<p>ಮಾಗಡಿ: ತಾಲ್ಲೂಕಿನ ಕಳಪೆ ಕಾಮಗಾರಿ ಪ್ರಶ್ನಿಸಿದರೆ ಬೆದರಿಕೆ ತಂತ್ರ ಅನುಸರಿಸುವುದು ಸರಿಯಲ್ಲ ಎಂದು ಜೆಡಿಎಸ್ ಹಿರಿಯ ಮುಖಂಡ ಹೇಳಿಗೆಹಳ್ಳಿ ತಮ್ಮಣ್ಣಗೌಡ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದವರು ಟೀಕೆಗಳಿಗೆ ಸಾಕ್ಷಿ ಸಮೇತ ಉತ್ತರಿಸಬೇಕೇ ಹೊರತು, ಧಮ್ಕಿ ಹಾಕುವುದು ಆರೋಗ್ಯಕರ ರಾಜಕಾರಣವಲ್ಲ ಎಂದರು.</p>.<p>ಮಾಜಿ ಶಾಸಕ ಎ.ಮಂಜುನಾಥ್ ಅವರು ಗೌರಮ್ಮನ ಕೆರೆ ಮಣ್ಣು ಮಾರಾಟ ಬಗ್ಗೆ ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್ ಮುಖಂಡರು ಬೆದರಿಕೆ ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಯುವ ಮುಖಂಡ ಮರೂರು ಸಾಗರ್ ಗೌಡ, ಪುರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ್, ಸುಳ್ಳು ಆರೋಪ ಬಿಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ನೀಗಿಸಲು ಶಾಸಕರ ಮೇಲೆ ಒತ್ತಡ ತರಬೇಕೆಂದರು.</p>.<p>ಬೆಳಗುಂಬ ವಿಎಸ್ಎಸ್ಎನ್ ಅಧ್ಯಕ್ಷ ರಂಗಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪೂಜಾರಿ ಪಾಳ್ಯ ಕೃಷ್ಣಮೂರ್ತಿ ಅವರು ಆಸ್ತಿ ಭಯದಿಂದ ಕಾಂಗ್ರೆಸ್ ಸೇರಿದ್ದಾರೆ ಎಂದು ಆರೋಪಿಸಿದರು.</p>.<p>ಜೆಡಿಎಸ್ ಮುಖಂಡರಾದ ಕೆಂಪಸಾಗರ ಮಂಜುನಾಥ್, ರಮೇಶ್, ಯುವ ಘಟಕದ ಅಧ್ಯಕ್ಷ ವಿಜಯ್ ಕುಮಾರ್, ಅನಿಲ್ ಕುಮಾರ್, ಕೋಟಪ್ಪ, ಕಲ್ಕೆರೆ ಉಮೇಶ್, ಕರಡಿ ನಾಗರಾಜ್, ಕೆಂಪಸಾಗರ ಗುಂಡಣ್ಣ, ದಂಡಿಗೇಪುರ ಕುಮಾರ್, ವಕೀಲ ವಸಂತ್ ಕುಮಾರ್, ರೋಹಿತ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-14-1060002624</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಗಡಿ: ತಾಲ್ಲೂಕಿನ ಕಳಪೆ ಕಾಮಗಾರಿ ಪ್ರಶ್ನಿಸಿದರೆ ಬೆದರಿಕೆ ತಂತ್ರ ಅನುಸರಿಸುವುದು ಸರಿಯಲ್ಲ ಎಂದು ಜೆಡಿಎಸ್ ಹಿರಿಯ ಮುಖಂಡ ಹೇಳಿಗೆಹಳ್ಳಿ ತಮ್ಮಣ್ಣಗೌಡ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದವರು ಟೀಕೆಗಳಿಗೆ ಸಾಕ್ಷಿ ಸಮೇತ ಉತ್ತರಿಸಬೇಕೇ ಹೊರತು, ಧಮ್ಕಿ ಹಾಕುವುದು ಆರೋಗ್ಯಕರ ರಾಜಕಾರಣವಲ್ಲ ಎಂದರು.</p>.<p>ಮಾಜಿ ಶಾಸಕ ಎ.ಮಂಜುನಾಥ್ ಅವರು ಗೌರಮ್ಮನ ಕೆರೆ ಮಣ್ಣು ಮಾರಾಟ ಬಗ್ಗೆ ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್ ಮುಖಂಡರು ಬೆದರಿಕೆ ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಯುವ ಮುಖಂಡ ಮರೂರು ಸಾಗರ್ ಗೌಡ, ಪುರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ್, ಸುಳ್ಳು ಆರೋಪ ಬಿಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ನೀಗಿಸಲು ಶಾಸಕರ ಮೇಲೆ ಒತ್ತಡ ತರಬೇಕೆಂದರು.</p>.<p>ಬೆಳಗುಂಬ ವಿಎಸ್ಎಸ್ಎನ್ ಅಧ್ಯಕ್ಷ ರಂಗಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪೂಜಾರಿ ಪಾಳ್ಯ ಕೃಷ್ಣಮೂರ್ತಿ ಅವರು ಆಸ್ತಿ ಭಯದಿಂದ ಕಾಂಗ್ರೆಸ್ ಸೇರಿದ್ದಾರೆ ಎಂದು ಆರೋಪಿಸಿದರು.</p>.<p>ಜೆಡಿಎಸ್ ಮುಖಂಡರಾದ ಕೆಂಪಸಾಗರ ಮಂಜುನಾಥ್, ರಮೇಶ್, ಯುವ ಘಟಕದ ಅಧ್ಯಕ್ಷ ವಿಜಯ್ ಕುಮಾರ್, ಅನಿಲ್ ಕುಮಾರ್, ಕೋಟಪ್ಪ, ಕಲ್ಕೆರೆ ಉಮೇಶ್, ಕರಡಿ ನಾಗರಾಜ್, ಕೆಂಪಸಾಗರ ಗುಂಡಣ್ಣ, ದಂಡಿಗೇಪುರ ಕುಮಾರ್, ವಕೀಲ ವಸಂತ್ ಕುಮಾರ್, ರೋಹಿತ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-14-1060002624</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>