<p><strong>ಬೀದರ್</strong>: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ವರ್ಷದ ಹಿಂದೆ ನಡೆದ ಉಗ್ರರ ದಾಳಿಯಂತ ಘಟನೆಗಳು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p><p>ಭಾಲ್ಕಿಯ ಹೆಲಿಪ್ಯಾಡ್ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್ ದಾಳಿಗೆ ಭಾರತೀಯ ಸೈನಿಕರು ಪ್ರತ್ಯುತ್ತರ ನೀಡಿದ್ಧಾರೆ. ಆ ಘಟನೆ ನಡೆಯಬಾರದಿತ್ತು. ನಡೆದು ಹೋಗಿದೆ. ಭವಿಷ್ಯದಲ್ಲಿ ಇಂಥ ಘಟನೆಗಳು ಆಗಬಾರದು ಎಂದರು.</p><p>ಪ್ರವಾಸೋದ್ಯಮ ದೃಷ್ಟಿಯಿಂದ ಪಹಲ್ಗಾಮ್ನಂಥ ಘಟನೆಗಳು ಆಗಬಾರದು. ಅಮಾಯಕ ಜನರ ಮೇಲೆ ದಾಳಿ ನಡೆಸುವುದು ಸರಿಯಲ್ಲ ಎಂದು ಹೇಳಿದರು.</p><p>'ಮೋದಿ ಒಬ್ಬ ಭಯೋತ್ಪಾದಕ’ ಎಂಬ ವಿಚಾರದ ಬಗ್ಗೆ ಈಗಾಗಲೇ ಹೇಳಿದ್ದೇನೆ. ಪರೋಕ್ಷವಾಗಿ ಮೋದಿಗೆ ನಾನು ಈ ಅರ್ಥದಲ್ಲಿ ಹೇಳಿಲ್ಲ ಎಂದ ಅವರು, ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆಯ ವಿಚಾರ ಸಿಎಂ ಅವರನ್ನೇ ಕೇಳಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ವರ್ಷದ ಹಿಂದೆ ನಡೆದ ಉಗ್ರರ ದಾಳಿಯಂತ ಘಟನೆಗಳು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p><p>ಭಾಲ್ಕಿಯ ಹೆಲಿಪ್ಯಾಡ್ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್ ದಾಳಿಗೆ ಭಾರತೀಯ ಸೈನಿಕರು ಪ್ರತ್ಯುತ್ತರ ನೀಡಿದ್ಧಾರೆ. ಆ ಘಟನೆ ನಡೆಯಬಾರದಿತ್ತು. ನಡೆದು ಹೋಗಿದೆ. ಭವಿಷ್ಯದಲ್ಲಿ ಇಂಥ ಘಟನೆಗಳು ಆಗಬಾರದು ಎಂದರು.</p><p>ಪ್ರವಾಸೋದ್ಯಮ ದೃಷ್ಟಿಯಿಂದ ಪಹಲ್ಗಾಮ್ನಂಥ ಘಟನೆಗಳು ಆಗಬಾರದು. ಅಮಾಯಕ ಜನರ ಮೇಲೆ ದಾಳಿ ನಡೆಸುವುದು ಸರಿಯಲ್ಲ ಎಂದು ಹೇಳಿದರು.</p><p>'ಮೋದಿ ಒಬ್ಬ ಭಯೋತ್ಪಾದಕ’ ಎಂಬ ವಿಚಾರದ ಬಗ್ಗೆ ಈಗಾಗಲೇ ಹೇಳಿದ್ದೇನೆ. ಪರೋಕ್ಷವಾಗಿ ಮೋದಿಗೆ ನಾನು ಈ ಅರ್ಥದಲ್ಲಿ ಹೇಳಿಲ್ಲ ಎಂದ ಅವರು, ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆಯ ವಿಚಾರ ಸಿಎಂ ಅವರನ್ನೇ ಕೇಳಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>