<p>ಮಂಡ್ಯ: ‘ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿ ಸರ್ಕಾರ ಡಿಪಿಆರ್ ಸಿದ್ಧಪಡಿಸಿದೆ. ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ಅವರಂತಹ ನೂರು ಜನ ಬಂದರೂ ತಡೆಯಲು ಸಾಧ್ಯವಿಲ್ಲ’ ಎಂದು ಶಾಸಕ ಪಿ.ರವಿಕುಮಾರ್ ಪ್ರತಿಪಾದಿಸಿದರು.</p>.<p>ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಕಾನೂನು ಹೋರಾಟ ಮಾಡುತ್ತಿದೆ. ಅವರ ಪಾಲಿನ ನೀರು ಕೇಳಿಕೊಳ್ಳಲಿ. ನಾವು ಕೂಡ ಕೊಡುತ್ತಿದ್ದೇವೆ. ನಮ್ಮ ಜಾಗದಲ್ಲಿ ಜಲಾಶಯ ಕಟ್ಟುವುದನ್ನು ತಡೆಯುವ ಹಕ್ಕು ಅವರಿಗಿಲ್ಲ’ ಎಂದರು.</p>.<p>‘ನಾವು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಿ ಗೆದ್ದಿದ್ದೇವೆ. ಅದೇ ರೀತಿ ಶೀಘ್ರದಲ್ಲೇ ಮೇಕೆದಾಟು ಜಲಾಶಯ ಕಟ್ಟುತ್ತೇವೆ. ಬಿಜೆಪಿಯವರು ರಾಜಕೀಯವಾಗಿ ಮಾತಾಡುತ್ತಾರೆ. ಗೋವಾದಲ್ಲಿ ಅವರದೇ ಸರ್ಕಾರವಿದೆ. ಆದರೆ, ಕಳಸಾ– ಬಂಡೂರಿಗೆ ಅವರ ವಿರೋಧವಿದೆ. ವಿಜಯ್ ಹೊಸದಾಗಿ ಸಿಎಂ ಆಗಿದ್ದಾರೆ. ಅವರಿಗೆ ಕಾನೂನಿನ ಅರಿವು ಕಡಿಮೆ ಇರಬಹುದು’ ಎಂದರು.</p>.<p>ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಶಾಸಕ ರವಿಕುಮಾರ್ ಪ್ರತಿಕ್ರಿಯಿಸಲು ನಿರಾಕರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-40-819945768</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿ ಸರ್ಕಾರ ಡಿಪಿಆರ್ ಸಿದ್ಧಪಡಿಸಿದೆ. ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ಅವರಂತಹ ನೂರು ಜನ ಬಂದರೂ ತಡೆಯಲು ಸಾಧ್ಯವಿಲ್ಲ’ ಎಂದು ಶಾಸಕ ಪಿ.ರವಿಕುಮಾರ್ ಪ್ರತಿಪಾದಿಸಿದರು.</p>.<p>ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಕಾನೂನು ಹೋರಾಟ ಮಾಡುತ್ತಿದೆ. ಅವರ ಪಾಲಿನ ನೀರು ಕೇಳಿಕೊಳ್ಳಲಿ. ನಾವು ಕೂಡ ಕೊಡುತ್ತಿದ್ದೇವೆ. ನಮ್ಮ ಜಾಗದಲ್ಲಿ ಜಲಾಶಯ ಕಟ್ಟುವುದನ್ನು ತಡೆಯುವ ಹಕ್ಕು ಅವರಿಗಿಲ್ಲ’ ಎಂದರು.</p>.<p>‘ನಾವು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಿ ಗೆದ್ದಿದ್ದೇವೆ. ಅದೇ ರೀತಿ ಶೀಘ್ರದಲ್ಲೇ ಮೇಕೆದಾಟು ಜಲಾಶಯ ಕಟ್ಟುತ್ತೇವೆ. ಬಿಜೆಪಿಯವರು ರಾಜಕೀಯವಾಗಿ ಮಾತಾಡುತ್ತಾರೆ. ಗೋವಾದಲ್ಲಿ ಅವರದೇ ಸರ್ಕಾರವಿದೆ. ಆದರೆ, ಕಳಸಾ– ಬಂಡೂರಿಗೆ ಅವರ ವಿರೋಧವಿದೆ. ವಿಜಯ್ ಹೊಸದಾಗಿ ಸಿಎಂ ಆಗಿದ್ದಾರೆ. ಅವರಿಗೆ ಕಾನೂನಿನ ಅರಿವು ಕಡಿಮೆ ಇರಬಹುದು’ ಎಂದರು.</p>.<p>ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಶಾಸಕ ರವಿಕುಮಾರ್ ಪ್ರತಿಕ್ರಿಯಿಸಲು ನಿರಾಕರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-40-819945768</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>