ಪರೀಕ್ಷೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಇದು ಶಿಕ್ಷಣ ಹಕ್ಕು ಕಾಯ್ದೆ ಉಲ್ಲಂಘನೆ ಎಂದು ಹೇಳಿದೆ. ಸಂವಿಧಾನಬದ್ಧ ಮೂಲಭೂತ ಹಕ್ಕು ಮತ್ತು ಶಿಕ್ಷಣ ಕಾಯ್ದೆಯ ಅರಿವಿಲ್ಲದ ಅಧಿಕಾರಿಗಳು ಹಣದ ಆಸೆಗಾಗಿ ಪ್ರಶ್ನೆಪತ್ರಿಕೆ ಮುದ್ರಣ ಮಾಫಿಯಾ ಜತೆ ಕೈಜೋಡಿಸಿ, ಎಲ್ಲಾ ಗೊಂದಲಕ್ಕೆ ಕಾರಣರಾಗಿದ್ದಾರೆ. ಪರೀಕ್ಷಾ ಮಂಡಳಿಯ ಹಿರಿಯ ಅಧಿಕಾರಿಗಳು ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಶಂಕೆ ಇದೆ. ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಹುನ್ನಾರ ನಡೆದಿದೆ ಸಮಿತಿ ಅಧ್ಯಕ್ಷ ಬಿ.ಎನ್.ಯೋಗಾನಂದ ದೂರಿದ್ದಾರೆ.