<p>ಮಳವಳ್ಳಿ: ‘ಮುದ್ರಾಂಕ ಇಲಾಖೆಯಿಂದ ಪರವಾನಗಿ ಪಡೆದ (ದಸ್ತು)ಪತ್ರ ಬರಹಗಾರರಿಗೆ ಪ್ರತ್ಯೇಕ ಲಾಗಿನ್ ನೀಡುವುದರ ಜೊತೆಗೆ ಪೇಪರ್ಲೆಸ್ ವ್ಯವಸ್ಥೆಯಲ್ಲಿ ಇರುವ ಲೋಪದೋಷಗಳನ್ನು ಸರಿಪಡಿಸಬೇಕು’ ಎಂದು ಪತ್ರಬರಹಗಾರ ಗಂಗರಾಜೇ ಅರಸ್ ಒತ್ತಾಯಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ ಪೇಪರ್ಲೆಸ್ ವ್ಯವಸ್ಥೆ ವಿಶ್ವಾಸಾರ್ಹವಲ್ಲದಾಗಿದೆ. ಪೇಪರ್ಲೇಸ್ ವ್ಯವಸ್ಥೆಯಿಂದಾಗಿ ನಕಲಿ ದಾಖಲೆಗಳು ಸೃಷ್ಟಿಯಾಗಿ ಭೂ ಮಾಫಿಯಾ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಇರುವ 25 ಸಾವಿರಕ್ಕೂ ಅಧಿಕ ಪತ್ರಬರಹಗಾರರು ಉದ್ಯೋಗ ಕಳೆದುಕೊಳ್ಳುವ ಆತಂಕ ಎದುರಾಗಿದೆ’ ಎಂದು ಅಳಲು ತೋಡಿಕೊಂಡರು.</p>.<p>‘ಸಾಮಾನ್ಯ ಜನರ ಆಸ್ತಿ ಭದ್ರತೆ ಗಂಭೀರ ಅಪಾಯಕ್ಕೆ ಸಿಲುಕಿದೆ. ವಿಶ್ವಾಸಾರ್ಹವಲ್ಲದ ಈ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಲು ಹಲವಾರು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಪತ್ರಬಹರಗಾರರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ರಾಜ್ಯದಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>ಹಿರಿಯ ಪತ್ರಬರಹಗಾರ ವಿ.ಬಿಳಿಗಿರಯ್ಯ ಮಾತನಾಡಿ, ‘ಮುದ್ರಾಂಕ ಇಲಾಖೆಯಿಂದ ಪರವಾನಗಿ ಪಡೆದ ಪತ್ರಬರಹಗಾರರು ಅಧಿಕೃತವಾಗಿ ಲೈಸೆನ್ಸ್ ಪಡೆದುಕೊಂಡು ಪ್ರತಿಯೊಂದು ವರ್ಷವೂ ಪರಿಷ್ಕರಣೆ ಮಾಡಿಸಿಕೊಂಡು ಬರುತ್ತಿದ್ದೇವೆ. ಪೇಪರ್ಲೆಸ್ ಮಾಡುವುದರಲ್ಲಿ ಯಾವುದೇ ಅಭ್ಯಂತರವಿಲ್ಲ. ಆದರೆ ಪತ್ರಬರಹಗಾರರಿಗೆ ಸೇವಾ ಭದ್ರತೆ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>ಪತ್ರಬರಹಗಾರರಾದ ವಿಜಯ್ ಕುಮಾರ್, ಉಮೇಶ್ ರಾಜೇಅರಸ್, ಸದಾಶಿವಮೂರ್ತಿ, ವೆಂಟಕಸ್ವಾಮಿ, ಶ್ರೀನಿವಾಸ್ಗೌಡ, ಸುಭ್ರಮಣ್ಯರಾಜೇ ಅರಸ್, ಶಿವಕುಮಾರ್ ಪಾಲ್ಗೊಂಡಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-40-393922588</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಳವಳ್ಳಿ: ‘ಮುದ್ರಾಂಕ ಇಲಾಖೆಯಿಂದ ಪರವಾನಗಿ ಪಡೆದ (ದಸ್ತು)ಪತ್ರ ಬರಹಗಾರರಿಗೆ ಪ್ರತ್ಯೇಕ ಲಾಗಿನ್ ನೀಡುವುದರ ಜೊತೆಗೆ ಪೇಪರ್ಲೆಸ್ ವ್ಯವಸ್ಥೆಯಲ್ಲಿ ಇರುವ ಲೋಪದೋಷಗಳನ್ನು ಸರಿಪಡಿಸಬೇಕು’ ಎಂದು ಪತ್ರಬರಹಗಾರ ಗಂಗರಾಜೇ ಅರಸ್ ಒತ್ತಾಯಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ ಪೇಪರ್ಲೆಸ್ ವ್ಯವಸ್ಥೆ ವಿಶ್ವಾಸಾರ್ಹವಲ್ಲದಾಗಿದೆ. ಪೇಪರ್ಲೇಸ್ ವ್ಯವಸ್ಥೆಯಿಂದಾಗಿ ನಕಲಿ ದಾಖಲೆಗಳು ಸೃಷ್ಟಿಯಾಗಿ ಭೂ ಮಾಫಿಯಾ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಇರುವ 25 ಸಾವಿರಕ್ಕೂ ಅಧಿಕ ಪತ್ರಬರಹಗಾರರು ಉದ್ಯೋಗ ಕಳೆದುಕೊಳ್ಳುವ ಆತಂಕ ಎದುರಾಗಿದೆ’ ಎಂದು ಅಳಲು ತೋಡಿಕೊಂಡರು.</p>.<p>‘ಸಾಮಾನ್ಯ ಜನರ ಆಸ್ತಿ ಭದ್ರತೆ ಗಂಭೀರ ಅಪಾಯಕ್ಕೆ ಸಿಲುಕಿದೆ. ವಿಶ್ವಾಸಾರ್ಹವಲ್ಲದ ಈ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಲು ಹಲವಾರು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಪತ್ರಬಹರಗಾರರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ರಾಜ್ಯದಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>ಹಿರಿಯ ಪತ್ರಬರಹಗಾರ ವಿ.ಬಿಳಿಗಿರಯ್ಯ ಮಾತನಾಡಿ, ‘ಮುದ್ರಾಂಕ ಇಲಾಖೆಯಿಂದ ಪರವಾನಗಿ ಪಡೆದ ಪತ್ರಬರಹಗಾರರು ಅಧಿಕೃತವಾಗಿ ಲೈಸೆನ್ಸ್ ಪಡೆದುಕೊಂಡು ಪ್ರತಿಯೊಂದು ವರ್ಷವೂ ಪರಿಷ್ಕರಣೆ ಮಾಡಿಸಿಕೊಂಡು ಬರುತ್ತಿದ್ದೇವೆ. ಪೇಪರ್ಲೆಸ್ ಮಾಡುವುದರಲ್ಲಿ ಯಾವುದೇ ಅಭ್ಯಂತರವಿಲ್ಲ. ಆದರೆ ಪತ್ರಬರಹಗಾರರಿಗೆ ಸೇವಾ ಭದ್ರತೆ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>ಪತ್ರಬರಹಗಾರರಾದ ವಿಜಯ್ ಕುಮಾರ್, ಉಮೇಶ್ ರಾಜೇಅರಸ್, ಸದಾಶಿವಮೂರ್ತಿ, ವೆಂಟಕಸ್ವಾಮಿ, ಶ್ರೀನಿವಾಸ್ಗೌಡ, ಸುಭ್ರಮಣ್ಯರಾಜೇ ಅರಸ್, ಶಿವಕುಮಾರ್ ಪಾಲ್ಗೊಂಡಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-40-393922588</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>