ಗಡಿ ವಿವಾದ ಕುರಿತು ಡಾ. ದೀಪಕ್ ಪವಾರ್ ಬರೆದ ಮರಾಠಿ ಕೃತಿಯನ್ನು ಮಹಾರಾಷ್ಟ್ರದ ಮುಂಬೈನಲ್ಲಿ ಬಿಡುಗಡೆ ಮಾಡಿದ ಉದ್ಧವ್, ‘ಕರ್ನಾಟಕ–ಮಹಾರಾಷ್ಟ್ರ ಗಡಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿ’ ಎಂದು ಆಗ್ರಹಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ಶಿವಸೇನಾದ ಕಾರ್ಯಸೂಚಿಗಳಿಗೆ ರಾಜ್ಯದಲ್ಲಿ ಮಹತ್ವ ನೀಡುವ ಅಗತ್ಯವಿಲ್ಲ’ ಎಂದರು.