<p>ಮಂಡ್ಯ: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೆಸರಿನಲ್ಲಿ ದಲಿತ ಸಮುದಾಯ ಒಡೆಯುವ ಹುನ್ನಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಬಣ) ಅಧ್ಯಕ್ಷ ವೆಂಕಟಗಿರಿಯಯ್ಯ ಆರೋಪಿಸಿದರು.</p>.<p>ಉದ್ದೇಶಪೂರ್ವಕವಾಗಿಯೇ ಈ ಹುನ್ನಾರ ಹೆಣೆದಿರುವ ಮುಖ್ಯಮಂತ್ರಿ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ನೆರೆಯ ಆಂಧ್ರಪ್ರದೇಶದಲ್ಲಿ ಒಳ ಮೀಸಲಾತಿಗಾಗಿ ಸಂಘರ್ಷ ಅತಿರೇಕಕ್ಕೆ ತಿರುಗಿದೆ. ಒಬ್ಬರನ್ನೊಬ್ಬರು ಹೊಡೆದಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಕಿಡಿಕಾರಿದರು.</p>.<p>ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ನೀತಿ ಜಾರಿ ಹೋರಾಟ ನೆಪವಾಗಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮುದಾಯವನ್ನು ವಂಚಿಸುವ ಹುನ್ನಾರ ರೂಪಿಸಿದ್ದಾರೆ. ಏಕೆಂದರೆ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂದರು.</p>.<p>ಸಮಿತಿಯ ಕೆ.ಎಂ.ಅನಿಲ್ಕುಮಾರ್, ಬಿ.ಆನಂದ್, ಜಿ.ಸುಶ್ಮಿತಾ, ಸುರೇಶ್ ಕುಮಾರ್, ಸ್ವಾಮಿ, ವಿಮಲಾ, ಕೆ.ಗೀತಾ ಮುತ್ತುರಾಜ್, ಗೀತಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-40-186965516</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೆಸರಿನಲ್ಲಿ ದಲಿತ ಸಮುದಾಯ ಒಡೆಯುವ ಹುನ್ನಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಬಣ) ಅಧ್ಯಕ್ಷ ವೆಂಕಟಗಿರಿಯಯ್ಯ ಆರೋಪಿಸಿದರು.</p>.<p>ಉದ್ದೇಶಪೂರ್ವಕವಾಗಿಯೇ ಈ ಹುನ್ನಾರ ಹೆಣೆದಿರುವ ಮುಖ್ಯಮಂತ್ರಿ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ನೆರೆಯ ಆಂಧ್ರಪ್ರದೇಶದಲ್ಲಿ ಒಳ ಮೀಸಲಾತಿಗಾಗಿ ಸಂಘರ್ಷ ಅತಿರೇಕಕ್ಕೆ ತಿರುಗಿದೆ. ಒಬ್ಬರನ್ನೊಬ್ಬರು ಹೊಡೆದಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಕಿಡಿಕಾರಿದರು.</p>.<p>ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ನೀತಿ ಜಾರಿ ಹೋರಾಟ ನೆಪವಾಗಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮುದಾಯವನ್ನು ವಂಚಿಸುವ ಹುನ್ನಾರ ರೂಪಿಸಿದ್ದಾರೆ. ಏಕೆಂದರೆ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂದರು.</p>.<p>ಸಮಿತಿಯ ಕೆ.ಎಂ.ಅನಿಲ್ಕುಮಾರ್, ಬಿ.ಆನಂದ್, ಜಿ.ಸುಶ್ಮಿತಾ, ಸುರೇಶ್ ಕುಮಾರ್, ಸ್ವಾಮಿ, ವಿಮಲಾ, ಕೆ.ಗೀತಾ ಮುತ್ತುರಾಜ್, ಗೀತಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-40-186965516</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>