ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜನರು ಯಾಕೆ ಇಂಥ ತೀರ್ಪು ನೀಡಿದರು ಎಂಬುದರ ಬಗ್ಗೆ ಅವಲೋಕನ ಮಾಡಬೇಕಿದೆ. ಕಾಂಗ್ರೆಸ್ಗೆ ದೇಶವ್ಯಾಪಿ ಹಿನ್ನಡೆಯಾಗಿದ್ದು, ಮೂರು ದಿನಗಳಲ್ಲಿ ನವದೆಹಲಿಯಲ್ಲಿ ಪಕ್ಷದ ವರಿಷ್ಠರ ಸಭೆ ನಡೆಸಿ, ಇದರ ಕುರಿತು ಚರ್ಚಿಸಲಾಗುವುದು’ ಎಂದರು.