<p><strong>ಮದ್ದೂರು:</strong> ‘ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವುದನ್ನು ಎಲ್ಲರೂ ನಿರೀಕ್ಷೆ ಮಾಡಿದ್ದರು. ಇದು ಶಾಕಿಂಗ್ ಸುದ್ದಿ ಏನಲ್ಲ’ ಎಂದು ಬಿಜೆಪಿ ಮುಖಂಡರಾದ ಸುಮಲತಾ ಅಂಬರೀಷ್ ಹೇಳಿದರು.</p>.<p>ನಟ ದಿವಂಗತ ಅಂಬರೀಷ್ ಅವರ ಜನ್ಮದಿನದ ನಿಮಿತ್ತ ಅಂಬರೀಷ್ ಅವರ ಸ್ವಗ್ರಾಮ, ತಾಲ್ಲೂಕಿನ ಭಾರತೀನಗರದ ಬಳಿಯ ದೊಡ್ಡರಸಿನಕೆರೆ ಗ್ರಾಮಕ್ಕೆ ಶುಕ್ರವಾರ ಹೋಗುವಾಗ ಮಾರ್ಗಮಧ್ಯೆ ನಗರದ ಪ್ರವಾಸಿ ಮಂದಿರದಲ್ಲಿ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಎರಡು ವರ್ಷದಿಂದ ಚರ್ಚೆ ನಡೆಯುತ್ತಿದೆ. ಇದೇನು ಅನಿರೀಕ್ಷಿತ ಅಥವಾ ಶಾಕಿಂಗ್ ಸುದ್ದಿ ಏನಲ್ಲ. ಯಾರೇ ಮುಂದಿನ ಮುಖ್ಯಮಂತ್ರಿಯಾದರೂ ಜನಪರ ಆಡಳಿತ ನೀಡಬೇಕೆಂದು ರಾಜ್ಯದ ಜನರು ನಿರೀಕ್ಷೆ ಮಾಡುತ್ತಿದ್ದಾರೆ ಎಂದರು.</p>.<p>ದಲಿತ ಮುಖ್ಯಮಂತ್ರಿ ಬಗ್ಗೆಯೂ ವಿಚಾರ ಹರಿದಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತರ ಪಕ್ಷ ಅಂತ ಹೇಳಿಕೊಳ್ಳುತ್ತದೆ. ಹೀಗಾಗಿ ಅದನ್ನು ಉಳಿಸಿಕೊಳ್ಳೋದು ಬಿಡೋದು ಅವರಿಗೆ ಬಿಟ್ಟದ್ದು ಎಂದರು.</p>.<p>‘ರಾಜ್ಯ ಸರ್ಕಾರ ಅವಧಿ ಪೂರ್ಣಗೊಳಿಸುತ್ತೋ ಏನೋ ಗೊತ್ತಿಲ್ಲ. ನಾಯಕತ್ವ ಬದಲಾವಣೆ ಹೊಸದಲ್ಲ ಹಾಗೂ ತಪ್ಪಲ್ಲ. ಜನರು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕು’ ಎಂದರು.</p>.<p>‘ಅಂಬರೀಷ್ ಅವರ ಬಗ್ಗೆ ಈಗಲೂ ಜಿಲ್ಲೆಯ ಜನರಿಗೆ ಹಾಗೂ ಅಭಿಮಾನಿಗಳಿಗೆ ಪ್ರೀತಿ, ಗೌರವ ಹಾಗೂ ಅಭಿಮಾನ ಕಡಿಮೆಯಾಗಿಲ್ಲ, ಹಾಗೆಯೇ ಇದೆ’ ಎಂದರು.</p>.<p>‘ಪುತ್ರ ಅಭಿಷೇಕ್ ರಾಜಕೀಯ ಪ್ರವೇಶದ ಬಗ್ಗೆ ನಾನು ನಿರ್ಧಾರ ಮಾಡಲ್ಲ. ರಾಜಕೀಯ ಅಥವಾ ಸಿನಿಮಾ ರಂಗ ಎರಡರಲ್ಲಿ ಯಾವುದಾನ್ನಾದರೂ ಆಯ್ಕೆ ಮಾಡಿಕೊಳ್ಳುವುದು ಅಭಿಷೇಕ್ಗೆ ಬಿಟ್ಟ ವಿಚಾರ’ ಎಂದರು.</p>.<p>‘ಈಗ ನಾನು ಬಿಜೆಪಿ ಪಕ್ಷದಲ್ಲಿ ಇದ್ದೇನೆ. ಪಕ್ಷವು ಏನು ಸೂಚನೆ ನೀಡುತ್ತದೆ ಆ ಪ್ರಕಾರ ಪಕ್ಷದ ಸಂಘಟನೆ ವಿಷಯದಲ್ಲಿ ನಡೆದುಕೊಳ್ಳುತ್ತೇನೆ’ ಎಂದರು.</p>.<p>ಮುಖಂಡರಾದ ಹನಕೆರೆ ಶಶಿ, ಬೇಲೂರು ಸೋಮಶೇಖರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-40-1599941377</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ‘ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವುದನ್ನು ಎಲ್ಲರೂ ನಿರೀಕ್ಷೆ ಮಾಡಿದ್ದರು. ಇದು ಶಾಕಿಂಗ್ ಸುದ್ದಿ ಏನಲ್ಲ’ ಎಂದು ಬಿಜೆಪಿ ಮುಖಂಡರಾದ ಸುಮಲತಾ ಅಂಬರೀಷ್ ಹೇಳಿದರು.</p>.<p>ನಟ ದಿವಂಗತ ಅಂಬರೀಷ್ ಅವರ ಜನ್ಮದಿನದ ನಿಮಿತ್ತ ಅಂಬರೀಷ್ ಅವರ ಸ್ವಗ್ರಾಮ, ತಾಲ್ಲೂಕಿನ ಭಾರತೀನಗರದ ಬಳಿಯ ದೊಡ್ಡರಸಿನಕೆರೆ ಗ್ರಾಮಕ್ಕೆ ಶುಕ್ರವಾರ ಹೋಗುವಾಗ ಮಾರ್ಗಮಧ್ಯೆ ನಗರದ ಪ್ರವಾಸಿ ಮಂದಿರದಲ್ಲಿ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಎರಡು ವರ್ಷದಿಂದ ಚರ್ಚೆ ನಡೆಯುತ್ತಿದೆ. ಇದೇನು ಅನಿರೀಕ್ಷಿತ ಅಥವಾ ಶಾಕಿಂಗ್ ಸುದ್ದಿ ಏನಲ್ಲ. ಯಾರೇ ಮುಂದಿನ ಮುಖ್ಯಮಂತ್ರಿಯಾದರೂ ಜನಪರ ಆಡಳಿತ ನೀಡಬೇಕೆಂದು ರಾಜ್ಯದ ಜನರು ನಿರೀಕ್ಷೆ ಮಾಡುತ್ತಿದ್ದಾರೆ ಎಂದರು.</p>.<p>ದಲಿತ ಮುಖ್ಯಮಂತ್ರಿ ಬಗ್ಗೆಯೂ ವಿಚಾರ ಹರಿದಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತರ ಪಕ್ಷ ಅಂತ ಹೇಳಿಕೊಳ್ಳುತ್ತದೆ. ಹೀಗಾಗಿ ಅದನ್ನು ಉಳಿಸಿಕೊಳ್ಳೋದು ಬಿಡೋದು ಅವರಿಗೆ ಬಿಟ್ಟದ್ದು ಎಂದರು.</p>.<p>‘ರಾಜ್ಯ ಸರ್ಕಾರ ಅವಧಿ ಪೂರ್ಣಗೊಳಿಸುತ್ತೋ ಏನೋ ಗೊತ್ತಿಲ್ಲ. ನಾಯಕತ್ವ ಬದಲಾವಣೆ ಹೊಸದಲ್ಲ ಹಾಗೂ ತಪ್ಪಲ್ಲ. ಜನರು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕು’ ಎಂದರು.</p>.<p>‘ಅಂಬರೀಷ್ ಅವರ ಬಗ್ಗೆ ಈಗಲೂ ಜಿಲ್ಲೆಯ ಜನರಿಗೆ ಹಾಗೂ ಅಭಿಮಾನಿಗಳಿಗೆ ಪ್ರೀತಿ, ಗೌರವ ಹಾಗೂ ಅಭಿಮಾನ ಕಡಿಮೆಯಾಗಿಲ್ಲ, ಹಾಗೆಯೇ ಇದೆ’ ಎಂದರು.</p>.<p>‘ಪುತ್ರ ಅಭಿಷೇಕ್ ರಾಜಕೀಯ ಪ್ರವೇಶದ ಬಗ್ಗೆ ನಾನು ನಿರ್ಧಾರ ಮಾಡಲ್ಲ. ರಾಜಕೀಯ ಅಥವಾ ಸಿನಿಮಾ ರಂಗ ಎರಡರಲ್ಲಿ ಯಾವುದಾನ್ನಾದರೂ ಆಯ್ಕೆ ಮಾಡಿಕೊಳ್ಳುವುದು ಅಭಿಷೇಕ್ಗೆ ಬಿಟ್ಟ ವಿಚಾರ’ ಎಂದರು.</p>.<p>‘ಈಗ ನಾನು ಬಿಜೆಪಿ ಪಕ್ಷದಲ್ಲಿ ಇದ್ದೇನೆ. ಪಕ್ಷವು ಏನು ಸೂಚನೆ ನೀಡುತ್ತದೆ ಆ ಪ್ರಕಾರ ಪಕ್ಷದ ಸಂಘಟನೆ ವಿಷಯದಲ್ಲಿ ನಡೆದುಕೊಳ್ಳುತ್ತೇನೆ’ ಎಂದರು.</p>.<p>ಮುಖಂಡರಾದ ಹನಕೆರೆ ಶಶಿ, ಬೇಲೂರು ಸೋಮಶೇಖರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-40-1599941377</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>