿಸುತ್ತಿದ್ದೇವೆ. ಕೆಲ ರಾಜ್ಯಗಳು ಉಚಿತವಾಗಿ ಭೂಮಿ ಕೊಡುತ್ತಿವೆ. ಹಿಂದೆ ಜಿಂದಾಲ್ ಕಂಪನಿಗೆ ಭೂಮಿ ನೀಡಲು ವಿರೋಧಿಸಿರಲಿಲ್ಲ, ಜನಾರ್ದನ ರೆಡ್ಡಿ ವಿರುದ್ಧವಷ್ಟೇ ಧ್ವನಿ ಎತ್ತಲಾಗಿತ್ತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋರ್ಟ್ ನಿರ್ದೇಶನ, ಸಂಪುಟ ಸಭೆಯ ನಿರ್ಣಯದಂತೆ ಕಾನೂನಿಗೆ ಅನುಸಾರವಾಗಿ ಜಿಂದಾಲ್ ಉಕ್ಕು ಕಂಪನಿಗೆ 3,677 ಎಕರೆ ಗುತ್ತಿಗೆ ನೀಡಲಾಗಿದೆ. ಹಾಗೆ ಮಾಡದಿದ್ದಲ್ಲಿ, ಬಂಡವಾಳ ಹೂಡಿಕೆದಾರರಿಗೆ ತಪ್ಪು ಸಂದೇಶ ರವಾನೆಯಾಗುತ್ತಿತ್ತು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಹೇಳಿದರು.</p>.<p>ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, ಹಿಂದೆ ಇದ್ದ ಮಾರುಕಟ್ಟೆ ಬೆಲೆಗೆ ಅನುಗುಣವಾಗಿ ನೀಡಲಾಗಿದೆ. ಕಂಪನಿ ಸರ್ಕಾರದ ಷರತ್ತುಗಳನ್ನು ಪಾಲಿಸಿದೆ. ರಾಜ್ಯದ ಕೈಗಾರಿಕೆಗಳಿಗೆ ಅನುಸರಿಸುವ ನಿಯಮಗಳನ್ನೇ ಜಿಂದಾಲ್ಗೂಗೂ ಅನ್ವಯಿಸಲಾಗಿದೆ. ವಾಸ್ತವವಾಗಿ ಒಂಬತ್ತು ವರ್ಷಗಳು ವಿಳಂಬವಾಗಿದೆ’ ಎಂದರು.</p>.<p>ರಾಜ್ಯದಲ್ಲಿ ಜಿಂದಾಲ್ ಕಂಪನಿ ₹90 ಸಾವಿರ ಕೋಟಿ ಹೂಡಿಕೆ ಮಾಡಿದೆ, 50 ಸಾವಿರ ಉದ್ಯೋಗ ಕೊಟ್ಟಿದೆ. ಸರ್ಕಾರ ನೀಡಿದ ಜಮೀನಿನಲ್ಲಿ ಶೇ 51ರಷ್ಟನ್ನು 10 ವರ್ಷಗಳಲ್ಲಿ ಬಳಸಿಕೊಂಡಿದೆ. ಹಾಗಾಗಿ, ಕೈಗಾರಿಕಾ ನೀತಿಯಂತೆ ಗುತ್ತಿಗೆ ಮಾರಾಟ ಮಾಡಲಾಗಿದೆ ಎಂದು ಹೇಳಿದರು.</p>.<p>‘ಕೈಗಾರಿಕಾ ಕ್ಷೇತ್ರದಲ್ಲಿ ತಮಿಳುನಾಡು, ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶ ಮತ್ತು ತೆಲಂಗಾಣಗಳ ಜೊತೆಗೆ ಪೈಪೋಟಿ ಎದುರಿಸುತ್ತಿದ್ದೇವೆ. ಕೆಲ ರಾಜ್ಯಗಳು ಉಚಿತವಾಗಿ ಭೂಮಿ ಕೊಡುತ್ತಿವೆ. ಹಿಂದೆ ಜಿಂದಾಲ್ ಕಂಪನಿಗೆ ಭೂಮಿ ನೀಡಲು ವಿರೋಧಿಸಿರಲಿಲ್ಲ, ಜನಾರ್ದನ ರೆಡ್ಡಿ ವಿರುದ್ಧವಷ್ಟೇ ಧ್ವನಿ ಎತ್ತಲಾಗಿತ್ತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>