<p><strong>ಎಂ.ಕೆ.ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): ‘</strong>ಮಹದಾಯಿ ಜಲ ವಿವಾದವನ್ನು ಸಂಪೂರ್ಣ ಬಗೆಹರಿಸಿದ್ದೇವೆ. ಅತಿ ಶೀಘ್ರದಲ್ಲಿಯೇ ಕರ್ನಾಟಕದ ರೈತರಿಗೆ ಅವರ ಪಾಲಿನ ನೀರು ಸಿಗಲಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದರು.</p>.<p>ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಶನಿವಾರ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಳಸಾ– ಬಂಡೂರಿ ನಾಲಾ ನೀರು ಸಂಬಂಧ ಕರ್ನಾಟಕ ಹಾಗೂ ಗೋವಾ ಸರ್ಕಾರಗಳ ಮಧ್ಯದ ಗೊಂದಲಗಳು ಬಗೆಹರಿದಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಂಬ ಸೌಹಾರ್ದದಿಂದ ಈ ಸಮಸ್ಯೆಗೆ ಅಂತ್ಯ ಹಾಡಿದ್ದಾರೆ’ ಎಂದರು.</p>.<p>‘ಮಹದಾಯಿಯ ಒಂದು ಹನಿ ನೀರನ್ನೂ ಕರ್ನಾಟಕಕ್ಕೆ ಕೊಡಬೇಕಾಗಿಲ್ಲ’ ಎಂದು 2007ರ ಚುನಾವಣೆ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದರು. ಅವರು ಎಬ್ಬಿಸಿಹೋದ ವಿವಾದವನ್ನು ಬಿಜೆಪಿ ಮುಗಿಸಿದೆ’ ಎಂದು ಹೇಳಿದರು.</p>.<p>‘ವೀರ ಸಾವರ್ಕರ್ ಅವರ ಹೋರಾಟಕ್ಕೆ ಕರ್ನಾಟಕದ ಆಲೂರು ವೆಂಕಟರಾಯರು ಬೆನ್ನೆಲುಬಾಗಿದ್ದರು. ಸುವರ್ಣ ವಿಧಾನಸೌಧದಲ್ಲಿ ವೀರ ಸಾವರ್ಕರ್ ಭಾವಚಿತ್ರ ಅಳವಡಿಸಿ ಇಡೀ ಕರ್ನಾಟಕ ಅವರಿಗೆ ನಮನ ಸಲ್ಲಿಸಿದ್ದು ಖುಷಿ ತಂದಿದೆ’<br />ಎಂದರು.</p>.<p><strong>‘ಬಿಜೆಪಿ– ಕಾಂಗ್ರೆಸ್ ನೇರ ಸ್ಪರ್ಧೆ’</strong></p>.<p>ಹುಬ್ಬಳ್ಳಿ: ನಾಲ್ಕೈದು ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಸಲ ತ್ರಿಕೋನ ಸ್ಪರ್ಧೆಯಿಲ್ಲ, ಬಿಜೆಪಿ- ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.</p>.<p>ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಶನಿವಾರ ಬಿಜೆಪಿ ಹಮ್ಮಿಕೊಂಡ ‘ವಿಜಯ ಸಂಕಲ್ಪ ಅಭಿಯಾನ’ ಅಂಗವಾಗಿ ರೋಡ್ ಶೋ ನಡೆಸಿದ ನಂತರ ಅವರು ಮಾತನಾಡಿದರು.</p>.<p>ರಾಜ್ಯದಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಕಾಂಗ್ರೆಸ್ಗೆ ಅಷ್ಟೆ ಅಲ್ಲ, ಜೆಡಿಎಸ್ಗೆ ಮತ ನೀಡಿದರೂ ಅದು ಕಾಂಗ್ರೆಸ್ಗೆ ಹೋದಂತೆ. ಚುನಾವಣೆ ಬಿಜೆಪಿ- ಕಾಂಗ್ರೆಸ್ ನಡುವೆ ನೇರಾನೇರವಾಗಿ ನಡೆಯಲಿದೆ ಎಂದರು.</p>.<p>25-30 ಸ್ಥಾನ ಗೆದ್ದು ಮುಖ್ಯಮಂತ್ರಿಯಾಗುವ ಕನಸನ್ನು ಜೆಡಿಎಸ್ ನವರು ಕಾಣುತ್ತಿದ್ದಾರೆ. ಇನ್ನು ಕೆಲವು ಕಾಂಗ್ರೆಸ್ಸಿಗರು, ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.</p>.<p>ಸಿದ್ದರಾಮಯ್ಯ ಸರ್ಕಾರ ಇದ್ದಾಗ, ಕಾಂಗ್ರೆಸ್ ಹೈಕಮಾಂಡ್ಗೆ ಪೇಟಿಎಂ ಆಗಿತ್ತು ಎಂದು ಟೀಕಿಸಿದ ಅವರು, ಕಾಂಗ್ರೆಸ್ ಗಾಂಧಿ ಕುಟುಂಬದ<br />ಪಕ್ಷವಾಗಿದ್ದರೆ, ಜೆಡಿಎಸ್ ಪಕ್ಷವು ಅಪ್ಪ, ಮಕ್ಕಳು, ಮೊಮ್ಮಕ್ಕಳ ಪಕ್ಷ<br />ವಾಗಿದೆ. ಅಲ್ಲಿ ಸಾಮಾನ್ಯ ಜನರಿಗೆ, ಯುವಕರಿಗೆ ಎಲ್ಲಿದೆ ಅವಕಾಶ<br />ಎಂದು ಪ್ರಶ್ನಿಸಿದರು.</p>.<p>ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷಗಳು ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿವೆ. ಇದಕ್ಕೆ ಕೊನೆ ಹಾಡಲು ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಂ.ಕೆ.ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): ‘</strong>ಮಹದಾಯಿ ಜಲ ವಿವಾದವನ್ನು ಸಂಪೂರ್ಣ ಬಗೆಹರಿಸಿದ್ದೇವೆ. ಅತಿ ಶೀಘ್ರದಲ್ಲಿಯೇ ಕರ್ನಾಟಕದ ರೈತರಿಗೆ ಅವರ ಪಾಲಿನ ನೀರು ಸಿಗಲಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದರು.</p>.<p>ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಶನಿವಾರ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಳಸಾ– ಬಂಡೂರಿ ನಾಲಾ ನೀರು ಸಂಬಂಧ ಕರ್ನಾಟಕ ಹಾಗೂ ಗೋವಾ ಸರ್ಕಾರಗಳ ಮಧ್ಯದ ಗೊಂದಲಗಳು ಬಗೆಹರಿದಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಂಬ ಸೌಹಾರ್ದದಿಂದ ಈ ಸಮಸ್ಯೆಗೆ ಅಂತ್ಯ ಹಾಡಿದ್ದಾರೆ’ ಎಂದರು.</p>.<p>‘ಮಹದಾಯಿಯ ಒಂದು ಹನಿ ನೀರನ್ನೂ ಕರ್ನಾಟಕಕ್ಕೆ ಕೊಡಬೇಕಾಗಿಲ್ಲ’ ಎಂದು 2007ರ ಚುನಾವಣೆ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದರು. ಅವರು ಎಬ್ಬಿಸಿಹೋದ ವಿವಾದವನ್ನು ಬಿಜೆಪಿ ಮುಗಿಸಿದೆ’ ಎಂದು ಹೇಳಿದರು.</p>.<p>‘ವೀರ ಸಾವರ್ಕರ್ ಅವರ ಹೋರಾಟಕ್ಕೆ ಕರ್ನಾಟಕದ ಆಲೂರು ವೆಂಕಟರಾಯರು ಬೆನ್ನೆಲುಬಾಗಿದ್ದರು. ಸುವರ್ಣ ವಿಧಾನಸೌಧದಲ್ಲಿ ವೀರ ಸಾವರ್ಕರ್ ಭಾವಚಿತ್ರ ಅಳವಡಿಸಿ ಇಡೀ ಕರ್ನಾಟಕ ಅವರಿಗೆ ನಮನ ಸಲ್ಲಿಸಿದ್ದು ಖುಷಿ ತಂದಿದೆ’<br />ಎಂದರು.</p>.<p><strong>‘ಬಿಜೆಪಿ– ಕಾಂಗ್ರೆಸ್ ನೇರ ಸ್ಪರ್ಧೆ’</strong></p>.<p>ಹುಬ್ಬಳ್ಳಿ: ನಾಲ್ಕೈದು ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಸಲ ತ್ರಿಕೋನ ಸ್ಪರ್ಧೆಯಿಲ್ಲ, ಬಿಜೆಪಿ- ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.</p>.<p>ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಶನಿವಾರ ಬಿಜೆಪಿ ಹಮ್ಮಿಕೊಂಡ ‘ವಿಜಯ ಸಂಕಲ್ಪ ಅಭಿಯಾನ’ ಅಂಗವಾಗಿ ರೋಡ್ ಶೋ ನಡೆಸಿದ ನಂತರ ಅವರು ಮಾತನಾಡಿದರು.</p>.<p>ರಾಜ್ಯದಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಕಾಂಗ್ರೆಸ್ಗೆ ಅಷ್ಟೆ ಅಲ್ಲ, ಜೆಡಿಎಸ್ಗೆ ಮತ ನೀಡಿದರೂ ಅದು ಕಾಂಗ್ರೆಸ್ಗೆ ಹೋದಂತೆ. ಚುನಾವಣೆ ಬಿಜೆಪಿ- ಕಾಂಗ್ರೆಸ್ ನಡುವೆ ನೇರಾನೇರವಾಗಿ ನಡೆಯಲಿದೆ ಎಂದರು.</p>.<p>25-30 ಸ್ಥಾನ ಗೆದ್ದು ಮುಖ್ಯಮಂತ್ರಿಯಾಗುವ ಕನಸನ್ನು ಜೆಡಿಎಸ್ ನವರು ಕಾಣುತ್ತಿದ್ದಾರೆ. ಇನ್ನು ಕೆಲವು ಕಾಂಗ್ರೆಸ್ಸಿಗರು, ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.</p>.<p>ಸಿದ್ದರಾಮಯ್ಯ ಸರ್ಕಾರ ಇದ್ದಾಗ, ಕಾಂಗ್ರೆಸ್ ಹೈಕಮಾಂಡ್ಗೆ ಪೇಟಿಎಂ ಆಗಿತ್ತು ಎಂದು ಟೀಕಿಸಿದ ಅವರು, ಕಾಂಗ್ರೆಸ್ ಗಾಂಧಿ ಕುಟುಂಬದ<br />ಪಕ್ಷವಾಗಿದ್ದರೆ, ಜೆಡಿಎಸ್ ಪಕ್ಷವು ಅಪ್ಪ, ಮಕ್ಕಳು, ಮೊಮ್ಮಕ್ಕಳ ಪಕ್ಷ<br />ವಾಗಿದೆ. ಅಲ್ಲಿ ಸಾಮಾನ್ಯ ಜನರಿಗೆ, ಯುವಕರಿಗೆ ಎಲ್ಲಿದೆ ಅವಕಾಶ<br />ಎಂದು ಪ್ರಶ್ನಿಸಿದರು.</p>.<p>ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷಗಳು ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿವೆ. ಇದಕ್ಕೆ ಕೊನೆ ಹಾಡಲು ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>