<p><strong>ಕಲಬುರ್ಗಿ: </strong>ಶನಿವಾರ ರಾತ್ರಿ ನಿಧನರಾಗಿದ್ದ ಸೇಡಂ ತಾಲ್ಲೂಕಿನ ಯಾನಾಗುಂದಿಯ ರೂಪರಹಿತ ಅಹಿಂಸಾ ಯೋಗೀಶ್ವರ ವೀರಧರ್ಮಜ ಪೀಠದ ಮಾತೆ ಮಾಣಿಕೇಶ್ವರಿ ಅವರ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಣಿಕ್ಯಗಿರಿಯ ಆಶ್ರಮದ ಆವರಣದಲ್ಲಿ ಸೋಮವಾರ ಮಧ್ಯಾಹ್ನ ನೆರವೇರಿತು.</p>.<p>ಸರ್ಕಾರದ ಪರವಾಗಿ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಭಾಗವಹಿಸಿ ಮಾಣಿಕೇಶ್ವರಿ ಅಮ್ಮನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಮಧ್ಯಾಹ್ನ 1 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಅಪಾರ ಸಂಖ್ಯೆಯ ಭಕ್ತರು ಉರಿ ಬಿಸಿಲು, ಝಳವನ್ನೂ ಲೆಕ್ಕಿಸದೇ ಮಾಣಿಕ್ಯಗಿರಿಯತ್ತ ಬರುತ್ತಲೇ ಇದ್ದುದನ್ನು ಗಮನಿಸಿದ ಆಶ್ರಮದ ಆಡಳಿತ ಮಂಡಳಿಯವರು ಮತ್ತೆ ಒಂದು ಗಂಟೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದರು.</p>.<p>ಆಶ್ರಮದಲ್ಲಿ ಈ ಮೊದಲೇ ನಿರ್ಮಿಸಿದ್ದ ಗುಹೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಕರ್ನಾಟಕ, ತೆಲಂಗಾಣ ಹಾಗೂ ಆಂಧ್ರ<br />ಪ್ರದೇಶದಿಂದ ಬಂದಿದ್ದ ಸ್ವಾಮೀಜಿಗಳು ವಿಧಿವಿಧಾನ ನೆರವೇರಿಸಿದರು. ಬಂದ ಭಕ್ತರಿಗೆ ಆಶ್ರಮದ ಆವರಣದಲ್ಲಿ ಅನ್ನಸಂತರ್ಪಣೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಶನಿವಾರ ರಾತ್ರಿ ನಿಧನರಾಗಿದ್ದ ಸೇಡಂ ತಾಲ್ಲೂಕಿನ ಯಾನಾಗುಂದಿಯ ರೂಪರಹಿತ ಅಹಿಂಸಾ ಯೋಗೀಶ್ವರ ವೀರಧರ್ಮಜ ಪೀಠದ ಮಾತೆ ಮಾಣಿಕೇಶ್ವರಿ ಅವರ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಣಿಕ್ಯಗಿರಿಯ ಆಶ್ರಮದ ಆವರಣದಲ್ಲಿ ಸೋಮವಾರ ಮಧ್ಯಾಹ್ನ ನೆರವೇರಿತು.</p>.<p>ಸರ್ಕಾರದ ಪರವಾಗಿ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಭಾಗವಹಿಸಿ ಮಾಣಿಕೇಶ್ವರಿ ಅಮ್ಮನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಮಧ್ಯಾಹ್ನ 1 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಅಪಾರ ಸಂಖ್ಯೆಯ ಭಕ್ತರು ಉರಿ ಬಿಸಿಲು, ಝಳವನ್ನೂ ಲೆಕ್ಕಿಸದೇ ಮಾಣಿಕ್ಯಗಿರಿಯತ್ತ ಬರುತ್ತಲೇ ಇದ್ದುದನ್ನು ಗಮನಿಸಿದ ಆಶ್ರಮದ ಆಡಳಿತ ಮಂಡಳಿಯವರು ಮತ್ತೆ ಒಂದು ಗಂಟೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದರು.</p>.<p>ಆಶ್ರಮದಲ್ಲಿ ಈ ಮೊದಲೇ ನಿರ್ಮಿಸಿದ್ದ ಗುಹೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಕರ್ನಾಟಕ, ತೆಲಂಗಾಣ ಹಾಗೂ ಆಂಧ್ರ<br />ಪ್ರದೇಶದಿಂದ ಬಂದಿದ್ದ ಸ್ವಾಮೀಜಿಗಳು ವಿಧಿವಿಧಾನ ನೆರವೇರಿಸಿದರು. ಬಂದ ಭಕ್ತರಿಗೆ ಆಶ್ರಮದ ಆವರಣದಲ್ಲಿ ಅನ್ನಸಂತರ್ಪಣೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>