<p><strong>ಬೆಂಗಳೂರು:</strong> ‘ಅತಿಯಾಗಿ ಸಂಸ್ಕರಿಸಿದ ಆಹಾರವು ಜೀವಕ್ಕೆ ಅಪಾಯ ತಂದೊಡ್ದುತ್ತಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ (ಐಸಿಎಂಆರ್) ಪ್ರಕಾರ ದೇಶದಲ್ಲಿ 2050ರ ವೇಳೆಗೆ ಮೂರನೇ ಒಂದರಷ್ಟು ಮಂದಿ ಸ್ಥೂಲಕಾಯ ಸಮಸ್ಯೆಗೆ ಒಳಗಾಗುವ ಸಾಧ್ಯತೆಯಿದೆ’ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಕಳವಳ ವ್ಯಕ್ತಪಡಿಸಿದರು. </p>.<p>ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್ಎಸ್ಎಸ್ಎಐ) ಶನಿವಾರ ಇಲ್ಲಿ ಹಮ್ಮಿಕೊಂಡಿದ್ದ ವಿಶ್ವ ಆಹಾರ ಸುರಕ್ಷತೆ ದಿನದ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. </p>.<p>‘ಸ್ಥೂಲಕಾಯ ಸಮಸ್ಯೆ ವೇಗವಾಗಿ ಬೆಳೆಯುತ್ತಿದೆ. 2008ರಿಂದ 2020ರ ಅವಧಿಯಲ್ಲಿ ಐಸಿಎಂಆರ್ ನಡೆಸಿರುವ ಅಧ್ಯಯನದ ಪ್ರಕಾರ ನಗರ ಪ್ರದೇಶದಲ್ಲಿ ಸ್ಥೂಲಕಾಯ ಶೇ 39.6 ರಷ್ಟು ಹೆಚ್ಚಳವಾದರೆ, ಗ್ರಾಮೀಣ ಪ್ರದೇಶದಲ್ಲಿ ಶೇ 23.1 ರಷ್ಟು ಏರಿಕೆಯಾಗಿದೆ. ನಮ್ಮಲ್ಲಿನ ಆಹಾರ ಪದ್ಧತಿ ಹೇಗೆ ಬದಲಾಗಿದೆ ಎನ್ನುವುದಕ್ಕೆ ಈ ಏರಿಕೆ ಉತ್ತಮ ನಿದರ್ಶನ’ ಎಂದರು. </p>.<p>‘ಅತಿಯಾಗಿ ಸಂಸ್ಕರಿಸಿದ ಆಹಾರದ ಬಳಕೆಗೆ ಕಡಿವಾಣ ಹಾಕಬೇಕಿದೆ. ಉತ್ತರಾಖಂಡದಲ್ಲಿ ಅಡುಗೆ ಎಣ್ಣೆ ಬಳಕೆಯನ್ನು ಶೇ 10ರಷ್ಟು ಕಡಿತಮಾಡಲಾಗಿದೆ. ಉಪ್ಪು ಬಳಕೆಯನ್ನೂ ಕಡಿಮೆ ಮಾಡಲಾಗಿದೆ. ಇದು ಜಾಗೃತಿಯಿಂದ ಸಾಧ್ಯವಾಗಿದೆ. ಆಹಾರ ಪದಾರ್ಥಗಳಲ್ಲಿ ಸಕ್ಕರೆ, ಎಣ್ಣೆ ಬಳಕೆಯನ್ನು ಕಡಿಮೆ ಮಾಡಬೇಕು. ಈ ಬಗ್ಗೆ ಶಾಲಾ–ಕಾಲೇಜುಗಳಲ್ಲಿಯೂ ಜಾಗೃತಿ ಮೂಡಿಸಲಾಗುತ್ತಿದೆ. ಸಾಂಪ್ರದಾಯಿಕ ಹಾಗೂ ಸಿರಿಧಾನ್ಯಯುಕ್ತ ಆಹಾರ ಪದಾರ್ಥಗಳ ಸೇವನೆಗೆ ಒತ್ತು ನೀಡಬೇಕು‘ ಎಂದು ಹೇಳಿದರು. </p>.<h2><strong>ಆಹಾರದ ಬಗ್ಗೆ ಜಾಗೃತಿ</strong>: </h2><p>ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ, ‘ಪ್ರಾಚೀನ ಆಹಾರ ಪದ್ಧತಿ ಅತ್ಯುತ್ತಮವಾದದ್ದಾಗಿದೆ. ಆದರೆ, ಮಕ್ಕಳು ಪಾಶ್ಚಾತ್ಯ ಆಹಾರ ಪದ್ಧತಿಗೆ ಆಕರ್ಷಿತರಾಗುತ್ತಿದ್ದಾರೆ. ರುಚಿ, ಬಣ್ಣಕ್ಕಾಗಿ ಆಹಾರ ಪದಾರ್ಥಗಳಿಗೆ ವಿವಿಧ ನಿಷೇಧಿತ ರಾಸಾಯನಿಕಗಳನ್ನು ಸೇರ್ಪಡೆ ಆಗುತ್ತಿದ್ದು, ಇದನ್ನು ತಡೆಯಲು ಕೇಂದ್ರ, ರಾಜ್ಯ ಸರ್ಕಾರ ಈ ಬಗ್ಗೆ ನಿಗಾವಹಿಸುತ್ತಿದೆ‘ ಎಂದರು.</p>.<p>ಎಫ್ಎಸ್ಎಸ್ಎಐ ಕಾರ್ಯನಿರ್ವಾಹಕ ನಿರ್ದೇಶಕ ಯು.ಎಸ್.ಧ್ಯಾನಿ, ‘ಸರ್ವರಿಗೂ ಸುರಕ್ಷಿತ ಆಹಾರ ಲಭ್ಯವಾಗಬೇಕು. ಆಹಾರ ಪ್ರಯೋಗಾಲಯಗಳ ಜಾಲ ವಿಸ್ತರಣೆ, ಮೊಬೈಲ್ ವಾಹನಗಳ ಕಾರ್ಯಾಚರಣೆ, ತರಬೇತಿ ಸೇರಿ ವಿವಿಧ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು. </p>.<p>ಆರೋಗ್ಯಕರ ಆಹಾರ ಪದ್ಧತಿಗಳ ಕುರಿತು ತರಬೇತಿ, ಪರೀಕ್ಷೆ ಮತ್ತು ಸಾರ್ವಜನಿಕ ಜಾಗೃತಿ ಮೂಡಿಸುವ ‘ಫುಡ್ ಸೇಫ್ಟಿ ಆನ್ ವೀಲ್ಸ್’ ಮೊಬೈಲ್ ಘಟಕವನ್ನು ಇದೇ ವೇಳೆ ಉದ್ಘಾಟಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅತಿಯಾಗಿ ಸಂಸ್ಕರಿಸಿದ ಆಹಾರವು ಜೀವಕ್ಕೆ ಅಪಾಯ ತಂದೊಡ್ದುತ್ತಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ (ಐಸಿಎಂಆರ್) ಪ್ರಕಾರ ದೇಶದಲ್ಲಿ 2050ರ ವೇಳೆಗೆ ಮೂರನೇ ಒಂದರಷ್ಟು ಮಂದಿ ಸ್ಥೂಲಕಾಯ ಸಮಸ್ಯೆಗೆ ಒಳಗಾಗುವ ಸಾಧ್ಯತೆಯಿದೆ’ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಕಳವಳ ವ್ಯಕ್ತಪಡಿಸಿದರು. </p>.<p>ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್ಎಸ್ಎಸ್ಎಐ) ಶನಿವಾರ ಇಲ್ಲಿ ಹಮ್ಮಿಕೊಂಡಿದ್ದ ವಿಶ್ವ ಆಹಾರ ಸುರಕ್ಷತೆ ದಿನದ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. </p>.<p>‘ಸ್ಥೂಲಕಾಯ ಸಮಸ್ಯೆ ವೇಗವಾಗಿ ಬೆಳೆಯುತ್ತಿದೆ. 2008ರಿಂದ 2020ರ ಅವಧಿಯಲ್ಲಿ ಐಸಿಎಂಆರ್ ನಡೆಸಿರುವ ಅಧ್ಯಯನದ ಪ್ರಕಾರ ನಗರ ಪ್ರದೇಶದಲ್ಲಿ ಸ್ಥೂಲಕಾಯ ಶೇ 39.6 ರಷ್ಟು ಹೆಚ್ಚಳವಾದರೆ, ಗ್ರಾಮೀಣ ಪ್ರದೇಶದಲ್ಲಿ ಶೇ 23.1 ರಷ್ಟು ಏರಿಕೆಯಾಗಿದೆ. ನಮ್ಮಲ್ಲಿನ ಆಹಾರ ಪದ್ಧತಿ ಹೇಗೆ ಬದಲಾಗಿದೆ ಎನ್ನುವುದಕ್ಕೆ ಈ ಏರಿಕೆ ಉತ್ತಮ ನಿದರ್ಶನ’ ಎಂದರು. </p>.<p>‘ಅತಿಯಾಗಿ ಸಂಸ್ಕರಿಸಿದ ಆಹಾರದ ಬಳಕೆಗೆ ಕಡಿವಾಣ ಹಾಕಬೇಕಿದೆ. ಉತ್ತರಾಖಂಡದಲ್ಲಿ ಅಡುಗೆ ಎಣ್ಣೆ ಬಳಕೆಯನ್ನು ಶೇ 10ರಷ್ಟು ಕಡಿತಮಾಡಲಾಗಿದೆ. ಉಪ್ಪು ಬಳಕೆಯನ್ನೂ ಕಡಿಮೆ ಮಾಡಲಾಗಿದೆ. ಇದು ಜಾಗೃತಿಯಿಂದ ಸಾಧ್ಯವಾಗಿದೆ. ಆಹಾರ ಪದಾರ್ಥಗಳಲ್ಲಿ ಸಕ್ಕರೆ, ಎಣ್ಣೆ ಬಳಕೆಯನ್ನು ಕಡಿಮೆ ಮಾಡಬೇಕು. ಈ ಬಗ್ಗೆ ಶಾಲಾ–ಕಾಲೇಜುಗಳಲ್ಲಿಯೂ ಜಾಗೃತಿ ಮೂಡಿಸಲಾಗುತ್ತಿದೆ. ಸಾಂಪ್ರದಾಯಿಕ ಹಾಗೂ ಸಿರಿಧಾನ್ಯಯುಕ್ತ ಆಹಾರ ಪದಾರ್ಥಗಳ ಸೇವನೆಗೆ ಒತ್ತು ನೀಡಬೇಕು‘ ಎಂದು ಹೇಳಿದರು. </p>.<h2><strong>ಆಹಾರದ ಬಗ್ಗೆ ಜಾಗೃತಿ</strong>: </h2><p>ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ, ‘ಪ್ರಾಚೀನ ಆಹಾರ ಪದ್ಧತಿ ಅತ್ಯುತ್ತಮವಾದದ್ದಾಗಿದೆ. ಆದರೆ, ಮಕ್ಕಳು ಪಾಶ್ಚಾತ್ಯ ಆಹಾರ ಪದ್ಧತಿಗೆ ಆಕರ್ಷಿತರಾಗುತ್ತಿದ್ದಾರೆ. ರುಚಿ, ಬಣ್ಣಕ್ಕಾಗಿ ಆಹಾರ ಪದಾರ್ಥಗಳಿಗೆ ವಿವಿಧ ನಿಷೇಧಿತ ರಾಸಾಯನಿಕಗಳನ್ನು ಸೇರ್ಪಡೆ ಆಗುತ್ತಿದ್ದು, ಇದನ್ನು ತಡೆಯಲು ಕೇಂದ್ರ, ರಾಜ್ಯ ಸರ್ಕಾರ ಈ ಬಗ್ಗೆ ನಿಗಾವಹಿಸುತ್ತಿದೆ‘ ಎಂದರು.</p>.<p>ಎಫ್ಎಸ್ಎಸ್ಎಐ ಕಾರ್ಯನಿರ್ವಾಹಕ ನಿರ್ದೇಶಕ ಯು.ಎಸ್.ಧ್ಯಾನಿ, ‘ಸರ್ವರಿಗೂ ಸುರಕ್ಷಿತ ಆಹಾರ ಲಭ್ಯವಾಗಬೇಕು. ಆಹಾರ ಪ್ರಯೋಗಾಲಯಗಳ ಜಾಲ ವಿಸ್ತರಣೆ, ಮೊಬೈಲ್ ವಾಹನಗಳ ಕಾರ್ಯಾಚರಣೆ, ತರಬೇತಿ ಸೇರಿ ವಿವಿಧ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು. </p>.<p>ಆರೋಗ್ಯಕರ ಆಹಾರ ಪದ್ಧತಿಗಳ ಕುರಿತು ತರಬೇತಿ, ಪರೀಕ್ಷೆ ಮತ್ತು ಸಾರ್ವಜನಿಕ ಜಾಗೃತಿ ಮೂಡಿಸುವ ‘ಫುಡ್ ಸೇಫ್ಟಿ ಆನ್ ವೀಲ್ಸ್’ ಮೊಬೈಲ್ ಘಟಕವನ್ನು ಇದೇ ವೇಳೆ ಉದ್ಘಾಟಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>