<p><strong>ಬೆಂಗಳೂರು</strong>: ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಮಾನವಿಕ ಮತ್ತು ಮುಕ್ತ ಕಲೆಗಳ ವಿಭಾಗದ ನಿರ್ದೇಶಕ ಟಿ.ಎಂ. ಮಂಜುನಾಥ ಅವರನ್ನು ಪ್ರಭಾರ ಕುಲಪತಿಯಾಗಿ ನೇಮಿಸಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಆದೇಶ ಹೊರಡಿಸಿದ್ದಾರೆ.</p>.<p>ವಿಶ್ವವಿದ್ಯಾಲಯದ ಪ್ರಥಮ ಕುಲಪತಿ ಎಲ್. ಗೋಮತಿದೇವಿ ಅವರ ಅವಧಿ ನವೆಂಬರ್ 2024ಕ್ಕೆ ಮುಕ್ತಾಯವಾಗಿತ್ತು. ನಂತರ ಗೃಹ ವಿಜ್ಞಾನ ವಿಭಾಗದ (ಸ್ಕೂಲ್) ನಿರ್ದೇಶಕರಾಗಿದ್ದ ಸಿ. ಉಷಾದೇವಿ ಅವರನ್ನು ಪ್ರಭಾರ ಕುಲಪತಿಯಾಗಿ ನೇಮಕ ಮಾಡಲಾಗಿತ್ತು. ಉಷಾದೇವಿ ಅವರ ಅವಧಿ ಈ ವರ್ಷದ ಮಾರ್ಚ್ಗೆ ಮುಗಿದಿತ್ತು. ಆ ಸಮಯದಲ್ಲಿ ನಿಯಮದಂತೆ ಮಂಜುನಾಥ್ ಅವರನ್ನು ನೇಮಕ ಮಾಡದೇ ಪ್ರಾಧ್ಯಾಪಕಿ ಡಾ. ಮೀರಾ ಬಿ.ಕೆ. ಅವರನ್ನು ನೇಮಿಸಲಾಗಿತ್ತು. </p>.<p>ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾಲಯ ಕಳುಹಿಸಿದ ಸೇವಾ ಹಿರಿತನದ ಪಟ್ಟಿ ತಿರಸ್ಕರಿಸಿ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯಕ್ಕೆ ಪ್ರಭಾರ ಕುಲಪತಿ ನೇಮಕ ಮಾಡಿದನ್ನು ಪ್ರಶ್ನಿಸಿ, ರಾಜ್ಯಪಾಲರಿಗೆ ಹಲವು ದೂರುಗಳು ಸಲ್ಲಿಕೆಯಾಗಿದ್ದವು. </p>.<p>ನಿಯಮಗಳು ಹಾಗೂ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರ ಕಾನೂನು ಅಭಿಪ್ರಾಯ ಪಡೆದು ಮಂಜುನಾಥ್ ಅವರಿಗೆ ಪ್ರಭಾರ ವಹಿಸಲಾಗಿದೆ ಎಂದು ರಾಜ್ಯಪಾಲರು ಆದೇಶದಲ್ಲಿ ವಿವರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಮಾನವಿಕ ಮತ್ತು ಮುಕ್ತ ಕಲೆಗಳ ವಿಭಾಗದ ನಿರ್ದೇಶಕ ಟಿ.ಎಂ. ಮಂಜುನಾಥ ಅವರನ್ನು ಪ್ರಭಾರ ಕುಲಪತಿಯಾಗಿ ನೇಮಿಸಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಆದೇಶ ಹೊರಡಿಸಿದ್ದಾರೆ.</p>.<p>ವಿಶ್ವವಿದ್ಯಾಲಯದ ಪ್ರಥಮ ಕುಲಪತಿ ಎಲ್. ಗೋಮತಿದೇವಿ ಅವರ ಅವಧಿ ನವೆಂಬರ್ 2024ಕ್ಕೆ ಮುಕ್ತಾಯವಾಗಿತ್ತು. ನಂತರ ಗೃಹ ವಿಜ್ಞಾನ ವಿಭಾಗದ (ಸ್ಕೂಲ್) ನಿರ್ದೇಶಕರಾಗಿದ್ದ ಸಿ. ಉಷಾದೇವಿ ಅವರನ್ನು ಪ್ರಭಾರ ಕುಲಪತಿಯಾಗಿ ನೇಮಕ ಮಾಡಲಾಗಿತ್ತು. ಉಷಾದೇವಿ ಅವರ ಅವಧಿ ಈ ವರ್ಷದ ಮಾರ್ಚ್ಗೆ ಮುಗಿದಿತ್ತು. ಆ ಸಮಯದಲ್ಲಿ ನಿಯಮದಂತೆ ಮಂಜುನಾಥ್ ಅವರನ್ನು ನೇಮಕ ಮಾಡದೇ ಪ್ರಾಧ್ಯಾಪಕಿ ಡಾ. ಮೀರಾ ಬಿ.ಕೆ. ಅವರನ್ನು ನೇಮಿಸಲಾಗಿತ್ತು. </p>.<p>ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾಲಯ ಕಳುಹಿಸಿದ ಸೇವಾ ಹಿರಿತನದ ಪಟ್ಟಿ ತಿರಸ್ಕರಿಸಿ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯಕ್ಕೆ ಪ್ರಭಾರ ಕುಲಪತಿ ನೇಮಕ ಮಾಡಿದನ್ನು ಪ್ರಶ್ನಿಸಿ, ರಾಜ್ಯಪಾಲರಿಗೆ ಹಲವು ದೂರುಗಳು ಸಲ್ಲಿಕೆಯಾಗಿದ್ದವು. </p>.<p>ನಿಯಮಗಳು ಹಾಗೂ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರ ಕಾನೂನು ಅಭಿಪ್ರಾಯ ಪಡೆದು ಮಂಜುನಾಥ್ ಅವರಿಗೆ ಪ್ರಭಾರ ವಹಿಸಲಾಗಿದೆ ಎಂದು ರಾಜ್ಯಪಾಲರು ಆದೇಶದಲ್ಲಿ ವಿವರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>