<p><strong>ಹುಬ್ಬಳ್ಳಿ: </strong>ಮಹದಾಯಿ ವಿವಾದವನ್ನು ಆದಷ್ಟು ಬೇಗನೆ ಪರಿಹರಿಸಬೇಕು ಎಂದು ಹೋರಾಟಗಾರರು ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.</p>.<p>ನವಲಗುಂದ ಶಾಸಕ ಬಿಜೆಪಿಯ ಶಂಕರ ಪಾಟೀಲ ಮುನೇನಕೊಪ್ಪ ಅವರಿಗೆ ಶಾ ಅವರನ್ನು ಭೇಟಿ ಮಾಡಿಸಲೇಬೇಕು ಎಂದು ಹೋರಾಟಗಾರರು ಒತ್ತಾಯಿಸಿದ್ದರು. ಆದ್ದರಿಂದ ಶಾ ಎರಡು ನಿಮಿಷ ಸಮಯ ನೀಡಿದ್ದರು.</p>.<p>ಮಹದಾಯಿ ಸಮಸ್ಯೆ ತುರ್ತಾಗಿ ಪರಿಹರಿಸಬೇಕು ಎನ್ನುವುದು ನಮಗೂ ಗೊತ್ತಿದೆ. ನಿಮ್ಮ ಸಮಸ್ಯೆಗೆ ಸ್ಪಂದಿಸುತ್ತೇವೆ ಎಂದು ಶಾ ಭರವಸೆ ನೀಡಿದ್ದಾರೆ ಎಂದು ಹೋರಾಟಗಾರರು ತಿಳಿಸಿದರು.</p>.<p>ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಮಹದಾಯಿ ನೀರಿಗಾಗಿ ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಒಟ್ಟಿಗೆ ಸಭೆ ನಡೆಸಿದ್ದರು. ಅಮಿತ್ ಶಾ ನಗರಕ್ಕೆ ಬಂದಾಗ ಎಲ್ಲ ಪಕ್ಷದವರು ಸೇರಿ ಮನವಿ ಕೊಟ್ಟಿದ್ದರೆ ಹೆಚ್ವು ಪರಿಣಾಮಕಾರಿಯಾಗುತ್ತಿತ್ತು. ಆದರೆ ಈ ನಿಟ್ಟಿನಲ್ಲಿ ಯಾರೂ ಪ್ರಯತ್ನಿಸಲಿಲ್ಲ ಎಂದು ಹೋರಾಟಗಾರರು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಮಹದಾಯಿ ವಿವಾದವನ್ನು ಆದಷ್ಟು ಬೇಗನೆ ಪರಿಹರಿಸಬೇಕು ಎಂದು ಹೋರಾಟಗಾರರು ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.</p>.<p>ನವಲಗುಂದ ಶಾಸಕ ಬಿಜೆಪಿಯ ಶಂಕರ ಪಾಟೀಲ ಮುನೇನಕೊಪ್ಪ ಅವರಿಗೆ ಶಾ ಅವರನ್ನು ಭೇಟಿ ಮಾಡಿಸಲೇಬೇಕು ಎಂದು ಹೋರಾಟಗಾರರು ಒತ್ತಾಯಿಸಿದ್ದರು. ಆದ್ದರಿಂದ ಶಾ ಎರಡು ನಿಮಿಷ ಸಮಯ ನೀಡಿದ್ದರು.</p>.<p>ಮಹದಾಯಿ ಸಮಸ್ಯೆ ತುರ್ತಾಗಿ ಪರಿಹರಿಸಬೇಕು ಎನ್ನುವುದು ನಮಗೂ ಗೊತ್ತಿದೆ. ನಿಮ್ಮ ಸಮಸ್ಯೆಗೆ ಸ್ಪಂದಿಸುತ್ತೇವೆ ಎಂದು ಶಾ ಭರವಸೆ ನೀಡಿದ್ದಾರೆ ಎಂದು ಹೋರಾಟಗಾರರು ತಿಳಿಸಿದರು.</p>.<p>ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಮಹದಾಯಿ ನೀರಿಗಾಗಿ ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಒಟ್ಟಿಗೆ ಸಭೆ ನಡೆಸಿದ್ದರು. ಅಮಿತ್ ಶಾ ನಗರಕ್ಕೆ ಬಂದಾಗ ಎಲ್ಲ ಪಕ್ಷದವರು ಸೇರಿ ಮನವಿ ಕೊಟ್ಟಿದ್ದರೆ ಹೆಚ್ವು ಪರಿಣಾಮಕಾರಿಯಾಗುತ್ತಿತ್ತು. ಆದರೆ ಈ ನಿಟ್ಟಿನಲ್ಲಿ ಯಾರೂ ಪ್ರಯತ್ನಿಸಲಿಲ್ಲ ಎಂದು ಹೋರಾಟಗಾರರು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>