<p><strong>ಮಡಿಕೇರಿ: </strong>ಕೊಡಗು ಜಿಲ್ಲೆಯ ಕೆಲವೆಡೆ ಮಂಗಳವಾರ ರಾತ್ರಿ ಇಡೀ ಧಾರಾಕಾರವಾಗಿ ಮಳೆ ಸುರಿದಿದೆ. ದೇವರಕೊಲ್ಲಿ ಹಾಗೂ ಕೊಯನಾಡು ನಡುವೆ ರಸ್ತೆಯಲ್ಲಿ ದೊಡ್ಡ ಗಾತ್ರದ ಬಿರುಕುಗಳು ಮೂಡಿವೆ. ಇದರಿಂದ ಖಾಸಗಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೆದ್ದಾರಿಯ ಸ್ಥಿತಿಯನ್ನು ಇಂದು ಪರಿಶೀಲಿಸಲಿದ್ದಾರೆ.</p>.<p>ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೊಡಗು ಜಿಲ್ಲೆಯ ಭಾಗಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಗಡಿಭಾಗವಾದ ಕಲ್ಲುಗುಂಡಿ, ಸಂಪಾಜೆ, ಗೂನಡ್ಕ ಗ್ರಾಮಗಳ ಹಲವು ಭಾಗಗಳು ಜಲಾವೃತಗೊಂಡಿವೆ. ಪಯಸ್ವಿನಿ ನದಿ ಮತ್ತಷ್ಟು ಉಕ್ಕೇರಿ ಹರಿಯುತ್ತಿರುವುದು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.</p>.<p><a href="https://www.prajavani.net/karnataka-news/mysuru-mangaluru-highway-bandh-due-to-heavy-rain-payaswini-river-960015.html" itemprop="url">ಮೈಸೂರು–ಮಂಗಳೂರು ಹೆದ್ದಾರಿ ಬಂದ್: ರಸ್ತೆ ಮಧ್ಯೆ ಸಿಲುಕಿದ ವಾಹನಗಳು </a></p>.<p>ಚೆಟ್ಟಳ್ಳಿ ಪಂಚಾಯಿತಿಯ ಪೊನ್ನತ್ ಮೊಟ್ಟೆ ಎಂಬಲ್ಲಿ ಅಜಿಜ್ ಮತ್ತು ಫಾತಿಮಾ ದಂಪತಿಯ ಮನೆಯ ಹಿಂಬದಿಯ ಮಣ್ಣು ಕುಸಿದು ಮರವೊಂದು ಮನೆ ಮೇಲೆ ಬಿದ್ದು ಹಾನಿಯಾಗಿದೆ.</p>.<p>ದಬಡ್ಕ ರಸ್ತೆ ಹಾಗೂ ಕೊಯನಾಡು ಸೇತುವೆಗಳೂ ಹಾನಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಕೊಡಗು ಜಿಲ್ಲೆಯ ಕೆಲವೆಡೆ ಮಂಗಳವಾರ ರಾತ್ರಿ ಇಡೀ ಧಾರಾಕಾರವಾಗಿ ಮಳೆ ಸುರಿದಿದೆ. ದೇವರಕೊಲ್ಲಿ ಹಾಗೂ ಕೊಯನಾಡು ನಡುವೆ ರಸ್ತೆಯಲ್ಲಿ ದೊಡ್ಡ ಗಾತ್ರದ ಬಿರುಕುಗಳು ಮೂಡಿವೆ. ಇದರಿಂದ ಖಾಸಗಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೆದ್ದಾರಿಯ ಸ್ಥಿತಿಯನ್ನು ಇಂದು ಪರಿಶೀಲಿಸಲಿದ್ದಾರೆ.</p>.<p>ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೊಡಗು ಜಿಲ್ಲೆಯ ಭಾಗಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಗಡಿಭಾಗವಾದ ಕಲ್ಲುಗುಂಡಿ, ಸಂಪಾಜೆ, ಗೂನಡ್ಕ ಗ್ರಾಮಗಳ ಹಲವು ಭಾಗಗಳು ಜಲಾವೃತಗೊಂಡಿವೆ. ಪಯಸ್ವಿನಿ ನದಿ ಮತ್ತಷ್ಟು ಉಕ್ಕೇರಿ ಹರಿಯುತ್ತಿರುವುದು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.</p>.<p><a href="https://www.prajavani.net/karnataka-news/mysuru-mangaluru-highway-bandh-due-to-heavy-rain-payaswini-river-960015.html" itemprop="url">ಮೈಸೂರು–ಮಂಗಳೂರು ಹೆದ್ದಾರಿ ಬಂದ್: ರಸ್ತೆ ಮಧ್ಯೆ ಸಿಲುಕಿದ ವಾಹನಗಳು </a></p>.<p>ಚೆಟ್ಟಳ್ಳಿ ಪಂಚಾಯಿತಿಯ ಪೊನ್ನತ್ ಮೊಟ್ಟೆ ಎಂಬಲ್ಲಿ ಅಜಿಜ್ ಮತ್ತು ಫಾತಿಮಾ ದಂಪತಿಯ ಮನೆಯ ಹಿಂಬದಿಯ ಮಣ್ಣು ಕುಸಿದು ಮರವೊಂದು ಮನೆ ಮೇಲೆ ಬಿದ್ದು ಹಾನಿಯಾಗಿದೆ.</p>.<p>ದಬಡ್ಕ ರಸ್ತೆ ಹಾಗೂ ಕೊಯನಾಡು ಸೇತುವೆಗಳೂ ಹಾನಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>