<p><strong>ಬೆಂಗಳೂರು</strong>: ‘ಭಗವಾನ್ ಮಹಾವೀರ ಅವರು ಅಹಿಂಸಾ ತತ್ವವನ್ನು ಜಗತ್ತಿಗೆ ಸಾರಿದರು. ಅಹಿಂಸೆಯೇ ಪರಮ ಧರ್ಮ ಎಂಬ ಅವರ ಮಾತು ಇಂದಿಗೂ, ಎಂದಿಗೂ ಪ್ರಸ್ತುತ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಜೈನ್ ಯುವ ಸಂಘಟನೆ ನಗರದಲ್ಲಿ ಗುರುವಾರ ಆಯೋಜಿಸಿದ್ದ ‘ಮಹಾವೀರ ಜಯಂತಿ ಹಾಗೂ ಅಹಿಂಸಾ ಮತ್ತು ವಿಶ್ವಶಾಂತಿ ಸಮಾವೇಶ’ದಲ್ಲಿ ಅವರು ಮಾತನಾಡಿದರು. ‘ಅಹಿಂಸಾ ತತ್ವದ ಪಾಲನೆಯಿಂದ ಎಲ್ಲರಿಗೂ ಒಳಿತಾಗುತ್ತದೆ. ಜೈನ ಧರ್ಮ ಮತ್ತು ಮಹಾವೀರರು ಮಾನವೀಯತೆಯನ್ನು ಬೋಧಿಸಿದರು. ಅದನ್ನು ಎಲ್ಲರೂ ಅಳವಡಿಸಿಕೊಳ್ಳಬಹುದು’ ಎಂದರು.</p>.<p>ಸಂಸದ ಪಿ.ಸಿ.ಮೋಹನ್, ‘ಜೈನ ಧರ್ಮ ಬೋಧಿಸಿದ ಮಾನವೀಯತೆಯ ಪಾಠವನ್ನು ಜೈನ್ ಯುವ ಸಂಘಟನೆ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಅನುಸರಿಸಿಕೊಂಡು ಬರುತ್ತಿದೆ. ರಕ್ತದಾನ, ಅಶಕ್ತರಿಗೆ ಆರ್ಥಿಕ ನೆರವು, ಉಚಿತ ಆರೋಗ್ಯ ತಪಾಸಣೆ, ಅನ್ನಸಂತರ್ಪಣೆಗಳಲ್ಲಿ ತೊಡಗಿಸಿಕೊಂಡಿದೆ’ ಎಂದು ಶ್ಲಾಘಿಸಿದರು.</p>.<p>ಇದಕ್ಕೂ ಮುನ್ನ ನಗರದ ಪುರಭವನ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಸಂಘಟನೆಯ ಸದಸ್ಯರು ಶೋಭಾಯಾತ್ರೆ ನಡೆಸಿದರು. ಮೆರವಣಿಗೆಯಲ್ಲಿದ್ದ ಹಿರಿಯರು ಮಹಾವೀರರ ತತ್ವಗಳನ್ನು ಕುರಿತ ಹಾಡುಗಳನ್ನು ಹಾಡುತ್ತಾ ನಡೆದರೆ, ಯುವಕರು ಅಂಗಡಿ–ಅಂಗಡಿಗೆ ಭೇಟಿ ನೀಡಿ ಗೋ ಸೇವೆಗಾಗಿ ದೇಣಿಗೆ ಸಂಗ್ರಹಿಸಿದರು.</p>.<p>ಸ್ವಾತಂತ್ರ್ಯ ಉದ್ಯಾನದಲ್ಲಿ ಶಾಂತಿ ಸಮಾವೇಶದ ಭಾಗವಾಗಿ ಆಯೋಜಿಸಲಾಗಿದ್ದ ಶಿಬಿರದಲ್ಲಿ 500ಕ್ಕೂ ಹೆಚ್ಚು ಯುವಕರು ರಕ್ತದಾನ ಮಾಡಿದರು. ಕಣ್ಣು ಮತ್ತು ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಿದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರಿಗೆ ಉಚಿತವಾಗಿ ಮಜ್ಜಿಗೆ, ತಂಪಾದ ನೀರು ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಭಗವಾನ್ ಮಹಾವೀರ ಅವರು ಅಹಿಂಸಾ ತತ್ವವನ್ನು ಜಗತ್ತಿಗೆ ಸಾರಿದರು. ಅಹಿಂಸೆಯೇ ಪರಮ ಧರ್ಮ ಎಂಬ ಅವರ ಮಾತು ಇಂದಿಗೂ, ಎಂದಿಗೂ ಪ್ರಸ್ತುತ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಜೈನ್ ಯುವ ಸಂಘಟನೆ ನಗರದಲ್ಲಿ ಗುರುವಾರ ಆಯೋಜಿಸಿದ್ದ ‘ಮಹಾವೀರ ಜಯಂತಿ ಹಾಗೂ ಅಹಿಂಸಾ ಮತ್ತು ವಿಶ್ವಶಾಂತಿ ಸಮಾವೇಶ’ದಲ್ಲಿ ಅವರು ಮಾತನಾಡಿದರು. ‘ಅಹಿಂಸಾ ತತ್ವದ ಪಾಲನೆಯಿಂದ ಎಲ್ಲರಿಗೂ ಒಳಿತಾಗುತ್ತದೆ. ಜೈನ ಧರ್ಮ ಮತ್ತು ಮಹಾವೀರರು ಮಾನವೀಯತೆಯನ್ನು ಬೋಧಿಸಿದರು. ಅದನ್ನು ಎಲ್ಲರೂ ಅಳವಡಿಸಿಕೊಳ್ಳಬಹುದು’ ಎಂದರು.</p>.<p>ಸಂಸದ ಪಿ.ಸಿ.ಮೋಹನ್, ‘ಜೈನ ಧರ್ಮ ಬೋಧಿಸಿದ ಮಾನವೀಯತೆಯ ಪಾಠವನ್ನು ಜೈನ್ ಯುವ ಸಂಘಟನೆ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಅನುಸರಿಸಿಕೊಂಡು ಬರುತ್ತಿದೆ. ರಕ್ತದಾನ, ಅಶಕ್ತರಿಗೆ ಆರ್ಥಿಕ ನೆರವು, ಉಚಿತ ಆರೋಗ್ಯ ತಪಾಸಣೆ, ಅನ್ನಸಂತರ್ಪಣೆಗಳಲ್ಲಿ ತೊಡಗಿಸಿಕೊಂಡಿದೆ’ ಎಂದು ಶ್ಲಾಘಿಸಿದರು.</p>.<p>ಇದಕ್ಕೂ ಮುನ್ನ ನಗರದ ಪುರಭವನ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಸಂಘಟನೆಯ ಸದಸ್ಯರು ಶೋಭಾಯಾತ್ರೆ ನಡೆಸಿದರು. ಮೆರವಣಿಗೆಯಲ್ಲಿದ್ದ ಹಿರಿಯರು ಮಹಾವೀರರ ತತ್ವಗಳನ್ನು ಕುರಿತ ಹಾಡುಗಳನ್ನು ಹಾಡುತ್ತಾ ನಡೆದರೆ, ಯುವಕರು ಅಂಗಡಿ–ಅಂಗಡಿಗೆ ಭೇಟಿ ನೀಡಿ ಗೋ ಸೇವೆಗಾಗಿ ದೇಣಿಗೆ ಸಂಗ್ರಹಿಸಿದರು.</p>.<p>ಸ್ವಾತಂತ್ರ್ಯ ಉದ್ಯಾನದಲ್ಲಿ ಶಾಂತಿ ಸಮಾವೇಶದ ಭಾಗವಾಗಿ ಆಯೋಜಿಸಲಾಗಿದ್ದ ಶಿಬಿರದಲ್ಲಿ 500ಕ್ಕೂ ಹೆಚ್ಚು ಯುವಕರು ರಕ್ತದಾನ ಮಾಡಿದರು. ಕಣ್ಣು ಮತ್ತು ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಿದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರಿಗೆ ಉಚಿತವಾಗಿ ಮಜ್ಜಿಗೆ, ತಂಪಾದ ನೀರು ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>