<p><strong>ಉಡುಪಿ:</strong> ‘ಸುಭದ್ರ ಸರ್ಕಾರ ನೀಡಲು ಪ್ರಯತ್ನಿಸಬೇಕು. ಅಧಿಕಾರ ಹಂಚಿಕೆ ಸಾರ್ವಜನಿಕ ಚರ್ಚೆಯ ವಸ್ತು ಆಗಬಾರದು’ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ಸೋಮವಾರ ಇಲ್ಲಿ ಹೇಳಿದರು.</p>.<p>ಕಾರ್ಕಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅನಿವಾರ್ಯತೆ, ಅವಶ್ಯಕತೆ ಇದ್ದರೆ ಹೈಕಮಾಂಡ್ ತೀರ್ಮಾನಿಸಬೇಕೇ ಹೊರತು ಸಾರ್ವಜನಿಕವಾಗಿ ಚರ್ಚೆ ಸರಿಯಲ್ಲ’ ಎಂದು ಹೇಳಿದರು. </p>.<p>‘ಏನೇ ಕೋಪವಿದ್ದರೂ ಸಂಪುಟ ಸಭೆ ನಿರಾತಂಕವಾಗಿ ನಡೆಯುತ್ತಿದೆ. ಸರ್ಕಾರದ ಕಾರ್ಯಕ್ರಮಗಳು ಅನುಷ್ಠಾನ ಆಗುತ್ತಿವೆ. ನಮಗೆ ಬೇಕಾಗಿರುವುದು ಅಷ್ಟೇ. ಅವರು ಪರಸ್ಪರ ಅಪ್ಪಿಕೊಳ್ಳಲಿ ಅಥವಾ ಮುನಿಸಿಕೊಳ್ಳಲಿ ಜನರಿಗೆ ಬೇಕಾದದ್ದು ಉತ್ತಮ ಆಡಳಿತ’ ಎಂದು ತಿಳಿಸಿದರು.</p>.<p>‘ಸಚಿವರಾಗಬೇಕು ಎಂದು ಹಂಬಲಿಸುವವರು ಇರುತ್ತಾರೆ. ಮುಖ್ಯಮಂತ್ರಿ ಆಗಬೇಕು ಎಂದು ಹಂಬಲಿಸುವುದು ತಪ್ಪಲ್ಲ, ಆದರೆ ಅದು ಸಾರ್ವಜನಿಕ ಚರ್ಚೆಯ ವಸ್ತು ಆಗಲೇಬಾರದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ‘ಸುಭದ್ರ ಸರ್ಕಾರ ನೀಡಲು ಪ್ರಯತ್ನಿಸಬೇಕು. ಅಧಿಕಾರ ಹಂಚಿಕೆ ಸಾರ್ವಜನಿಕ ಚರ್ಚೆಯ ವಸ್ತು ಆಗಬಾರದು’ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ಸೋಮವಾರ ಇಲ್ಲಿ ಹೇಳಿದರು.</p>.<p>ಕಾರ್ಕಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅನಿವಾರ್ಯತೆ, ಅವಶ್ಯಕತೆ ಇದ್ದರೆ ಹೈಕಮಾಂಡ್ ತೀರ್ಮಾನಿಸಬೇಕೇ ಹೊರತು ಸಾರ್ವಜನಿಕವಾಗಿ ಚರ್ಚೆ ಸರಿಯಲ್ಲ’ ಎಂದು ಹೇಳಿದರು. </p>.<p>‘ಏನೇ ಕೋಪವಿದ್ದರೂ ಸಂಪುಟ ಸಭೆ ನಿರಾತಂಕವಾಗಿ ನಡೆಯುತ್ತಿದೆ. ಸರ್ಕಾರದ ಕಾರ್ಯಕ್ರಮಗಳು ಅನುಷ್ಠಾನ ಆಗುತ್ತಿವೆ. ನಮಗೆ ಬೇಕಾಗಿರುವುದು ಅಷ್ಟೇ. ಅವರು ಪರಸ್ಪರ ಅಪ್ಪಿಕೊಳ್ಳಲಿ ಅಥವಾ ಮುನಿಸಿಕೊಳ್ಳಲಿ ಜನರಿಗೆ ಬೇಕಾದದ್ದು ಉತ್ತಮ ಆಡಳಿತ’ ಎಂದು ತಿಳಿಸಿದರು.</p>.<p>‘ಸಚಿವರಾಗಬೇಕು ಎಂದು ಹಂಬಲಿಸುವವರು ಇರುತ್ತಾರೆ. ಮುಖ್ಯಮಂತ್ರಿ ಆಗಬೇಕು ಎಂದು ಹಂಬಲಿಸುವುದು ತಪ್ಪಲ್ಲ, ಆದರೆ ಅದು ಸಾರ್ವಜನಿಕ ಚರ್ಚೆಯ ವಸ್ತು ಆಗಲೇಬಾರದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>