ಮೈಸೂರಿನ ನಿಶಾಂತ್ ಶಿಕ್ಷೆಗೆ ಗುರಿಯಾದ ಅಪರಾಧಿ. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ, ಸಂತ್ರಸ್ತ ಬಾಲಕಿಗೆ ₹ 4 ಲಕ್ಷ ಪರಿಹಾರಕ್ಕೆ ಆದೇಶದಲ್ಲಿ ಶಿಫಾರಸು ಮಾಡಿದ್ದಾರೆ.
ಬಾಲಕಿಯನ್ನು ಪುಸಲಾಯಿಸಿ ಮೈಸೂರಿಗೆ ಕರೆದೊಯ್ದ ಅಪರಾಧಿ, 2022ರ ಜುಲೈ 22ರಂದು ಅತ್ಯಾಚಾರ ಎಸಗಿದ್ದನು. ಈ ಸಂಬಂಧ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.