ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 100ಕ್ಕಿಂತಲೂ ಕಡಿಮೆ ಪ್ರಕರಣಗಳು ವರದಿಯಾಗಿವೆ.
24 ಗಂಟೆ ಅವಧಿಯಲ್ಲಿ ರಾಜ್ಯದಾದ್ಯಂತ 214 ಜನರಿಗೆ ಸೋಂಕು ತಗುಲಿದ್ದು, 12 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂಬುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ.
ರಾಜ್ಯದಾದ್ಯಂತ ಈವರೆಗೆ29.83 ಲಕ್ಷ ಮಂದಿ ಸೋಂಕಿಗೊಳಪಟ್ಟಂತಾಗಿದೆ. ಕೋವಿಡ್ ದೃಢ ಪ್ರಮಾಣವು ಶೇ0.27ರಷ್ಟಿದೆ.
ಈ ಮಧ್ಯೆ ಮೃತರ ಸಂಖ್ಯೆ ದಿಢೀರ್ ಏರಿದೆ. ಸೋಮವಾರ ಒಟ್ಟು 12 ಮಂದಿ ಅಸುನೀಗಿದ್ದು,ಮರಣ ಪ್ರಮಾಣ ದರವುಶೇ 5.61ಕ್ಕೆ ಏರಿಕೆಯಾಗಿದೆ. ಈವರೆಗೆ ಮೃತಪಟ್ಟವರ ಸಂಖ್ಯೆ37,953ಕ್ಕೆ ಏರಿಕೆಯಾಗಿದೆ.
ಕೋವಿಡ್ ಪೀಡಿತರ ಪೈಕಿ488 ಜನರಿಗೆ ಕಾಯಿಲೆ ವಾಸಿಯಾಗಿದೆ. ಈವರೆಗೆ29.36 ಲಕ್ಷ ಮಂದಿ ಗುಣಮುಖರಾದಂತಾಗಿದೆ. ಸಕ್ರಿಯ ಪ್ರಕರಣಗಳು ಮತ್ತಷ್ಟು ಇಳಿಕೆಯಾಗಿವೆ. ಸದ್ಯ9,164 ಜನ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿಂದಿನ 24 ಗಂಟೆಗಳಲ್ಲಿ 77,901 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ಬೆಂಗಳೂರಿನಲ್ಲಿ ಗಣನೀಯ ಇಳಿಕೆ
ಬೆಂಗಳೂರಿನಲ್ಲಿ ಹೊಸ ಪ್ರಕರಣಗಳು ಗಣನೀಯ ಇಳಿಕೆ ಕಂಡಿವೆ. ಸೋಮವಾರ 83 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ದಕ್ಷಿಣ ಕನ್ನಡ (22), ಹಾಸನ (13), ಮೈಸೂರು (27), ಶಿವಮೊಗ್ಗ (13) ಮತ್ತು ತುಮಕೂರಿನಲ್ಲೂ (14) ಹೊಸ ಪ್ರಕರಣಗಳು ಕಡಿಮೆ ಇವೆ. ಬಾಗಲಕೋಟೆ, ಬೆಳಗಾವಿ, ಚಿಕ್ಕಬಳ್ಳಾಪುರ, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ. 12 ಜಿಲ್ಲೆಗಳಲ್ಲಿ ಇದು ಒಂದಂಕಿಯಷ್ಟಿದೆ.
ಬೆಂಗಳೂರಿನಲ್ಲಿ 4 ಮರಣ ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ ಇಬ್ಬರು ಅಸುನೀಗಿದ್ದಾರೆ. ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಮಂಡ್ಯ, ತುಮಕೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ಮೃತರೆಲ್ಲರೂ 48 ವರ್ಷ ಮೇಲ್ಪಟ್ಟವರು.
New cases in Bengaluru fall below 100:
— Dr Sudhakar K (@mla_sudhakar) October 18, 2021
🌀 New cases in State: 214
🌀 New cases in B'lore: 83
🌀 Positivity rate: 0.27%
🌀 Discharges: 488 (B'lore- 151)
🌀 Deaths: 12 (B'lore- 04)
🌀 Active cases in State: 9,164
🌀 Active cases in B'lore: 6,745
🌀 Tests: 77,901#COVID19
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.