<p><strong>ಮಂಡ್ಯ</strong>: ‘ಜಿಲ್ಲೆಯಲ್ಲಿ ಎಲ್ಲವೂ ಸರಿ ಇಲ್ಲ. ಜೆಡಿಎಸ್ ಪಕ್ಷವನ್ನು ಬೇರೆ ಪಕ್ಷದವರಿಗೆ ಅಡಮಾನ ಇಡುವ ಪ್ರಯತ್ನ ಸ್ವಪಕ್ಷದ ಮುಖಂಡರಿಂದಲೇ ನಡೆಯುತ್ತಿದೆ’ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಜೆಡಿಎಸ್ನ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಹೆಸರು ಹೇಳದೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ವಿರುದ್ಧ ಆರೋಪಿಸಿದರು.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜೆಡಿಎಸ್ ಪಕ್ಷವನ್ನು ಮುಗಿಸಲು ಮಾಜಿ ಸಚಿವರು ಮುಂದಾಗಿದ್ದಾರೆ. ಕಾಂಗ್ರೆಸ್, ಬಿಜೆಪಿ ಜೊತೆ ಸೇರಿ ಜೆಡಿಎಸ್ ಮುಗಿಸಲು ಯತ್ನಿಸಿದ್ದರು. ಆದರೆ ಅದು ಯಶಸ್ವಿಯಾಗಲಿಲ್ಲ. ಈಗ ಬೇರೆ ಪಕ್ಷಕ್ಕೆ ಅಡಮಾನ ಇಡಲು ಹೊರಟಿದ್ದಾರೆ’ ಎಂದು ದೂರಿದರು. ಈ ಮೂಲಕ ಜಿಲ್ಲೆಯಲ್ಲಿ ಜೆಡಿಎಸ್ ಒಳಜಗಳ ಬಹಿರಂಗಗೊಂಡಿದೆ. ‘ಬಿಜೆಪಿ, ಕಾಂಗ್ರೆಸ್ನ ಅತೃಪ್ತ ಆತ್ಮಗಳೊಂದಿಗೆ ಸೇರಿಸಿಕೊಂಡು ಜೆಡಿಎಸ್ ಅನ್ನು ಹೈಜಾಕ್ ಮಾಡುವ ಹಾಗೂ ಅನಗತ್ಯವಾಗಿ ಜಿಲ್ಲೆಯಲ್ಲಿ ಜೆಡಿಎಸ್ ವಾತಾವರಣವನ್ನು ಕೆಡಿಸುವ ಪ್ರಯತ್ನ ನಡೆದಿದೆ’ ಎಂದು ಆರೋಪಿಸಿದರು.</p>.<p>‘ಒಂದೂವರೆ ವರ್ಷದ ಹಿಂದೆ ಕಾಂಗ್ರೆಸ್ ಬಾಗಿಲನ್ನು ತಟ್ಟಿದ್ದ ಆ ಮುಖಂಡರು ಅವರ ಕ್ಷೇತ್ರದಲ್ಲಿ ಬಿಜೆಪಿಯೊಂದಿಗೆ ರಾಜಿ ಮಾಡುತ್ತಿಲ್ಲ. ಆದರೆ, ಜಿಲ್ಲೆಯ ಇತರ ಕ್ಷೇತ್ರಗಳಲ್ಲಿ ಜೆಡಿಎಸ್ ಬೇರೆ ಪಕ್ಷದವರಿಗೆ ಅಡಮಾನ ಇಡಲು ಹೊರಟಿದ್ದಾರೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-14-1548963861</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ಜಿಲ್ಲೆಯಲ್ಲಿ ಎಲ್ಲವೂ ಸರಿ ಇಲ್ಲ. ಜೆಡಿಎಸ್ ಪಕ್ಷವನ್ನು ಬೇರೆ ಪಕ್ಷದವರಿಗೆ ಅಡಮಾನ ಇಡುವ ಪ್ರಯತ್ನ ಸ್ವಪಕ್ಷದ ಮುಖಂಡರಿಂದಲೇ ನಡೆಯುತ್ತಿದೆ’ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಜೆಡಿಎಸ್ನ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಹೆಸರು ಹೇಳದೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ವಿರುದ್ಧ ಆರೋಪಿಸಿದರು.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜೆಡಿಎಸ್ ಪಕ್ಷವನ್ನು ಮುಗಿಸಲು ಮಾಜಿ ಸಚಿವರು ಮುಂದಾಗಿದ್ದಾರೆ. ಕಾಂಗ್ರೆಸ್, ಬಿಜೆಪಿ ಜೊತೆ ಸೇರಿ ಜೆಡಿಎಸ್ ಮುಗಿಸಲು ಯತ್ನಿಸಿದ್ದರು. ಆದರೆ ಅದು ಯಶಸ್ವಿಯಾಗಲಿಲ್ಲ. ಈಗ ಬೇರೆ ಪಕ್ಷಕ್ಕೆ ಅಡಮಾನ ಇಡಲು ಹೊರಟಿದ್ದಾರೆ’ ಎಂದು ದೂರಿದರು. ಈ ಮೂಲಕ ಜಿಲ್ಲೆಯಲ್ಲಿ ಜೆಡಿಎಸ್ ಒಳಜಗಳ ಬಹಿರಂಗಗೊಂಡಿದೆ. ‘ಬಿಜೆಪಿ, ಕಾಂಗ್ರೆಸ್ನ ಅತೃಪ್ತ ಆತ್ಮಗಳೊಂದಿಗೆ ಸೇರಿಸಿಕೊಂಡು ಜೆಡಿಎಸ್ ಅನ್ನು ಹೈಜಾಕ್ ಮಾಡುವ ಹಾಗೂ ಅನಗತ್ಯವಾಗಿ ಜಿಲ್ಲೆಯಲ್ಲಿ ಜೆಡಿಎಸ್ ವಾತಾವರಣವನ್ನು ಕೆಡಿಸುವ ಪ್ರಯತ್ನ ನಡೆದಿದೆ’ ಎಂದು ಆರೋಪಿಸಿದರು.</p>.<p>‘ಒಂದೂವರೆ ವರ್ಷದ ಹಿಂದೆ ಕಾಂಗ್ರೆಸ್ ಬಾಗಿಲನ್ನು ತಟ್ಟಿದ್ದ ಆ ಮುಖಂಡರು ಅವರ ಕ್ಷೇತ್ರದಲ್ಲಿ ಬಿಜೆಪಿಯೊಂದಿಗೆ ರಾಜಿ ಮಾಡುತ್ತಿಲ್ಲ. ಆದರೆ, ಜಿಲ್ಲೆಯ ಇತರ ಕ್ಷೇತ್ರಗಳಲ್ಲಿ ಜೆಡಿಎಸ್ ಬೇರೆ ಪಕ್ಷದವರಿಗೆ ಅಡಮಾನ ಇಡಲು ಹೊರಟಿದ್ದಾರೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-14-1548963861</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>