<p><strong>ಬೆಂಗಳೂರು</strong>: ‘ಗುಜರಾತ್ನ ಅಹಮದಾಬಾದ್ನಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಮತ್ತು ಕಾರ್ಯಕಾರಿ ಸಮಿತಿ ಸಭೆ ಮಂಗಳವಾರ ನಡೆಯಲಿದೆ. ಈ ಸಭೆಯಲ್ಲಿ ಅನೇಕ ವಿಷಯಗಳ ಕುರಿತು ಚರ್ಚೆ ಮಾಡುತ್ತೇವೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಸಭೆಯಲ್ಲಿ ಚರ್ಚಿಸಲು ಕಾರ್ಯಸೂಚಿ ಸಿದ್ಧಪಡಿಸಿಕೊಂಡಿದ್ದೇವೆ. ಕೆಲವು ನಿರ್ಣಯಗಳನ್ನು ಅಂಗೀಕರಿಸುತ್ತೇವೆ. ಈ ಹಿಂದೆ ತೆಗೆದುಕೊಂಡಿರುವ ನಿರ್ಣಯಗಳನ್ನು ಅಧಿಕೃತಗೊಳಿಸುತ್ತೇವೆ’ ಎಂದರು.</p>.<p>‘ಸಭೆಯ ಬಳಿಕ ದೇಶಕ್ಕೆ ಅಧಿಕೃತ ಸಂದೇಶ ಕೊಡುತ್ತೇವೆ. ಆ ಸಂದೇಶ ಏನೆಂದು ಇಲ್ಲಿ ಹೇಳುವುದು ಸರಿಯಲ್ಲ’ ಎಂದೂ ಹೇಳಿದರು.</p>.<p>ಪಕ್ಷ ಸಂಘಟನೆ ವರ್ಷವೆಂದು ಘೋಷಿಸಿದ್ದರೂ ಕೆಲವು ರಾಜ್ಯಗಳಲ್ಲಿ ಪದಾಧಿಕಾರಿಗಳ ನೇಮಕಾತಿ ಬಾಕಿ ಉಳಿದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ, ‘ಎಲ್ಲವನ್ನೂ ಮಾಡುತ್ತಿದ್ದೇವೆ. ಈಗಾಗಲೇ ಬಿಹಾರ, ಉತ್ತರ ಪ್ರದೇಶ, ಅಸ್ಸಾಂ ರಾಜ್ಯಗಳ ಅಧ್ಯಕ್ಷರ ನೇಮಕ ಮಾಡಿದ್ದೇವೆ’ ಎಂದರು.</p>.<p>ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಗುಜರಾತ್ನ ಅಹಮದಾಬಾದ್ನಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಮತ್ತು ಕಾರ್ಯಕಾರಿ ಸಮಿತಿ ಸಭೆ ಮಂಗಳವಾರ ನಡೆಯಲಿದೆ. ಈ ಸಭೆಯಲ್ಲಿ ಅನೇಕ ವಿಷಯಗಳ ಕುರಿತು ಚರ್ಚೆ ಮಾಡುತ್ತೇವೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಸಭೆಯಲ್ಲಿ ಚರ್ಚಿಸಲು ಕಾರ್ಯಸೂಚಿ ಸಿದ್ಧಪಡಿಸಿಕೊಂಡಿದ್ದೇವೆ. ಕೆಲವು ನಿರ್ಣಯಗಳನ್ನು ಅಂಗೀಕರಿಸುತ್ತೇವೆ. ಈ ಹಿಂದೆ ತೆಗೆದುಕೊಂಡಿರುವ ನಿರ್ಣಯಗಳನ್ನು ಅಧಿಕೃತಗೊಳಿಸುತ್ತೇವೆ’ ಎಂದರು.</p>.<p>‘ಸಭೆಯ ಬಳಿಕ ದೇಶಕ್ಕೆ ಅಧಿಕೃತ ಸಂದೇಶ ಕೊಡುತ್ತೇವೆ. ಆ ಸಂದೇಶ ಏನೆಂದು ಇಲ್ಲಿ ಹೇಳುವುದು ಸರಿಯಲ್ಲ’ ಎಂದೂ ಹೇಳಿದರು.</p>.<p>ಪಕ್ಷ ಸಂಘಟನೆ ವರ್ಷವೆಂದು ಘೋಷಿಸಿದ್ದರೂ ಕೆಲವು ರಾಜ್ಯಗಳಲ್ಲಿ ಪದಾಧಿಕಾರಿಗಳ ನೇಮಕಾತಿ ಬಾಕಿ ಉಳಿದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ, ‘ಎಲ್ಲವನ್ನೂ ಮಾಡುತ್ತಿದ್ದೇವೆ. ಈಗಾಗಲೇ ಬಿಹಾರ, ಉತ್ತರ ಪ್ರದೇಶ, ಅಸ್ಸಾಂ ರಾಜ್ಯಗಳ ಅಧ್ಯಕ್ಷರ ನೇಮಕ ಮಾಡಿದ್ದೇವೆ’ ಎಂದರು.</p>.<p>ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>