ಪಾರಂಬೇರಿನ ‘ಗುಂಡ‘ ಮತ್ತು ಬಿಳಿಯೂರು ‘ದಾಸ‘ ಮಹರಾಜಕರೆಯಲ್ಲಿ ಜಯಗಳಿಸಿತು. ಧನಂಜಯ ಗೌಡ ಸರಪಾಡಿ ಕೋಣಗಳನ್ನು ಓಡಿಸಿದರು. ಜಯಗಳಿಸುತ್ತಿದ್ದಂತೆಯೇ ಜಯಘೋಷಗಳು ಮೊಳಗಿದವು. ಕೋಣಗಳ ಜತೆಗೆ ಬಂದಿದ್ದವರು ಕುಣಿದು ಸಂಭ್ರಮಿಸಿದರು.
ಫೈನಲ್ ಗೆದ್ದ ನಾರಾಯಣ ಮಲೆಕುಡಿಯ ಅವರ ಕೋಣವು ಒಂದು ಲಕ್ಷ ನಗದು 16 ಗ್ರಾಂ ಚಿನ್ನ ಮತ್ತು ಟ್ರೋಫಿ ಗೆದ್ದಿದೆ. ಸೋಮವಾರ ರಾತ್ರಿ 4.30ಕ್ಕೆ ಬಹುಮಾನ ವಿತರಣೆ ನಡೆಯಿತು. ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಸಹಿತ ವಿವಿಧ ಗಣ್ಯರು ಬಹುಮಾನ ವಿತರಿಸಿದರು.
ಸೆಮಿಫೈನಲ್ನಲ್ಲಿ ಬೋಳದಗುತ್ತು ಮತ್ತು ನಾರಾಯಣ ಮಲೆಕುಡಿಯರ ಕೋಣಗಳ ನಡುವೆ ಸ್ಪರ್ಧೆ ನಡೆಯಿತು. ನಂತರ ರೋಚಕ ಫೈನಲ್ನಲ್ಲಿ ಮಹರಾಜಕರೆಯಲ್ಲಿ ಪರಂಬೇರು ನಾರಾಯಣ ಮಲೆಕುಡಿಯ ಅವರ ಕೋಣಗಳು ಮಹರಾಜ ಕರೆಯಲ್ಲಿ ಓಡಿ ಫೈನಲ್ ಗೆದ್ದಿತು.
ಈ ಕೋಣಗಳ ಪ್ರಾಯೋಜಕತ್ವವನ್ನು ಮಂಗಳೂರಿನ ವಕೀಲ ದಿನೇಶ್ ಹೆಗ್ಡೆ ಉಳೆಪಾಡಿ ಅವರು ವಹಿಸಿದ್ದರು.