<p><strong>ಮಂಡ್ಯ:</strong> ‘ಬಿಟ್ ಕಾಯಿನ್ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆದಿದೆ. ಇದು ರಾಜಕೀಯ ಪ್ರೇರಿತವಾಗಿದೆ. ಇನ್ನು ಸಚಿವ ಜಮೀರ್ ಅಹಮದ್ ಕಾಂಗ್ರೆಸ್ ಬಿಟ್ಟು ಹೋಗಲ್ಲ. ಅದೆಲ್ಲ ಊಹಾಪೋಹಗಳು. ಜೆಡಿಎಸ್ಗೆ ಹೋಗುವುದಿಲ್ಲ’ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.</p>.<p>ಮಂಗಳವರ ಮಾಧ್ಯಮದವರೊಂದಿಗೆ ಮಾತನಾಡಿ, ಕೆಆರ್ಎಸ್ ಜಲಾಶಯದಿಂದ ಕುಡಿಯುವ ನೀರಿಗೆ ತೊಂದರೆಯಾಗದ ರೀತಿ ನಿರ್ವಹಣೆ ಮಾಡುತ್ತೇವೆ. ಕೃಷಿ ಬೆಳೆಗೂ ನೀರಿನ ಕೊರತೆ ಕಾಡದಂತೆ ನೋಡಿಕೊಳ್ಳಲಾಗುವುದು. ರೈತರು ಆತಂಕಪಡಬಾರದು’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.</p>.<p>‘ಸಿಎಂ ನೇತೃತ್ವದಲ್ಲಿ ಸಭೆ ನಡೆದಿದೆ. ಅಂತೆಯೇ ಸಭೆಯಲ್ಲಿ ಈಗಾಗಲೇ ತಿಳಿಸಿದ್ದೇವೆ. ರೈತರಿಗೆ ತೊಂದರೆ ಆಗದ ರೀತಿ ಕ್ರಮವಹಿಸುತ್ತೇವೆ. ಮಳೆ ಬರದಿದ್ದರೆ ಏನೂ ಮಾಡಲು ಸಾಧ್ಯವಿಲ್ಲ. ಎನ್ಡಿಆರ್ಎಫ್ನಲ್ಲಿ ಪರಿಹಾರ ಕೊಡುವ ಕ್ರಮ ಆಗುತ್ತದೆ. ಬರಗಾಲ ಬರುವುದು ಸಹಜ. ನಾವು ಎಚ್ಚರಿಕೆ ವಹಿಸಿದ್ದೇವೆ’ ಎಂದರು.</p>.<p>ಕೆಆರ್ಎಸ್ ಡ್ಯಾಂನಿಂದ ಬೆಂಗಳೂರಿಗೆ 6ನೇ ಹಂತದ ಕುಡಿಯುವ ನೀರಿನ ಯೋಜನೆ ವಿರೋಧಕ್ಕೆ ಪ್ರತಿಕ್ರಿಯಿಸಿದ ಸಚಿವರು ‘ಪ್ರತಿಭಟನೆ ಮಾಡಲಿ ಬಿಡಿ’ ಎಂದು ಚುಟುಕಾಗಿ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-40-1399637906</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಬಿಟ್ ಕಾಯಿನ್ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆದಿದೆ. ಇದು ರಾಜಕೀಯ ಪ್ರೇರಿತವಾಗಿದೆ. ಇನ್ನು ಸಚಿವ ಜಮೀರ್ ಅಹಮದ್ ಕಾಂಗ್ರೆಸ್ ಬಿಟ್ಟು ಹೋಗಲ್ಲ. ಅದೆಲ್ಲ ಊಹಾಪೋಹಗಳು. ಜೆಡಿಎಸ್ಗೆ ಹೋಗುವುದಿಲ್ಲ’ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.</p>.<p>ಮಂಗಳವರ ಮಾಧ್ಯಮದವರೊಂದಿಗೆ ಮಾತನಾಡಿ, ಕೆಆರ್ಎಸ್ ಜಲಾಶಯದಿಂದ ಕುಡಿಯುವ ನೀರಿಗೆ ತೊಂದರೆಯಾಗದ ರೀತಿ ನಿರ್ವಹಣೆ ಮಾಡುತ್ತೇವೆ. ಕೃಷಿ ಬೆಳೆಗೂ ನೀರಿನ ಕೊರತೆ ಕಾಡದಂತೆ ನೋಡಿಕೊಳ್ಳಲಾಗುವುದು. ರೈತರು ಆತಂಕಪಡಬಾರದು’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.</p>.<p>‘ಸಿಎಂ ನೇತೃತ್ವದಲ್ಲಿ ಸಭೆ ನಡೆದಿದೆ. ಅಂತೆಯೇ ಸಭೆಯಲ್ಲಿ ಈಗಾಗಲೇ ತಿಳಿಸಿದ್ದೇವೆ. ರೈತರಿಗೆ ತೊಂದರೆ ಆಗದ ರೀತಿ ಕ್ರಮವಹಿಸುತ್ತೇವೆ. ಮಳೆ ಬರದಿದ್ದರೆ ಏನೂ ಮಾಡಲು ಸಾಧ್ಯವಿಲ್ಲ. ಎನ್ಡಿಆರ್ಎಫ್ನಲ್ಲಿ ಪರಿಹಾರ ಕೊಡುವ ಕ್ರಮ ಆಗುತ್ತದೆ. ಬರಗಾಲ ಬರುವುದು ಸಹಜ. ನಾವು ಎಚ್ಚರಿಕೆ ವಹಿಸಿದ್ದೇವೆ’ ಎಂದರು.</p>.<p>ಕೆಆರ್ಎಸ್ ಡ್ಯಾಂನಿಂದ ಬೆಂಗಳೂರಿಗೆ 6ನೇ ಹಂತದ ಕುಡಿಯುವ ನೀರಿನ ಯೋಜನೆ ವಿರೋಧಕ್ಕೆ ಪ್ರತಿಕ್ರಿಯಿಸಿದ ಸಚಿವರು ‘ಪ್ರತಿಭಟನೆ ಮಾಡಲಿ ಬಿಡಿ’ ಎಂದು ಚುಟುಕಾಗಿ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-40-1399637906</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>