<p><strong>ಬೆಂಗಳೂರು</strong>: ಶಾಲೆಗಳಲ್ಲಿ ಶೇ 90 ರಷ್ಟು ವಿದ್ಯಾರ್ಥಿಗಳು ಯಾವ ಧರ್ಮಕ್ಕೆ ಸೇರಿರುತ್ತಾರೋ ಆ ಧರ್ಮದ ಅಂಶಗಳನ್ನು ಒಳಗೊಂಡ ನೈತಿಕ ಪಾಠವನ್ನು ಮುಂದಿನ ವರ್ಷದಿಂದ ಬೋಧಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮುಂಬರುವ ಶೈಕ್ಷಣಿಕ ವರ್ಷದಿಂದ ಪಂಚತಂತ್ರ, ರಾಮಾಯಣ, ಮಹಾಭಾರತ, ಭಗವದ್ಗೀತೆ ಅಲ್ಲದೆ, ಎಲ್ಲ ಧರ್ಮಗಳ ಉತ್ತಮ ಅಂಶಗಳನ್ನು ಒಳಗೊಂಡ ನೈತಿಕ ಶಿಕ್ಷಣವನ್ನು ಶಾಲೆಗಳಲ್ಲಿ ಪರಿಚಯಿಸಲಾಗುವುದು ಎಂದರು.</p>.<p>‘ಯಾವ ಧರ್ಮದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಶಾಲೆಗಳಿಗೆ ಬರುತ್ತಾರೋ ಆ ಮಕ್ಕಳು ಕೇಳುವ ವಿಚಾರಗಳನ್ನು ಅಳವಡಿಸುತ್ತೇವೆ.ಯಾವುದನ್ನೆಲ್ಲ ಸೇರಿಸಬೇಕು ಎಂಬುದನ್ನು ತಜ್ಞರ ಸಮಿತಿ ನಿರ್ಣಯಿಸುತ್ತದೆ’ ಎಂದರು.</p>.<p>ರಾಜ್ಯದ ಮದರಸಾಗಳಲ್ಲೂ ಆಧುನಿಕ ಶಿಕ್ಷಣವನ್ನು ನೀಡಬೇಕು ಎಂಬ ಬೇಡಿಕೆ ಪೋಷಕರಿಂದ ಬಂದಿದೆ. ಇಲ್ಲಿ ಓದಿದ ಮಕ್ಕಳಿಗೆ ಉದ್ಯೋಗ ಮತ್ತಿತರ ಕಡೆಗಳಲ್ಲಿ ಸ್ಪರ್ಧೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಪೋಷಕರು ಹೇಳಿದ್ದಾರೆ ಹೇಳಿದರು.</p>.<p>‘ಆಧುನಿಕ ಶಿಕ್ಷಣ ಆರಂಭಿಸಬೇಕು ಎಂಬ ಬಗ್ಗೆ ಮದರಸಾ ಅಥವಾ ಇತರ ಸಂಸ್ಥೆಗಳಿಂದಾಗಲೀ ಪ್ರಸ್ತಾವನೆ ಬಂದಿಲ್ಲ. ಪೋಷಕರೂ ಮನವಿ ಸಲ್ಲಿಸಿಲ್ಲ. ನಾನು ರಾಜ್ಯದ ವಿವಿಧಡೆ ಭೇಟಿ ನೀಡಿದಾಗ ಪೋಷಕರು ತಾವಾಗಿಯೇ ಆಧುನಿಕ ಶಿಕ್ಷಣದ ಅಗತ್ಯವನ್ನು ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಅಧಿಕೃತ ಬೇಡಿಕೆ ಬಂದರೆ ಮಾತ್ರ ಪರಿಶೀಲನೆ ನಡೆಸುತ್ತೇವೆ’ ಎಂದು ನಾಗೇಶ್ ಸ್ಪಷ್ಟಪಡಿಸಿದರು.</p>.<p class="Subhead">1 ನೇ ತರಗತಿಗೆ ಎನ್ಇಪಿ</p>.<p>ಜೂನ್ನಿಂದ 1 ಮತ್ತು 2ನೇ ತರಗತಿ ಮಕ್ಕಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ತರಗತಿಗಳು ನಡೆಯಲಿವೆ. ಕಲಿಕಾ ವಿಧಾನಗಳು ಭಿನ್ನವಾಗಿರುತ್ತವೆ. ಹಾಡು ಮತ್ತು ಕಥೆಗಳ ಮೂಲಕ ಬೋಧನೆ ಮಾಡಲಾಗುತ್ತದೆ ಎಂದೂ ಹೇಳಿದರು.</p>.<p><strong>‘ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ’</strong></p>.<p><strong>ಬೆಂಗಳೂರು: ‘ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಉನ್ನತ ಶಿಕ್ಷಣದಲ್ಲಿ ‘ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ’ (ಎಲ್ಎಂಎಸ್) ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರಲಿದೆ’ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ ತಿಳಿಸಿದರು.</strong></p>.<p>ಎಲ್ಎಂಎಸ್ ಆಧಾರಿತ ಡಿಜಿಟಲ್ ಕಲಿಕೆಯ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ವ್ಯವಸ್ಥೆ ಸರ್ಕಾರಿ– ಖಾಸಗಿ ಕಾಲೇಜುಗಳು, ನಗರ– ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿನ ತಾರತಮ್ಯ ಹಾಗೂ ಡಿಜಿಟಲ್ ಅಂತರ ಅಳಿಸಿ ಹಾಕುವ ವಿಶ್ವಾಸವಿದೆ’ ಎಂದರು.</p>.<p>‘ವಿಷಯ ಸಂವಹನ, ವಿಷಯ ಲಭ್ಯತೆ ಮತ್ತು ಮೌಲ್ಯಮಾಪನದಲ್ಲಿ ಗುರುತರ, ಮಹತ್ವದ ಬದಲಾವಣೆಗಳನ್ನು ಈ ಕಲಿಕಾ ಪದ್ಧತಿ ತರಲಿದೆ. ಆ ಮೂಲಕ, ಬೋಧನೆ- ಕಲಿಕೆಗಳಲ್ಲಿ ಕ್ರಾಂತಿಕಾರಕ ಮುನ್ನಡೆಯನ್ನು ಸಾಧಿಸಬಲ್ಲ ಪರಿಣಾಮಕಾರಿ ವೇದಿಕೆಯಾಗಿದೆ. ಇದರಿಂದ ಎಲ್ಲ ವಿದ್ಯಾರ್ಥಿಗಳು ಸುಲಭವಾಗಿ ಕಲಿಯಬಹುದು, ಸಮಯವನ್ನು ಉಳಿಸಬಹುದು. ಕಲಿಕೆಯ ವಿವಿಧ ಅಂಶಗಳ ವೈಜ್ಞಾನಿಕ ವಿಶ್ಲೇಷಣೆ, ವಿದ್ಯಾರ್ಥಿಗಳು, ಅಧ್ಯಾಪಕರ ಮತ್ತು ಕಾಲೇಜುಗಳ ಹಿಂದಿನ ಮಾಹಿತಿ, ಕಂಟೆಂಟ್ ರೇಟಿಂಗ್, ವಿದ್ಯಾರ್ಥಿಗಳಿಂದ ಮತ್ತು ತರಗತಿಗಳಲ್ಲಿ ಅಧ್ಯಾಪಕರಿಂದ ಇ-ಕಂಟೆಂಟ್ ಬಳಕೆಯ ಟ್ರ್ಯಾಕಿಂಗ್, ಸಂಪೂರ್ಣ ವಿವರಗಳಿರುವ ವರದಿ ತಯಾರಿಕೆ ಇತ್ಯಾದಿಗಳಿಗೆ ಈ ಪದ್ಧತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ’ ಎಂದು ವಿವರಿಸಿದರು.</p>.<p>‘ಈ ತಂತ್ರಾಂಶದ ಮೂಲಕ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ, ಕಾಲೇಜು ಅರ್ಜಿ ಶುಲ್ಕ, ಪರೀಕ್ಷಾ ಶುಲ್ಕ ಸೇರಿದಂತೆ ಎಲ್ಲ ಶುಲ್ಕಗಳನ್ನು ಆನ್ ಲೈನ್ನಲ್ಲಿ ಪಾವತಿಸಲು ಅವಕಾಶ ನೀಡಿದೆ. ವಿಶ್ವವಿದ್ಯಾಲಯಗಳು ಪರೀಕ್ಷೆ ನಡೆಸಲು ಮಾಡುವ ವೆಚ್ಚವನ್ನೂ ಉಳಿಸಬಹುದಾಗಿದೆ’ ಎಂದೂ ಅವರು ವಿವರಿಸಿದರು.</p>.<p><br />ನವದೆಹಲಿ: ಶೈಕ್ಷಣಿಕ ಸಹಯೋಗದ ಮೂಲಕ ಭಾರತೀಯ ವಿದ್ಯಾರ್ಥಿಗಳು ವಿದೇಶಿ ವಿಶ್ವವಿದ್ಯಾಲಯಗಳಿಂದ ಜಂಟಿ ಅಥವಾ ದ್ವಿ ಪದವಿಗಳನ್ನು ಪಡೆಯಬಹುದು. ಇದರಿಂದ ವಿದ್ಯಾರ್ಥಿಗಳು ವಿದೇಶಿ ವಿ.ವಿಗಳ ಪದವಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಎಂ. ಜಗದೀಶ್ ಕುಮಾರ್ ತಿಳಿಸಿದರು.</p>.<p>ಮಂಗಳವಾರ ನಡೆದ ಸಭೆಯಲ್ಲಿ ಯುಜಿಸಿ ಈ ನಿರ್ಧಾರವನ್ನು ಕೈಗೊಂಡಿದೆ.</p>.<p>ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಸಂಸ್ಥೆಯಿಂದ (ನ್ಯಾಕ್) ಮಾನ್ಯತೆ ಪಡೆದು ಕನಿಷ್ಠ 3.01 ಅಂಕಗಳನ್ನು ಹೊಂದಿರಬೇಕು. ಇಲ್ಲವೇ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಪಟ್ಟಿಯ (ಎನ್ಐಆರ್ಎಫ್) ಅಗ್ರ 100 ಶ್ರೇಯಾಂಕದ ಒಳಗೆ ಕಾಲೇಜುಗಳು ಇರಬೇಕು.</p>.<p>ಟೈಮ್ಸ್ ಹೈಯರ್ ಎಜುಕೇಶನ್ ಅಥವಾ ಕ್ಯೂಎಸ್ ಜಾಗತಿಕ ವಿಶ್ವವಿದ್ಯಾಲಯದಿಂದ ಪ್ರಮಾಣೀಕರಿಸಲ್ಪಟ್ಟ 1000 ಅಗ್ರ ಶ್ರೇಯಾಂಕಿತ ಹೊಂದಿದ ಯಾವುದೇ ವಿದೇಶಿ ಕಾಲೇಜುಗಳೊಡನೆ ಸಹಯೋಗ ನಡೆಸಬಹುದಾಗಿದೆ. ಇದಕ್ಕೆ ಯುಜಿಸಿಯಿಂದ ಪೂರ್ವಾನುಮತಿಯ ಅಗತ್ಯವಿಲ್ಲ’ ಎಂದು ಹೇಳಿದರು.</p>.<p>‘ಈ ಕಾರ್ಯಕ್ರಮದಡಿ ವಿದೇಶಿ ವಿದ್ಯಾಸಂಸ್ಥೆಗಳಿಂದ ವಿದ್ಯಾರ್ಥಿಗಳು ಶೇಕಡ 30ಕ್ಕಿಂತ ಹೆಚ್ಚು ಕ್ರೆಡಿಟ್ಗಳನ್ನು ಪಡೆದಿರಬೇಕು. ಆದರೆ ಆನ್ಲೈನ್ ಅಥವಾ ದೂರ ಶಿಕ್ಷಣ ಹಾಗೂ ಮುಕ್ತ ವಿವಿಗಳಲ್ಲಿ ನೀಡಲಾಗುವ ಪದವಿ ಕಾರ್ಯ</p>.<p><br />ಕ್ರಮಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ’ ಎಂದು ಜಗದೀಶ್ ಹೇಳಿದರು.</p>.<p><strong>ಪಿಯು ಪರೀಕ್ಷೆ: ಉಚಿತ ಪ್ರಯಾಣ</strong></p>.<p>ಬೆಂಗಳೂರು: ಏ.22ರಿಂದ ಮೇ 18ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಉಚಿತ ವಾಗಿ ಪ್ರಯಾಣ ಮಾಡಲು ಬಿಎಂಟಿಸಿ ಅವಕಾಶ ಕಲ್ಪಿಸಿದೆ.</p>.<p>ವ್ಯಾಸಂಗ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಪರೀಕ್ಷಾ ಕೇಂದ್ರ ಇಲ್ಲದಿದ್ದರೆ ನಿರ್ವಾಹಕ ರಿಗೆ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಪರೀಕ್ಷಾ ಕೇಂದ್ರಗಳಿಗೆ ಬಸ್ಗಳಲ್ಲಿ ಉಚಿತವಾಗಿ ಹೋಗಿ ಬರಬಹುದು ಎಂದು ಬಿಎಂಟಿಸಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಶಾಲೆಗಳಲ್ಲಿ ಶೇ 90 ರಷ್ಟು ವಿದ್ಯಾರ್ಥಿಗಳು ಯಾವ ಧರ್ಮಕ್ಕೆ ಸೇರಿರುತ್ತಾರೋ ಆ ಧರ್ಮದ ಅಂಶಗಳನ್ನು ಒಳಗೊಂಡ ನೈತಿಕ ಪಾಠವನ್ನು ಮುಂದಿನ ವರ್ಷದಿಂದ ಬೋಧಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮುಂಬರುವ ಶೈಕ್ಷಣಿಕ ವರ್ಷದಿಂದ ಪಂಚತಂತ್ರ, ರಾಮಾಯಣ, ಮಹಾಭಾರತ, ಭಗವದ್ಗೀತೆ ಅಲ್ಲದೆ, ಎಲ್ಲ ಧರ್ಮಗಳ ಉತ್ತಮ ಅಂಶಗಳನ್ನು ಒಳಗೊಂಡ ನೈತಿಕ ಶಿಕ್ಷಣವನ್ನು ಶಾಲೆಗಳಲ್ಲಿ ಪರಿಚಯಿಸಲಾಗುವುದು ಎಂದರು.</p>.<p>‘ಯಾವ ಧರ್ಮದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಶಾಲೆಗಳಿಗೆ ಬರುತ್ತಾರೋ ಆ ಮಕ್ಕಳು ಕೇಳುವ ವಿಚಾರಗಳನ್ನು ಅಳವಡಿಸುತ್ತೇವೆ.ಯಾವುದನ್ನೆಲ್ಲ ಸೇರಿಸಬೇಕು ಎಂಬುದನ್ನು ತಜ್ಞರ ಸಮಿತಿ ನಿರ್ಣಯಿಸುತ್ತದೆ’ ಎಂದರು.</p>.<p>ರಾಜ್ಯದ ಮದರಸಾಗಳಲ್ಲೂ ಆಧುನಿಕ ಶಿಕ್ಷಣವನ್ನು ನೀಡಬೇಕು ಎಂಬ ಬೇಡಿಕೆ ಪೋಷಕರಿಂದ ಬಂದಿದೆ. ಇಲ್ಲಿ ಓದಿದ ಮಕ್ಕಳಿಗೆ ಉದ್ಯೋಗ ಮತ್ತಿತರ ಕಡೆಗಳಲ್ಲಿ ಸ್ಪರ್ಧೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಪೋಷಕರು ಹೇಳಿದ್ದಾರೆ ಹೇಳಿದರು.</p>.<p>‘ಆಧುನಿಕ ಶಿಕ್ಷಣ ಆರಂಭಿಸಬೇಕು ಎಂಬ ಬಗ್ಗೆ ಮದರಸಾ ಅಥವಾ ಇತರ ಸಂಸ್ಥೆಗಳಿಂದಾಗಲೀ ಪ್ರಸ್ತಾವನೆ ಬಂದಿಲ್ಲ. ಪೋಷಕರೂ ಮನವಿ ಸಲ್ಲಿಸಿಲ್ಲ. ನಾನು ರಾಜ್ಯದ ವಿವಿಧಡೆ ಭೇಟಿ ನೀಡಿದಾಗ ಪೋಷಕರು ತಾವಾಗಿಯೇ ಆಧುನಿಕ ಶಿಕ್ಷಣದ ಅಗತ್ಯವನ್ನು ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಅಧಿಕೃತ ಬೇಡಿಕೆ ಬಂದರೆ ಮಾತ್ರ ಪರಿಶೀಲನೆ ನಡೆಸುತ್ತೇವೆ’ ಎಂದು ನಾಗೇಶ್ ಸ್ಪಷ್ಟಪಡಿಸಿದರು.</p>.<p class="Subhead">1 ನೇ ತರಗತಿಗೆ ಎನ್ಇಪಿ</p>.<p>ಜೂನ್ನಿಂದ 1 ಮತ್ತು 2ನೇ ತರಗತಿ ಮಕ್ಕಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ತರಗತಿಗಳು ನಡೆಯಲಿವೆ. ಕಲಿಕಾ ವಿಧಾನಗಳು ಭಿನ್ನವಾಗಿರುತ್ತವೆ. ಹಾಡು ಮತ್ತು ಕಥೆಗಳ ಮೂಲಕ ಬೋಧನೆ ಮಾಡಲಾಗುತ್ತದೆ ಎಂದೂ ಹೇಳಿದರು.</p>.<p><strong>‘ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ’</strong></p>.<p><strong>ಬೆಂಗಳೂರು: ‘ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಉನ್ನತ ಶಿಕ್ಷಣದಲ್ಲಿ ‘ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ’ (ಎಲ್ಎಂಎಸ್) ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರಲಿದೆ’ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ ತಿಳಿಸಿದರು.</strong></p>.<p>ಎಲ್ಎಂಎಸ್ ಆಧಾರಿತ ಡಿಜಿಟಲ್ ಕಲಿಕೆಯ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ವ್ಯವಸ್ಥೆ ಸರ್ಕಾರಿ– ಖಾಸಗಿ ಕಾಲೇಜುಗಳು, ನಗರ– ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿನ ತಾರತಮ್ಯ ಹಾಗೂ ಡಿಜಿಟಲ್ ಅಂತರ ಅಳಿಸಿ ಹಾಕುವ ವಿಶ್ವಾಸವಿದೆ’ ಎಂದರು.</p>.<p>‘ವಿಷಯ ಸಂವಹನ, ವಿಷಯ ಲಭ್ಯತೆ ಮತ್ತು ಮೌಲ್ಯಮಾಪನದಲ್ಲಿ ಗುರುತರ, ಮಹತ್ವದ ಬದಲಾವಣೆಗಳನ್ನು ಈ ಕಲಿಕಾ ಪದ್ಧತಿ ತರಲಿದೆ. ಆ ಮೂಲಕ, ಬೋಧನೆ- ಕಲಿಕೆಗಳಲ್ಲಿ ಕ್ರಾಂತಿಕಾರಕ ಮುನ್ನಡೆಯನ್ನು ಸಾಧಿಸಬಲ್ಲ ಪರಿಣಾಮಕಾರಿ ವೇದಿಕೆಯಾಗಿದೆ. ಇದರಿಂದ ಎಲ್ಲ ವಿದ್ಯಾರ್ಥಿಗಳು ಸುಲಭವಾಗಿ ಕಲಿಯಬಹುದು, ಸಮಯವನ್ನು ಉಳಿಸಬಹುದು. ಕಲಿಕೆಯ ವಿವಿಧ ಅಂಶಗಳ ವೈಜ್ಞಾನಿಕ ವಿಶ್ಲೇಷಣೆ, ವಿದ್ಯಾರ್ಥಿಗಳು, ಅಧ್ಯಾಪಕರ ಮತ್ತು ಕಾಲೇಜುಗಳ ಹಿಂದಿನ ಮಾಹಿತಿ, ಕಂಟೆಂಟ್ ರೇಟಿಂಗ್, ವಿದ್ಯಾರ್ಥಿಗಳಿಂದ ಮತ್ತು ತರಗತಿಗಳಲ್ಲಿ ಅಧ್ಯಾಪಕರಿಂದ ಇ-ಕಂಟೆಂಟ್ ಬಳಕೆಯ ಟ್ರ್ಯಾಕಿಂಗ್, ಸಂಪೂರ್ಣ ವಿವರಗಳಿರುವ ವರದಿ ತಯಾರಿಕೆ ಇತ್ಯಾದಿಗಳಿಗೆ ಈ ಪದ್ಧತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ’ ಎಂದು ವಿವರಿಸಿದರು.</p>.<p>‘ಈ ತಂತ್ರಾಂಶದ ಮೂಲಕ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ, ಕಾಲೇಜು ಅರ್ಜಿ ಶುಲ್ಕ, ಪರೀಕ್ಷಾ ಶುಲ್ಕ ಸೇರಿದಂತೆ ಎಲ್ಲ ಶುಲ್ಕಗಳನ್ನು ಆನ್ ಲೈನ್ನಲ್ಲಿ ಪಾವತಿಸಲು ಅವಕಾಶ ನೀಡಿದೆ. ವಿಶ್ವವಿದ್ಯಾಲಯಗಳು ಪರೀಕ್ಷೆ ನಡೆಸಲು ಮಾಡುವ ವೆಚ್ಚವನ್ನೂ ಉಳಿಸಬಹುದಾಗಿದೆ’ ಎಂದೂ ಅವರು ವಿವರಿಸಿದರು.</p>.<p><br />ನವದೆಹಲಿ: ಶೈಕ್ಷಣಿಕ ಸಹಯೋಗದ ಮೂಲಕ ಭಾರತೀಯ ವಿದ್ಯಾರ್ಥಿಗಳು ವಿದೇಶಿ ವಿಶ್ವವಿದ್ಯಾಲಯಗಳಿಂದ ಜಂಟಿ ಅಥವಾ ದ್ವಿ ಪದವಿಗಳನ್ನು ಪಡೆಯಬಹುದು. ಇದರಿಂದ ವಿದ್ಯಾರ್ಥಿಗಳು ವಿದೇಶಿ ವಿ.ವಿಗಳ ಪದವಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಎಂ. ಜಗದೀಶ್ ಕುಮಾರ್ ತಿಳಿಸಿದರು.</p>.<p>ಮಂಗಳವಾರ ನಡೆದ ಸಭೆಯಲ್ಲಿ ಯುಜಿಸಿ ಈ ನಿರ್ಧಾರವನ್ನು ಕೈಗೊಂಡಿದೆ.</p>.<p>ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಸಂಸ್ಥೆಯಿಂದ (ನ್ಯಾಕ್) ಮಾನ್ಯತೆ ಪಡೆದು ಕನಿಷ್ಠ 3.01 ಅಂಕಗಳನ್ನು ಹೊಂದಿರಬೇಕು. ಇಲ್ಲವೇ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಪಟ್ಟಿಯ (ಎನ್ಐಆರ್ಎಫ್) ಅಗ್ರ 100 ಶ್ರೇಯಾಂಕದ ಒಳಗೆ ಕಾಲೇಜುಗಳು ಇರಬೇಕು.</p>.<p>ಟೈಮ್ಸ್ ಹೈಯರ್ ಎಜುಕೇಶನ್ ಅಥವಾ ಕ್ಯೂಎಸ್ ಜಾಗತಿಕ ವಿಶ್ವವಿದ್ಯಾಲಯದಿಂದ ಪ್ರಮಾಣೀಕರಿಸಲ್ಪಟ್ಟ 1000 ಅಗ್ರ ಶ್ರೇಯಾಂಕಿತ ಹೊಂದಿದ ಯಾವುದೇ ವಿದೇಶಿ ಕಾಲೇಜುಗಳೊಡನೆ ಸಹಯೋಗ ನಡೆಸಬಹುದಾಗಿದೆ. ಇದಕ್ಕೆ ಯುಜಿಸಿಯಿಂದ ಪೂರ್ವಾನುಮತಿಯ ಅಗತ್ಯವಿಲ್ಲ’ ಎಂದು ಹೇಳಿದರು.</p>.<p>‘ಈ ಕಾರ್ಯಕ್ರಮದಡಿ ವಿದೇಶಿ ವಿದ್ಯಾಸಂಸ್ಥೆಗಳಿಂದ ವಿದ್ಯಾರ್ಥಿಗಳು ಶೇಕಡ 30ಕ್ಕಿಂತ ಹೆಚ್ಚು ಕ್ರೆಡಿಟ್ಗಳನ್ನು ಪಡೆದಿರಬೇಕು. ಆದರೆ ಆನ್ಲೈನ್ ಅಥವಾ ದೂರ ಶಿಕ್ಷಣ ಹಾಗೂ ಮುಕ್ತ ವಿವಿಗಳಲ್ಲಿ ನೀಡಲಾಗುವ ಪದವಿ ಕಾರ್ಯ</p>.<p><br />ಕ್ರಮಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ’ ಎಂದು ಜಗದೀಶ್ ಹೇಳಿದರು.</p>.<p><strong>ಪಿಯು ಪರೀಕ್ಷೆ: ಉಚಿತ ಪ್ರಯಾಣ</strong></p>.<p>ಬೆಂಗಳೂರು: ಏ.22ರಿಂದ ಮೇ 18ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಉಚಿತ ವಾಗಿ ಪ್ರಯಾಣ ಮಾಡಲು ಬಿಎಂಟಿಸಿ ಅವಕಾಶ ಕಲ್ಪಿಸಿದೆ.</p>.<p>ವ್ಯಾಸಂಗ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಪರೀಕ್ಷಾ ಕೇಂದ್ರ ಇಲ್ಲದಿದ್ದರೆ ನಿರ್ವಾಹಕ ರಿಗೆ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಪರೀಕ್ಷಾ ಕೇಂದ್ರಗಳಿಗೆ ಬಸ್ಗಳಲ್ಲಿ ಉಚಿತವಾಗಿ ಹೋಗಿ ಬರಬಹುದು ಎಂದು ಬಿಎಂಟಿಸಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>