‘ಚಿತ್ತಾಪುರದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಹಾಗೂ ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ಪುತ್ರ ವಿಠಲ್ ನಾಯಕ್ ಜೊತೆ ಆರೋಪಿಗಳಿಗೆ ಸಂಪರ್ಕವಿದೆ. ಬಿಜೆಪಿಯವರು ಹಣ ಮಾಡಲು ಯಾವುದಕ್ಕೂ ಹೇಸುವುದಿಲ್ಲ’ ಎಂದ ಪ್ರಿಯಾಂಕ್, ಯೋಗಿ ಆದಿತ್ಯನಾಥ ಜೊತೆಗಿರುವ ಫೋಟೋ ಪ್ರದರ್ಶಿಸಿದರು.
ಗರೀಬ್ ಕಲ್ಯಾಣ್ ಅಕ್ಕಿ: ‘ಗರೀಬ್ ಕಲ್ಯಾಣ್ ಯೋಜನೆಯ 700 ಕ್ವಿಂಟಲ್ ಅಕ್ಕಿ ಬಿಜೆಪಿ ನಾಯಕರ ಗೋದಾಮಿನಲ್ಲಿ ಇತ್ತೀಚೆಗೆ ಸಿಕ್ಕಿದೆ. ಮೋದಿ ಅಕ್ಕಿ ಎಂದು ಬೀಗುವ ಬಿಜೆಪಿ ನಾಯಕರು ಅದನ್ನು ಕದ್ದು ಸಿಕ್ಕಿಬಿದ್ದವರನ್ನು ತಮ್ಮ ಪಕ್ಷದಲ್ಲಿ ಯಾಕೆ ಇಟ್ಟುಕೊಂಡಿದ್ದಾರೆ? ಬಿಜೆಪಿ ನಾಯಕರಿಗೆ ಮಣಿಕಂಠ, ಪೃಥ್ವಿ ಸಿಂಗ್, ಸ್ಯಾಂಟ್ರೊ ರವಿ ಮೇಲೆ ಕ್ರಮ ಕೈಗೊಳ್ಳುವ ತಾಕತ್ತು ಬಿಜೆಪಿಯವರಿಗಿಲ್ಲ. ಕಾರಣ ಅವರ ಗುಟ್ಟುಗಳೆಲ್ಲಾ ಇವರ ಬಳಿಯೇ ಇದೆ’ ಎಂದರು.