<p><strong>ಸೊಲ್ಲಾಪುರ</strong>: ಮಹಾರಾಷ್ಟ್ರದ ಕನ್ನಡ ಹಾಗೂ ಉರ್ದು ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕಳೆದ ಕೆಲವು ವರ್ಷಗಳಿಂದ ಉಂಟಾಗಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ.</p>.<p>ಮಹಾರಾಷ್ಟ್ರ ಶಿಕ್ಷಣ ಇಲಾಖೆಯ ‘ಪವಿತ್ರ ಪೋರ್ಟಲ್’ ತಂತ್ರಾಂಶದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದು, ಇನ್ಮುಂದೆ ಶಾಲೆಗಳ ಬೋಧನಾ ಮಾಧ್ಯಮಕ್ಕೆ ಅನುಗುಣವಾಗಿಯೇ ಶಿಕ್ಷಕರ ನೇಮಕಾತಿ ನಡೆಸಲು ತೀರ್ಮಾನಿಸಿದೆ.</p>.<p>ಹಳೆಯ ತಪ್ಪಿಗೆ ತಿದ್ದುಪಡಿ: ಹಿಂದಿನ ನೇಮಕಾತಿ ಪ್ರಕ್ರಿಯೆಯಲ್ಲಿ ‘ಪವಿತ್ರ’ ಪೋರ್ಟಲ್ ಮೂಲಕ ಕನ್ನಡ ಹಾಗೂ ಉರ್ದು ಮಾಧ್ಯಮ ಶಾಲೆಗಳಿಗೆ ಮರಾಠಿ ಮಾಧ್ಯಮದ ಶಿಕ್ಷಕರನ್ನು ನಿಯೋಜಿಸ ಲಾಗಿತ್ತು. ಇದರಿಂದ ಗಡಿಭಾಗದ ಕನ್ನಡಿಗರು ಹಾಗೂ ಭಾಷಾ ಹೋರಾಟಗಾರರಲ್ಲಿ ಆಕ್ರೋಶ ವ್ಯಕ್ತವಾಗಿತ್ತು.</p>.<p>ಮರಾಠಿ ಮಾತ್ರ ಬಲ್ಲ ಶಿಕ್ಷಕರು ಕನ್ನಡ ಶಾಲೆಗಳಲ್ಲಿ ಪರಿಣಾಮಕಾರಿಯಾಗಿ ಬೋಧನೆ ನಡೆಸಲು ಸಾಧ್ಯವಿಲ್ಲ ಎಂಬ ಆಕ್ಷೇಪ ಕೇಳಿಬಂದಿತ್ತು.</p>.<p>ಈ ಬಗ್ಗೆ ಜತ್ತ ತಾಲ್ಲೂಕಿನ ಮಾಜಿ ಶಾಸಕ ವಿಕ್ರಮಸಿಂಹ ಸಾವಂತ ನೇತೃತ್ವದಲ್ಲಿ ಆದರ್ಶ ಕನ್ನಡ ಬಳಗ ಮಹಾರಾಷ್ಟ್ರವು ಹೋರಾಟ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರು ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ಭೇಟಿ ನೀಡಿ, ಮಹಾರಾಷ್ಟ್ರ ಸರ್ಕಾರದ ಗಮನಕ್ಕೆ ವಿಷಯ ತಂದಿದ್ದರು.</p>.<p>‘ಮಹಾರಾಷ್ಟ್ರ ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಭಾಷಾ ಅಲ್ಪಸಂಖ್ಯಾತರಿಗೆ ಸಂವಿಧಾನಾತ್ಮಕ ಹಕ್ಕುಗಳನ್ನು ಒದಗಿಸುವುದು ಆಯಾ ರಾಜ್ಯ ಸರ್ಕಾರಗಳ ಪ್ರಮುಖ ಜವಾಬ್ದಾರಿ’ ಎಂದು ಸೋಮಣ್ಣ ಬೇವಿನಮರದ ಪ್ರತಿಕ್ರಿಯಿಸಿದ್ದಾರೆ.</p>
<p><strong>ಸೊಲ್ಲಾಪುರ</strong>: ಮಹಾರಾಷ್ಟ್ರದ ಕನ್ನಡ ಹಾಗೂ ಉರ್ದು ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕಳೆದ ಕೆಲವು ವರ್ಷಗಳಿಂದ ಉಂಟಾಗಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ.</p>.<p>ಮಹಾರಾಷ್ಟ್ರ ಶಿಕ್ಷಣ ಇಲಾಖೆಯ ‘ಪವಿತ್ರ ಪೋರ್ಟಲ್’ ತಂತ್ರಾಂಶದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದು, ಇನ್ಮುಂದೆ ಶಾಲೆಗಳ ಬೋಧನಾ ಮಾಧ್ಯಮಕ್ಕೆ ಅನುಗುಣವಾಗಿಯೇ ಶಿಕ್ಷಕರ ನೇಮಕಾತಿ ನಡೆಸಲು ತೀರ್ಮಾನಿಸಿದೆ.</p>.<p>ಹಳೆಯ ತಪ್ಪಿಗೆ ತಿದ್ದುಪಡಿ: ಹಿಂದಿನ ನೇಮಕಾತಿ ಪ್ರಕ್ರಿಯೆಯಲ್ಲಿ ‘ಪವಿತ್ರ’ ಪೋರ್ಟಲ್ ಮೂಲಕ ಕನ್ನಡ ಹಾಗೂ ಉರ್ದು ಮಾಧ್ಯಮ ಶಾಲೆಗಳಿಗೆ ಮರಾಠಿ ಮಾಧ್ಯಮದ ಶಿಕ್ಷಕರನ್ನು ನಿಯೋಜಿಸ ಲಾಗಿತ್ತು. ಇದರಿಂದ ಗಡಿಭಾಗದ ಕನ್ನಡಿಗರು ಹಾಗೂ ಭಾಷಾ ಹೋರಾಟಗಾರರಲ್ಲಿ ಆಕ್ರೋಶ ವ್ಯಕ್ತವಾಗಿತ್ತು.</p>.<p>ಮರಾಠಿ ಮಾತ್ರ ಬಲ್ಲ ಶಿಕ್ಷಕರು ಕನ್ನಡ ಶಾಲೆಗಳಲ್ಲಿ ಪರಿಣಾಮಕಾರಿಯಾಗಿ ಬೋಧನೆ ನಡೆಸಲು ಸಾಧ್ಯವಿಲ್ಲ ಎಂಬ ಆಕ್ಷೇಪ ಕೇಳಿಬಂದಿತ್ತು.</p>.<p>ಈ ಬಗ್ಗೆ ಜತ್ತ ತಾಲ್ಲೂಕಿನ ಮಾಜಿ ಶಾಸಕ ವಿಕ್ರಮಸಿಂಹ ಸಾವಂತ ನೇತೃತ್ವದಲ್ಲಿ ಆದರ್ಶ ಕನ್ನಡ ಬಳಗ ಮಹಾರಾಷ್ಟ್ರವು ಹೋರಾಟ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರು ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ಭೇಟಿ ನೀಡಿ, ಮಹಾರಾಷ್ಟ್ರ ಸರ್ಕಾರದ ಗಮನಕ್ಕೆ ವಿಷಯ ತಂದಿದ್ದರು.</p>.<p>‘ಮಹಾರಾಷ್ಟ್ರ ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಭಾಷಾ ಅಲ್ಪಸಂಖ್ಯಾತರಿಗೆ ಸಂವಿಧಾನಾತ್ಮಕ ಹಕ್ಕುಗಳನ್ನು ಒದಗಿಸುವುದು ಆಯಾ ರಾಜ್ಯ ಸರ್ಕಾರಗಳ ಪ್ರಮುಖ ಜವಾಬ್ದಾರಿ’ ಎಂದು ಸೋಮಣ್ಣ ಬೇವಿನಮರದ ಪ್ರತಿಕ್ರಿಯಿಸಿದ್ದಾರೆ.</p>