<p><strong>ಮಂಡ್ಯ:</strong> ‘ನನಗೆ ಸಚಿವ ಸ್ಥಾನ ಬೇಡ ಎಂದು ಮುಖ್ಯಮಂತ್ರಿ ಅವರಿಗೆ ಈಗಾಗಲೇ ಹೇಳಿದ್ದೇನೆ, ಮಂಡ್ಯಕ್ಕೆ ಹೆಚ್ಚುವರಿಯಾಗಿ ಪಿ.ಎಂ. ನರೇಂದ್ರಸ್ವಾಮಿ, ಎ.ಬಿ. ರಮೇಶ ಬಂಡಿಸಿದ್ದೇಗೌಡ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಶಾಸಕ ಪಿ.ರವಿಕುಮಾರ್ ಮನವಿ ಮಾಡಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲಾ ಶಾಸಕರಿಗೂ ಸಚಿವರಾಗುವ ಆಸೆ ಇರುತ್ತದೆ. ನಾಲ್ಕು ಮತ್ತು ಐದು ಬಾರಿ ಗೆದ್ದಿರುವ ಶಾಸಕರು ದೆಹಲಿಗೆ ಹೋಗುತ್ತಾ ಇದ್ದಾರೆ. ಎಲ್ಲರಿಗೂ ಮಂತ್ರಿಗಿರಿ ಸಿಗಲಿ ಹಾಗೂ ನಮ್ಮ ರಾಜ್ಯದ ಸೇವೆ ಮಾಡಲಿ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಸಂಪುಟ ಪುನರ್ರಚನೆ ಮಾಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ. ಮೊದಲ ಬಾರಿ ಶಾಸಕರಾದವರಿಗೂ ಸಚಿವ ಸ್ಥಾನ ಸಿಗಬೇಕು ಎನ್ನುವುದು ನಮ್ಮ ಆಗ್ರಹವಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. 35 ಶಾಸಕರು ಒಟ್ಟಾರೆಯಾಗಿ ಪತ್ರ ಕೊಟ್ಟಿದ್ದೇವೆ. ಐವರು ಹೊಸಬರಿಗೆ ಸಚಿವ ಸ್ಥಾನ ಕೊಡಲಿ. ಕೆಲವರನ್ನು ಬದಲಾವಣೆ ಮಾಡಿ ಹೊಸಬರಿಗೆ ಕೊಡುವುದು ಒಳ್ಳೆಯದು’ ಎಂದರು.</p>.<p>‘ಕೆಲವು ಸಚಿವರು ಕೈಗೆ ಸಿಗುತ್ತಿಲ್ಲ, ಕೆಲಸಗಳೂ ಆಗುತ್ತಿಲ್ಲ ಎಂಬ ಆರೋಪವಿದೆ. ಕೆಲವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದು, ಕೆಲವರಂತೂ ಫೋನ್ಗೂ ಸಿಗುತ್ತಿಲ್ಲ, ಇವರೇನು ದೇವಲೋಕದಿಂದ ಬಂದವರ ಹಾಗೆ ಇದ್ದಾರೆ ಬಿಡಿ, ಚಲುವರಾಯಸ್ವಾಮಿ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರ ಜೊತೆ ಇವರಿಬ್ಬರಿಗೂ ಸಚಿವ ಸ್ಥಾನ ಕೊಟ್ಟರೆ ಸಂತೋಷ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-40-139204393</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ನನಗೆ ಸಚಿವ ಸ್ಥಾನ ಬೇಡ ಎಂದು ಮುಖ್ಯಮಂತ್ರಿ ಅವರಿಗೆ ಈಗಾಗಲೇ ಹೇಳಿದ್ದೇನೆ, ಮಂಡ್ಯಕ್ಕೆ ಹೆಚ್ಚುವರಿಯಾಗಿ ಪಿ.ಎಂ. ನರೇಂದ್ರಸ್ವಾಮಿ, ಎ.ಬಿ. ರಮೇಶ ಬಂಡಿಸಿದ್ದೇಗೌಡ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಶಾಸಕ ಪಿ.ರವಿಕುಮಾರ್ ಮನವಿ ಮಾಡಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲಾ ಶಾಸಕರಿಗೂ ಸಚಿವರಾಗುವ ಆಸೆ ಇರುತ್ತದೆ. ನಾಲ್ಕು ಮತ್ತು ಐದು ಬಾರಿ ಗೆದ್ದಿರುವ ಶಾಸಕರು ದೆಹಲಿಗೆ ಹೋಗುತ್ತಾ ಇದ್ದಾರೆ. ಎಲ್ಲರಿಗೂ ಮಂತ್ರಿಗಿರಿ ಸಿಗಲಿ ಹಾಗೂ ನಮ್ಮ ರಾಜ್ಯದ ಸೇವೆ ಮಾಡಲಿ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಸಂಪುಟ ಪುನರ್ರಚನೆ ಮಾಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ. ಮೊದಲ ಬಾರಿ ಶಾಸಕರಾದವರಿಗೂ ಸಚಿವ ಸ್ಥಾನ ಸಿಗಬೇಕು ಎನ್ನುವುದು ನಮ್ಮ ಆಗ್ರಹವಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. 35 ಶಾಸಕರು ಒಟ್ಟಾರೆಯಾಗಿ ಪತ್ರ ಕೊಟ್ಟಿದ್ದೇವೆ. ಐವರು ಹೊಸಬರಿಗೆ ಸಚಿವ ಸ್ಥಾನ ಕೊಡಲಿ. ಕೆಲವರನ್ನು ಬದಲಾವಣೆ ಮಾಡಿ ಹೊಸಬರಿಗೆ ಕೊಡುವುದು ಒಳ್ಳೆಯದು’ ಎಂದರು.</p>.<p>‘ಕೆಲವು ಸಚಿವರು ಕೈಗೆ ಸಿಗುತ್ತಿಲ್ಲ, ಕೆಲಸಗಳೂ ಆಗುತ್ತಿಲ್ಲ ಎಂಬ ಆರೋಪವಿದೆ. ಕೆಲವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದು, ಕೆಲವರಂತೂ ಫೋನ್ಗೂ ಸಿಗುತ್ತಿಲ್ಲ, ಇವರೇನು ದೇವಲೋಕದಿಂದ ಬಂದವರ ಹಾಗೆ ಇದ್ದಾರೆ ಬಿಡಿ, ಚಲುವರಾಯಸ್ವಾಮಿ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರ ಜೊತೆ ಇವರಿಬ್ಬರಿಗೂ ಸಚಿವ ಸ್ಥಾನ ಕೊಟ್ಟರೆ ಸಂತೋಷ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-40-139204393</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>