<p>ಮಡಿಕೇರಿ: ಹಾರಂಗಿ ಜಲಾಶಯದ ಎಇಇ, ಕಾವೇರಿ ನೀರಾವರಿ ನಿಗಮದ ಪ್ರಭಾರ ಇಇ ಐ.ಕೆ.ಪುಟ್ಟಸ್ವಾಮಿ ಅವರ ಬಳಿ ಲೋಕಾಯುಕ್ತ ಪೊಲೀಸರ ದಾಳಿ ವೇಳೆ 2 ಕೆ.ಜಿಗೂ ಅಧಿಕ ಬೆಳ್ಳಿ, 6 ನಿವೇಶನ, 1 ಮನೆ, 1 ಐ20 ಕಾರು, ₹5.50 ಲಕ್ಷ ನಗದು ಪತ್ತೆಯಾಗಿದೆ.</p>.<p>ಅಧಿಕಾರಿಗೆ ಸಂಬಂಧಿಸಿದ 4 ಸ್ಥಳಗಳ ಮೇಲೆ ಮಂಗಳವಾರ ದಾಳಿ ನಡೆದಿದ್ದು, ಇವರ ಬಳಿ 950 ಗ್ರಾಂ ಚಿನ್ನಾಭರಣಗಳಿದ್ದು, ಅದರಲ್ಲಿ ಅರ್ಧ ಕೆ.ಜಿ ಆಭರಣಗಳನ್ನು ಗಿರವಿ ಇಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ನಿಗದಿತ ಆದಾಯಕ್ಕಿಂತ ₹2.40 ಕೋಟಿ ಅಧಿಕ ಆಸ್ತಿ ಪತ್ತೆಯಾಗಿದೆ. ₹ 1.98 ಕೋಟಿ ಮೊತ್ತದ ಸ್ಥಿರ ಆಸ್ತಿ, ₹ 1.01 ಕೋಟಿ ಮೊತ್ತದ ಚರ ಆಸ್ತಿ ಇದೆ’ ಎಂದು ’ಪ್ರಜಾವಾಣಿ‘ಗೆ ತಿಳಿಸಿದರು.</p>.<p>ಕುಶಾಲನಗರದ ಹಾರಂಗಿ ಜಲಾಶಯದ ಕಚೇರಿ, ಕಾವೇರಿ ನೀರಾವರಿ ನಿಗಮದ ಕಚೇರಿ, ಹಾಸನದ ವಿದ್ಯಾನಗರದ ಸ್ವಂತ ಮನೆ ಹಾಗೂ ಮೈಸೂರಿನ ಬಾಡಿಗೆ ಮನೆಯಿಂದ ನಗದು, ಚಿನ್ನಾಭರಣ ಹಾಗೂ ಆಸ್ತಿಪತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದರು.</p>.<p>ಲೋಕಾಯುಕ್ತ ಮೈಸೂರು ವಿಭಾಗದ ಎಸ್.ಪಿ. ಉದೇಶ್ ಮಾರ್ಗ ದರ್ಶನದಲ್ಲಿ ಡಿವೈಎಸ್ಪಿ ದಿನಕರಶೆಟ್ಟಿ ನೇತೃತ್ವದಲ್ಲಿ ದಾಳಿ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-4-1861318938</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಹಾರಂಗಿ ಜಲಾಶಯದ ಎಇಇ, ಕಾವೇರಿ ನೀರಾವರಿ ನಿಗಮದ ಪ್ರಭಾರ ಇಇ ಐ.ಕೆ.ಪುಟ್ಟಸ್ವಾಮಿ ಅವರ ಬಳಿ ಲೋಕಾಯುಕ್ತ ಪೊಲೀಸರ ದಾಳಿ ವೇಳೆ 2 ಕೆ.ಜಿಗೂ ಅಧಿಕ ಬೆಳ್ಳಿ, 6 ನಿವೇಶನ, 1 ಮನೆ, 1 ಐ20 ಕಾರು, ₹5.50 ಲಕ್ಷ ನಗದು ಪತ್ತೆಯಾಗಿದೆ.</p>.<p>ಅಧಿಕಾರಿಗೆ ಸಂಬಂಧಿಸಿದ 4 ಸ್ಥಳಗಳ ಮೇಲೆ ಮಂಗಳವಾರ ದಾಳಿ ನಡೆದಿದ್ದು, ಇವರ ಬಳಿ 950 ಗ್ರಾಂ ಚಿನ್ನಾಭರಣಗಳಿದ್ದು, ಅದರಲ್ಲಿ ಅರ್ಧ ಕೆ.ಜಿ ಆಭರಣಗಳನ್ನು ಗಿರವಿ ಇಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ನಿಗದಿತ ಆದಾಯಕ್ಕಿಂತ ₹2.40 ಕೋಟಿ ಅಧಿಕ ಆಸ್ತಿ ಪತ್ತೆಯಾಗಿದೆ. ₹ 1.98 ಕೋಟಿ ಮೊತ್ತದ ಸ್ಥಿರ ಆಸ್ತಿ, ₹ 1.01 ಕೋಟಿ ಮೊತ್ತದ ಚರ ಆಸ್ತಿ ಇದೆ’ ಎಂದು ’ಪ್ರಜಾವಾಣಿ‘ಗೆ ತಿಳಿಸಿದರು.</p>.<p>ಕುಶಾಲನಗರದ ಹಾರಂಗಿ ಜಲಾಶಯದ ಕಚೇರಿ, ಕಾವೇರಿ ನೀರಾವರಿ ನಿಗಮದ ಕಚೇರಿ, ಹಾಸನದ ವಿದ್ಯಾನಗರದ ಸ್ವಂತ ಮನೆ ಹಾಗೂ ಮೈಸೂರಿನ ಬಾಡಿಗೆ ಮನೆಯಿಂದ ನಗದು, ಚಿನ್ನಾಭರಣ ಹಾಗೂ ಆಸ್ತಿಪತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದರು.</p>.<p>ಲೋಕಾಯುಕ್ತ ಮೈಸೂರು ವಿಭಾಗದ ಎಸ್.ಪಿ. ಉದೇಶ್ ಮಾರ್ಗ ದರ್ಶನದಲ್ಲಿ ಡಿವೈಎಸ್ಪಿ ದಿನಕರಶೆಟ್ಟಿ ನೇತೃತ್ವದಲ್ಲಿ ದಾಳಿ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-4-1861318938</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>