ಸುಪ್ರೀಂ ಕೋರ್ಟ್ನಲ್ಲಿ ಅಂತಿಮ ವಿಚಾರಣೆ ಜುಲೈ 15ರಿಂದಆರಂಭವಾಗಲಿದ್ದು, ಅಷ್ಟರೊಳಗೆ ಅಧಿಸೂಚನೆ ಹೊರಡಿಸುವಂತೆ ಕೋರಲಾಗುತ್ತದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆಗೆ ಸಚಿವರಾದ ಬಸವರಾಜ ಬೊಮ್ಮಾಯಿ, ರಮೇಶ್ ಜಾರಕಿಹೊಳಿ ಚರ್ಚಿಸಲಿದ್ದಾರೆ. ಈ ಇಬ್ಬರೂ ಸಚಿವರು ಮುಂದಿನ ವಾರ ದೆಹಲಿಗೆ ತೆರಳಿ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಒತ್ತಡ ಹಾಕಲಿದ್ದಾರೆಎಂದು ಮೂಲಗಳು ತಿಳಿಸಿವೆ.