<p><strong>ನವದೆಹಲಿ:</strong> ಮಲಪ್ರಭಾ-ತುಂಗಭದ್ರಾ ಹಾಗೂ ಆಲಮಟ್ಟಿ-ಮಲಪ್ರಭಾ ನದಿಗಳ ಜೋಡಣೆ ಕಾರ್ಯಸಾಧು ಅಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸ್ಪಷ್ಟಪಡಿಸಿದೆ. </p>.<p>ರಾಜ್ಯಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಲಹರ್ ಸಿಂಗ್ ಸಿರೊಯಾ ಪ್ರಶ್ನೆಗೆ ಉತ್ತರಿಸಿರುವ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ, ‘ಭದ್ರಾ-ವೇದಾವತಿ, ಬರಪೊಳೆ-ಕಾವೇರಿ ನದಿಗಳ ಜೋಡಣೆ ಪ್ರಸ್ತಾವದಿಂದ ರಾಜ್ಯ ಸರ್ಕಾರ ಹಿಂದಕ್ಕೆ ಸರಿದಿದೆ’ ಎಂದರು. </p>.<p>ಬೇಡ್ತಿ-ವರದಾ ನದಿಗಳ ಜೋಡಣೆಗೆ ಪೂರ್ವ ಕಾರ್ಯಸಾಧ್ಯತಾ ವರದಿ ಸಿದ್ಧವಾಗಿದೆ. ಅಘನಾಶಿನಿ-ವೇದಾವತಿ ನದಿಗಳ ಜೋಡಣೆಗೆ ಪೂರ್ವ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ಅವರು ಮಾಹಿತಿ ನೀಡಿದರು. </p>.<h2><strong>ಅಟಲ್ ಭೂಜಲಕ್ಕೆ ₹903.21 ಕೋಟಿ:</strong> </h2>.<p>ಅಟಲ್ ಭೂಜಲ ಯೋಜನೆಯಡಿ ಕರ್ನಾಟಕಕ್ಕೆ ಈವರೆಗೆ ₹903.21 ಕೋಟಿ ಬಿಡುಗಡೆ ಮಾಡಲಾಗಿದೆ. ಅಂತರ್ಜಲ ನಿರ್ವಹಣೆಗೆ ಕೇಂದ್ರ ಅಂತರ್ಜಲ ಮಂಡಳಿಯಿಂದ ರಾಜ್ಯಕ್ಕೆ ₹34.32 ಕೋಟಿ ಹಂಚಿಕೆ ಮಾಡಲಾಗಿದೆ ಎಂದು ವಿವರ ನೀಡಿದರು. </p>.<div><div class="bigfact-title">ನಾರಾಯಣಪುರ ಎಡದಂಡೆ ಕಾಲುವೆ ಅಭಿವೃದ್ಧಿಗೆ ₹929 ಕೋಟಿ: </div><div class="bigfact-description">ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೇಂದ್ರದ ಪಾಲಿನ ರೂಪದಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಅಭಿವೃದ್ಧಿ ಯೋಜನೆಗೆ ₹929.40 ಕೋಟಿ ಬಿಡುಗಡೆಗೊಳಿಸಲಾಗಿದೆ. ಇದರಿಂದ 99.70 ಸಾವಿರ ಹೆಕ್ಟೇರ್ಗೆ ನೀರಾವರಿ ಒದಗಿಸಲು ಅನುಕೂಲವಾಗುತ್ತದೆ ಎಂದರು. </div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಲಪ್ರಭಾ-ತುಂಗಭದ್ರಾ ಹಾಗೂ ಆಲಮಟ್ಟಿ-ಮಲಪ್ರಭಾ ನದಿಗಳ ಜೋಡಣೆ ಕಾರ್ಯಸಾಧು ಅಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸ್ಪಷ್ಟಪಡಿಸಿದೆ. </p>.<p>ರಾಜ್ಯಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಲಹರ್ ಸಿಂಗ್ ಸಿರೊಯಾ ಪ್ರಶ್ನೆಗೆ ಉತ್ತರಿಸಿರುವ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ, ‘ಭದ್ರಾ-ವೇದಾವತಿ, ಬರಪೊಳೆ-ಕಾವೇರಿ ನದಿಗಳ ಜೋಡಣೆ ಪ್ರಸ್ತಾವದಿಂದ ರಾಜ್ಯ ಸರ್ಕಾರ ಹಿಂದಕ್ಕೆ ಸರಿದಿದೆ’ ಎಂದರು. </p>.<p>ಬೇಡ್ತಿ-ವರದಾ ನದಿಗಳ ಜೋಡಣೆಗೆ ಪೂರ್ವ ಕಾರ್ಯಸಾಧ್ಯತಾ ವರದಿ ಸಿದ್ಧವಾಗಿದೆ. ಅಘನಾಶಿನಿ-ವೇದಾವತಿ ನದಿಗಳ ಜೋಡಣೆಗೆ ಪೂರ್ವ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ಅವರು ಮಾಹಿತಿ ನೀಡಿದರು. </p>.<h2><strong>ಅಟಲ್ ಭೂಜಲಕ್ಕೆ ₹903.21 ಕೋಟಿ:</strong> </h2>.<p>ಅಟಲ್ ಭೂಜಲ ಯೋಜನೆಯಡಿ ಕರ್ನಾಟಕಕ್ಕೆ ಈವರೆಗೆ ₹903.21 ಕೋಟಿ ಬಿಡುಗಡೆ ಮಾಡಲಾಗಿದೆ. ಅಂತರ್ಜಲ ನಿರ್ವಹಣೆಗೆ ಕೇಂದ್ರ ಅಂತರ್ಜಲ ಮಂಡಳಿಯಿಂದ ರಾಜ್ಯಕ್ಕೆ ₹34.32 ಕೋಟಿ ಹಂಚಿಕೆ ಮಾಡಲಾಗಿದೆ ಎಂದು ವಿವರ ನೀಡಿದರು. </p>.<div><div class="bigfact-title">ನಾರಾಯಣಪುರ ಎಡದಂಡೆ ಕಾಲುವೆ ಅಭಿವೃದ್ಧಿಗೆ ₹929 ಕೋಟಿ: </div><div class="bigfact-description">ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೇಂದ್ರದ ಪಾಲಿನ ರೂಪದಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಅಭಿವೃದ್ಧಿ ಯೋಜನೆಗೆ ₹929.40 ಕೋಟಿ ಬಿಡುಗಡೆಗೊಳಿಸಲಾಗಿದೆ. ಇದರಿಂದ 99.70 ಸಾವಿರ ಹೆಕ್ಟೇರ್ಗೆ ನೀರಾವರಿ ಒದಗಿಸಲು ಅನುಕೂಲವಾಗುತ್ತದೆ ಎಂದರು. </div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>