<p><strong>ಬೆಂಗಳೂರು:</strong> ಪ್ರಗತಿಪರ ಚಿಂತಕ- ಮಹೇಂದ್ರ ಕುಮಾರ್ ಶನಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 47 ವರ್ಷ ವಯಸ್ಸಾಗಿತ್ತು.</p>.<p>ಶುಕ್ರವಾರ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ನಿಧನರಾದರು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.</p>.<p>ಮೃತರ ಅಂತ್ಯಕ್ರಿಯೆಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆಸಲು ಏರ್ಪಾಡು ಮಾಡಲಾಗುತ್ತಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.<br /><br />ಮಹೇಂದ್ರಕುಮಾರ್(47) ಅವರು ರಾಮೇಗೌಡ ಮತ್ತು ಸುನಂದಾ ದಂಪತಿಯ ಕೊನೆಯ ಪುತ್ರ.ಅವರಿಗೆ ಪತ್ನಿ ಸುಮಾ, ಪುತ್ರರಾದ ಶಂತನು, ಆರ್ಯ ಇದ್ದಾರೆ.</p>.<p>ಮಹೇಂದ್ರ ಕುಮಾರ್ ಅವರು ಕೆಲಕಾಲ ಮುಂಬೈನಲ್ಲಿ ಇದ್ದರು.ನಂತರ ಕೊಪ್ಪದಲ್ಲಿ ಸ್ವಂತ ಉದ್ದಿಮೆ, ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು.</p>.<p>ಮಹೇಂದ್ರಕುಮಾರ್ ಅವರು ತಾಲ್ಲೂಕು ಬಜರಂಗದಳ ಸಂಚಾಲಕರಾಗಿ, ಜಿಲ್ಲಾ, ರಾಜ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದರು. 2007 ರ ನಂತರದಲ್ಲಿ ಸಂಘ ಪರಿವಾರದ ಚಟುವಟಿಕೆ ತೊರೆದಿದ್ದರು.</p>.<p>ಮಾಜಿ ಶಿಕ್ಷಣ ಸಚಿವ ದಿವಂಗತ ಗೋವಿಂದೇಗೌಡ ಅವರ ಶಿಷ್ಯರಾಗಿದ್ದರು. ಕೆಲ ವರ್ಷಗಳ ಹಿಂದೆ ಜೆಡಿಎಸ್ ಸೇರಿದ್ದರು.</p>.<p>'ನಮ್ಮ ಧ್ವನಿ' ಬಳಗ ಪ್ರಾರಂಭಿಸಿದ್ದ ಅವರು,ಸಿಎಎ, ಎನ್ಆರ್ ಸಿ ವಿರೋಧಿ ಆಂದೋಲನಗಳಲ್ಲಿ ತೊಡಗಿಸಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರಗತಿಪರ ಚಿಂತಕ- ಮಹೇಂದ್ರ ಕುಮಾರ್ ಶನಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 47 ವರ್ಷ ವಯಸ್ಸಾಗಿತ್ತು.</p>.<p>ಶುಕ್ರವಾರ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ನಿಧನರಾದರು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.</p>.<p>ಮೃತರ ಅಂತ್ಯಕ್ರಿಯೆಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆಸಲು ಏರ್ಪಾಡು ಮಾಡಲಾಗುತ್ತಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.<br /><br />ಮಹೇಂದ್ರಕುಮಾರ್(47) ಅವರು ರಾಮೇಗೌಡ ಮತ್ತು ಸುನಂದಾ ದಂಪತಿಯ ಕೊನೆಯ ಪುತ್ರ.ಅವರಿಗೆ ಪತ್ನಿ ಸುಮಾ, ಪುತ್ರರಾದ ಶಂತನು, ಆರ್ಯ ಇದ್ದಾರೆ.</p>.<p>ಮಹೇಂದ್ರ ಕುಮಾರ್ ಅವರು ಕೆಲಕಾಲ ಮುಂಬೈನಲ್ಲಿ ಇದ್ದರು.ನಂತರ ಕೊಪ್ಪದಲ್ಲಿ ಸ್ವಂತ ಉದ್ದಿಮೆ, ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು.</p>.<p>ಮಹೇಂದ್ರಕುಮಾರ್ ಅವರು ತಾಲ್ಲೂಕು ಬಜರಂಗದಳ ಸಂಚಾಲಕರಾಗಿ, ಜಿಲ್ಲಾ, ರಾಜ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದರು. 2007 ರ ನಂತರದಲ್ಲಿ ಸಂಘ ಪರಿವಾರದ ಚಟುವಟಿಕೆ ತೊರೆದಿದ್ದರು.</p>.<p>ಮಾಜಿ ಶಿಕ್ಷಣ ಸಚಿವ ದಿವಂಗತ ಗೋವಿಂದೇಗೌಡ ಅವರ ಶಿಷ್ಯರಾಗಿದ್ದರು. ಕೆಲ ವರ್ಷಗಳ ಹಿಂದೆ ಜೆಡಿಎಸ್ ಸೇರಿದ್ದರು.</p>.<p>'ನಮ್ಮ ಧ್ವನಿ' ಬಳಗ ಪ್ರಾರಂಭಿಸಿದ್ದ ಅವರು,ಸಿಎಎ, ಎನ್ಆರ್ ಸಿ ವಿರೋಧಿ ಆಂದೋಲನಗಳಲ್ಲಿ ತೊಡಗಿಸಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>