‘ದೂರು ನೀಡಿದರೆಂಬ ಕಾರಣಕ್ಕೆ, ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಕೆಲವರು, ನನ್ನ ಹಾಗೂ ನನ್ನ ಮಗನನ್ನು ಹಿಂಬಾಲಿಸುತ್ತಿರುವುದು ಕಂಡುಬಂದಿದೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದ್ದು, ಸೂಕ್ತ ರಕ್ಷಣೆ ನೀಡಿ. ಯಾವುದೇ ಅನಾಹುತವಾದರೂ ಅದಕ್ಕೆ ಮಾಡಾಳ್ ವಿರೂಪಾಕ್ಷಪ್ಪ, ಮಹೇಶ್, ಉಮಾಶಂಕರ್ ಹಾಗೂ ಇತರರು ಕಾರಣ’ ಎಂದೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.