ಸಿ.ಎಸ್.ಜವಳಿ ಕಾನೂನು ಕಾಲೇಜು ಕಾರ್ಯಕ್ರಮದಲ್ಲಿ ಭಾನುವಾರ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೆಚ್ಚಿನ ನೀರಿಗೆ ಬೇಡಿಕೆ ಸಲ್ಲಿಸಿ ಕರ್ನಾಟಕ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ. ಇದಕ್ಕೆ ಪ್ರತಿಯಾಗಿ ಗೋವಾ ಸರ್ಕಾರ ಕೂಡ ಅರ್ಜಿ ಸಲ್ಲಿಸಿದೆ. ಈ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ಇರುವುದರಿಂದ ಸರ್ಕಾರ ಗೆಜೆಟ್ ಹೊರಡಿಸುವಂತಿಲ್ಲ. ಇದಕ್ಕಾಗಿ ಕೇಂದ್ರ ಸರ್ಕಾರ ಹೊಸ ಮಸೂದೆಯನ್ನು ಮಂಡಿಸಿದೆ’ ಎಂದರು.