‘ಶತಮಾನಗಳಿಂದ ವೈಷ್ಣವ ಸಂಪ್ರದಾಯದಂತೆ ಪೂಜಾ ವಿಧಿವಿಧಾನ ನಡೆಸಲಾಗುತ್ತಿದೆ. ಈ ಬಾರಿಯ ಶಿವರಾತ್ರಿ ಸಂದರ್ಭದಲ್ಲಿ ಬಿಲ್ವಾರ್ಚನೆ, ರುದ್ರ ಪಾರಾಯಣ, ರುದ್ರ ಹೋಮ ಸೇರಿ ಶೈವ ಸಂಪ್ರದಾಯದ ಪ್ರಕಾರ ಹೊಸ ಆಚರಣೆಗಳಿಗೆ ಅವಕಾಶ ಕಲ್ಪಿಸಿ ಮಾ.3ರಂದು ಆದೇಶ ಹೊರಡಿಸಲಾಗಿದೆ. ಇದು ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಕಾಯ್ದೆಯ ಉಲ್ಲಂಘನೆಯಾಗಿದೆ’ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು.