ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಅಪಘಾತ: ಬೈಕ್ ಸವಾರ ಸಾವು

Published 4 ಜೂನ್ 2023, 15:19 IST
Last Updated 4 ಜೂನ್ 2023, 15:19 IST
ಅಕ್ಷರ ಗಾತ್ರ

ಮುಂಡರಗಿ: ಶುದ್ಧ ಕುಡಿಯುವ ನೀರು ತರಲು ಬೈಕ್‍ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಬೈಕಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಬಸ್ ಚಕ್ರದಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೆಸ್ಕಾಂ ಕಚೇರಿ ಬಳಿ ಭಾನುವಾರ ಸಂಭವಿಸಿದೆ.

ಮೃತನನ್ನು ತಾಲ್ಲೂಕಿನ ಬ್ಯಾಲವಾಡಿಗೆ ಗ್ರಾಮದ ಮಂಜುನಾಥ ರಾಮಣ್ಣ ಬಂಡಿಯವರ (45) ಎಂದು ಗುರುತಿಸಲಾಗಿದೆ. ಮಂಜುನಾಥನು ಬೆಳಗ್ಗೆ ಹೆಸ್ಕಾಂ ಬಳಿ ಇರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ನೀರು ತರುವುದಕ್ಕೆ ಬೈಕ್‍ನಲ್ಲಿ ತೆರಳುತ್ತಿದ್ದಾಗ ಮುಂಡರಗಿಯಿಂದ ಶಿರಹಟ್ಟಿಗೆ ಹೊರಟಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಬೈಕ್ ಹಿಂಬದಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.

ಬಸ್ ಡಿಕ್ಕಿ ಹೊಡೆದ ತಕ್ಷಣ ಬೈಕ್ ಸವಾರ ಮಂಜುನಾಥನು ಚಕ್ರದಡಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT