<p><strong>ಬೆಳಗಾವಿ:</strong> ಮಲಪ್ರಭಾ ನದಿಗೆ ಸವದತ್ತಿ ತಾಲ್ಲೂಕಿನ ನವಿಲುತೀರ್ಥ ಬಳಿ ನಿರ್ಮಿಸಿರುವ ಜಲಾಶಯ (ರೇಣುಕಾ) ಭರ್ತಿಗೆ ಎಂಟು ಅಡಿಗಳಷ್ಟೇ ಬಾಕಿ ಇದೆ.</p>.<p>ಈ ನದಿಯ ಉಗಮ ಸ್ಥಳವಾದ ಕಣಕುಂಬಿ ಹಾಗೂ ಖಾನಾಪುರ ಭಾಗದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ನೀರಿನ ಹರಿವು ಹೆಚ್ಚುತ್ತಿದೆ. ಇದರ ಗರಿಷ್ಠ ಮಟ್ಟ 2079.50 ಅಡಿಗಳು. ಸೋಮವಾರ ಇಲ್ಲಿನ ನೀರಿನ ಮಟ್ಟ 2071 ಅಡಿ ಇತ್ತು. 30,845 ಕ್ಯುಸೆಕ್ ಒಳಹರಿವು ಇದೆ.</p>.<p>ಇದು ಸವದತ್ತಿ, ಹುಬ್ಬಳ್ಳಿ- ಧಾರವಾಡ, ರಾಮದುರ್ಗ, ಬಾದಾಮಿ, ರೋಣ, ನವಲಗುಂದ, ಅಣ್ಣಿಗೇರಿ ಹಾಗೂ ಕುಂದಗೋಳ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವುದಕ್ಕೆ ಪ್ರಮುಖ ಜಲ ಮೂಲವಾಗಿದೆ. 2012ರ ನಂತರ ಇದು ಭರ್ತಿಯಾಗಿರಲಿಲ್ಲ. ಈ ಬಾರಿ ತುಂಬುವ ಸಾಧ್ಯತೆ ಇದೆ.</p>.<p>ವಿಶೇಷವೆಂದರೆ ಕೆಲವೇ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬಂದಿದೆ. ಇದು ಆ ಭಾಗದವರಲ್ಲಿ ಸಂತಸ ಮೂಡಿಸಿದೆ.</p>.<p><strong>ಚಿಕ್ಕಮಗಳೂರು:</strong> ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಬಿರುಸುಗೊಂಡಿದ್ದು, ಮೂಡಿಗೆರೆ ತಾಲ್ಲೂಕಿನಲ್ಲಿ ಶಾಲೆಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.</p>.<p>ಕಳಸ ಭಾಗದಲ್ಲಿ ಮಳೆ ಜೋರಾಗಿದ್ದು ಭದ್ರಾ ನದಿ ಮೈದುಂಬಿಕೊಂಡು ಹರಿಯುತ್ತಿದೆ. ಮಳೆಗಾಳಿ ರಭಸಕ್ಕೆ ಕೊಪ್ಪ ತಾಲ್ಲೂಕಿನ ಕೆಲವೆಡೆ ವಿದ್ಯುತ್ ಪೂರೈಕೆ ಸ್ಥಗಿತವಾಗಿದೆ.ಎನ್.ಆರ್.ಪುರ.ಶೃಂಗೇರಿ ಭಾಗದಲ್ಲಿ ಮಳೆಯಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಮಲಪ್ರಭಾ ನದಿಗೆ ಸವದತ್ತಿ ತಾಲ್ಲೂಕಿನ ನವಿಲುತೀರ್ಥ ಬಳಿ ನಿರ್ಮಿಸಿರುವ ಜಲಾಶಯ (ರೇಣುಕಾ) ಭರ್ತಿಗೆ ಎಂಟು ಅಡಿಗಳಷ್ಟೇ ಬಾಕಿ ಇದೆ.</p>.<p>ಈ ನದಿಯ ಉಗಮ ಸ್ಥಳವಾದ ಕಣಕುಂಬಿ ಹಾಗೂ ಖಾನಾಪುರ ಭಾಗದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ನೀರಿನ ಹರಿವು ಹೆಚ್ಚುತ್ತಿದೆ. ಇದರ ಗರಿಷ್ಠ ಮಟ್ಟ 2079.50 ಅಡಿಗಳು. ಸೋಮವಾರ ಇಲ್ಲಿನ ನೀರಿನ ಮಟ್ಟ 2071 ಅಡಿ ಇತ್ತು. 30,845 ಕ್ಯುಸೆಕ್ ಒಳಹರಿವು ಇದೆ.</p>.<p>ಇದು ಸವದತ್ತಿ, ಹುಬ್ಬಳ್ಳಿ- ಧಾರವಾಡ, ರಾಮದುರ್ಗ, ಬಾದಾಮಿ, ರೋಣ, ನವಲಗುಂದ, ಅಣ್ಣಿಗೇರಿ ಹಾಗೂ ಕುಂದಗೋಳ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವುದಕ್ಕೆ ಪ್ರಮುಖ ಜಲ ಮೂಲವಾಗಿದೆ. 2012ರ ನಂತರ ಇದು ಭರ್ತಿಯಾಗಿರಲಿಲ್ಲ. ಈ ಬಾರಿ ತುಂಬುವ ಸಾಧ್ಯತೆ ಇದೆ.</p>.<p>ವಿಶೇಷವೆಂದರೆ ಕೆಲವೇ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬಂದಿದೆ. ಇದು ಆ ಭಾಗದವರಲ್ಲಿ ಸಂತಸ ಮೂಡಿಸಿದೆ.</p>.<p><strong>ಚಿಕ್ಕಮಗಳೂರು:</strong> ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಬಿರುಸುಗೊಂಡಿದ್ದು, ಮೂಡಿಗೆರೆ ತಾಲ್ಲೂಕಿನಲ್ಲಿ ಶಾಲೆಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.</p>.<p>ಕಳಸ ಭಾಗದಲ್ಲಿ ಮಳೆ ಜೋರಾಗಿದ್ದು ಭದ್ರಾ ನದಿ ಮೈದುಂಬಿಕೊಂಡು ಹರಿಯುತ್ತಿದೆ. ಮಳೆಗಾಳಿ ರಭಸಕ್ಕೆ ಕೊಪ್ಪ ತಾಲ್ಲೂಕಿನ ಕೆಲವೆಡೆ ವಿದ್ಯುತ್ ಪೂರೈಕೆ ಸ್ಥಗಿತವಾಗಿದೆ.ಎನ್.ಆರ್.ಪುರ.ಶೃಂಗೇರಿ ಭಾಗದಲ್ಲಿ ಮಳೆಯಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>