<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ದಿನಕ್ಕೊಂದು ಅತ್ಯಾಚಾರಗಳು ನಡೆಯುತ್ತಿದ್ದು, ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸುತ್ತಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಮಂಡ್ಯದಲ್ಲಿ 8 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಕೃತ್ಯವನ್ನು ಖಂಡಿಸಿ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಶಾಲಾ ಆವರಣದಲ್ಲಿ, ಹಾಡಹಗಲೇ ನಡೆದಿರುವ ಈ ಕೃತ್ಯವು ರಾಜ್ಯದಲ್ಲಿನ ಅರಾಜಕತೆಗೆ ಹಿಡಿದ ಕನ್ನಡಿ. ಬಿಜೆಪಿ ಅವಧಿಯಲ್ಲಿ ಅತ್ಯಾಚಾರ ನಡೆದಿಲ್ಲವಾ ಎಂದು ಮುಖ್ಯಮಂತ್ರಿ ಪ್ರಶ್ನಿಸಿರುವುದು, ಸರ್ಕಾರದ ಸಂವೇದನಾರಹಿತ ಧೋರಣೆ ಮತ್ತು ಅಲಕ್ಷ್ಯವನ್ನು ತೋರಿಸುತ್ತಿದೆ’ ಎಂದಿದ್ದಾರೆ.</p>.<p>‘ಆಕಸ್ಮಿಕ ಗೃಹ ಸಚಿವ ಪರಮೇಶ್ವರ ಅವರೇ, ಮೂವರು ಕಾಮುಕರನ್ನು ಪತ್ತೆ ಹಚ್ಚಿ, ಕಾನೂನಿನ ವಶಕ್ಕೆ ಒಪ್ಪಿಸಿ. ಮಹಿಳೆಯರ ಸುರಕ್ಷತೆಯ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ನಾಡಿನ ಹೆಣ್ಣುಮಕ್ಕಳು ನಿರ್ಭೀತಿಯಿಂದ ಓಡಾಡುವ ಗ್ಯಾರೆಂಟಿ ನೀಡಿ’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ದಿನಕ್ಕೊಂದು ಅತ್ಯಾಚಾರಗಳು ನಡೆಯುತ್ತಿದ್ದು, ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸುತ್ತಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಮಂಡ್ಯದಲ್ಲಿ 8 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಕೃತ್ಯವನ್ನು ಖಂಡಿಸಿ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಶಾಲಾ ಆವರಣದಲ್ಲಿ, ಹಾಡಹಗಲೇ ನಡೆದಿರುವ ಈ ಕೃತ್ಯವು ರಾಜ್ಯದಲ್ಲಿನ ಅರಾಜಕತೆಗೆ ಹಿಡಿದ ಕನ್ನಡಿ. ಬಿಜೆಪಿ ಅವಧಿಯಲ್ಲಿ ಅತ್ಯಾಚಾರ ನಡೆದಿಲ್ಲವಾ ಎಂದು ಮುಖ್ಯಮಂತ್ರಿ ಪ್ರಶ್ನಿಸಿರುವುದು, ಸರ್ಕಾರದ ಸಂವೇದನಾರಹಿತ ಧೋರಣೆ ಮತ್ತು ಅಲಕ್ಷ್ಯವನ್ನು ತೋರಿಸುತ್ತಿದೆ’ ಎಂದಿದ್ದಾರೆ.</p>.<p>‘ಆಕಸ್ಮಿಕ ಗೃಹ ಸಚಿವ ಪರಮೇಶ್ವರ ಅವರೇ, ಮೂವರು ಕಾಮುಕರನ್ನು ಪತ್ತೆ ಹಚ್ಚಿ, ಕಾನೂನಿನ ವಶಕ್ಕೆ ಒಪ್ಪಿಸಿ. ಮಹಿಳೆಯರ ಸುರಕ್ಷತೆಯ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ನಾಡಿನ ಹೆಣ್ಣುಮಕ್ಕಳು ನಿರ್ಭೀತಿಯಿಂದ ಓಡಾಡುವ ಗ್ಯಾರೆಂಟಿ ನೀಡಿ’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>