<p>ಮಂಡ್ಯ: ‘ಒಳ ಮೀಸಲಾತಿ ಎಂಬುದು ಸಾಮಾಜಿಕ ನ್ಯಾಯದ ಪರಿಕಲ್ಪನೆಯಾಗಿದೆ. ಎಲ್ಲ ಸಮುದಾಯಗಳಿಗೂ ಹಂಚಿಕೊಂಡು ತಿನ್ನುವು ನೀತಿಯಾಗಿದೆ. ಹಾಗಾಗಿ ಯಾರಿಗೂ ಅನ್ಯಾಯವಾಗದಂತೆ ತೀರ್ಮಾನ ಕೈಗೊಂಡು ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು’ ಎಂದು ರಾಜ್ಯಸಭಾ ಮಾಜಿ ಸದಸ್ಯ ಎಲ್. ಹನುಮಂತಯ್ಯ ಒತ್ತಾಯಿಸಿದರು.</p>.<p>ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ‘ಒಳಮೀಸಲಾತಿಯ ಮುಂದಿನ ಹೆಜ್ಜೆಗಳು’ ಕುರಿತ ರಾಜ್ಯ ಮಟ್ಟದ ವಿಚಾರಸಂಕಿರಣ ಹಾಗೂ ಒಳಮೀಸಲಾತಿ ಹೋರಾಟಗಾರರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘35 ವರ್ಷಗಳಿಂದ ಮಾದಿಗ ಸಮುದಾಯ ಒಳಮೀಸಲಾತಿಗಾಗಿ ಹೋರಾಟ ಮಾಡಿಕೊಂಡು ಬಂದಿದೆ. ಆದರೆ, ಸುಪ್ರೀಂ ಕೋರ್ಟ್ ತೀರ್ಪಿನ ನಂತರವೂ ರಾಜ್ಯ ಸರ್ಕಾರ ಒಳಮೀಸಲಾತಿ ಪರವಾದ ಗಟ್ಟಿ ನಿರ್ಧಾರ ತೆಗೆದುಕೊಳ್ಳಲು ಮುಂದಾಗದಿರುವುದು ಸರಿಯಾದ ಬೆಳವಣಿಗೆಯಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಹೋರಾಟಗಾರ ಬಸವರಾಜ್ ಕೌತಾಳ್ ಮಾತನಾಡಿ, ‘ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು. ಆದರೆ 2 ವರ್ಷ ಕಳೆದರೂ ನೆಪ ಹೇಳಿ ಸಮುದಾಯವನ್ನು ಕಾಡಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ ಮಾದಿಗ ಸಮಾಜದ ಶತ್ರುಗಳಾಗಿದ್ದಾರೆ. ಇವರು ಇನ್ನಾದರೂ ನೆಪ ಹೇಳದೆ ಒಳ ಮೀಸಲಾತಿ ಜಾರಿಗೊಳಿಸಬೇಕು. ಇಲ್ಲವಾದರಲ್ಲಿ ತೀವ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>ಇದೇ 27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.</p>.<p>ಹೋರಾಟಗಾರ ಎಸ್. ಮಾರಪ್ಪ ಹಿರಿಯ, ಎಚ್. ಹನುಮಂತಪ್ಪ, ಅಂಬಣ್ಣ ಆರೋಲಿಕರ್, ಮಾಜಿ ಶಾಸಕ ವೀರಭದ್ರಪ್ಪ ಹಾಲರವಿ, ಪ್ರಸನ್ನ ಚಕ್ರವರ್ತಿ, ಎನ್.ಆರ್. ಚಂದ್ರಶೇಖರ್, ಸಿ.ಕೆ. ಪಾಪಯ್ಯ ಹಾಗೂ ಕೃಷ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-40-466935375</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ಒಳ ಮೀಸಲಾತಿ ಎಂಬುದು ಸಾಮಾಜಿಕ ನ್ಯಾಯದ ಪರಿಕಲ್ಪನೆಯಾಗಿದೆ. ಎಲ್ಲ ಸಮುದಾಯಗಳಿಗೂ ಹಂಚಿಕೊಂಡು ತಿನ್ನುವು ನೀತಿಯಾಗಿದೆ. ಹಾಗಾಗಿ ಯಾರಿಗೂ ಅನ್ಯಾಯವಾಗದಂತೆ ತೀರ್ಮಾನ ಕೈಗೊಂಡು ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು’ ಎಂದು ರಾಜ್ಯಸಭಾ ಮಾಜಿ ಸದಸ್ಯ ಎಲ್. ಹನುಮಂತಯ್ಯ ಒತ್ತಾಯಿಸಿದರು.</p>.<p>ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ‘ಒಳಮೀಸಲಾತಿಯ ಮುಂದಿನ ಹೆಜ್ಜೆಗಳು’ ಕುರಿತ ರಾಜ್ಯ ಮಟ್ಟದ ವಿಚಾರಸಂಕಿರಣ ಹಾಗೂ ಒಳಮೀಸಲಾತಿ ಹೋರಾಟಗಾರರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘35 ವರ್ಷಗಳಿಂದ ಮಾದಿಗ ಸಮುದಾಯ ಒಳಮೀಸಲಾತಿಗಾಗಿ ಹೋರಾಟ ಮಾಡಿಕೊಂಡು ಬಂದಿದೆ. ಆದರೆ, ಸುಪ್ರೀಂ ಕೋರ್ಟ್ ತೀರ್ಪಿನ ನಂತರವೂ ರಾಜ್ಯ ಸರ್ಕಾರ ಒಳಮೀಸಲಾತಿ ಪರವಾದ ಗಟ್ಟಿ ನಿರ್ಧಾರ ತೆಗೆದುಕೊಳ್ಳಲು ಮುಂದಾಗದಿರುವುದು ಸರಿಯಾದ ಬೆಳವಣಿಗೆಯಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಹೋರಾಟಗಾರ ಬಸವರಾಜ್ ಕೌತಾಳ್ ಮಾತನಾಡಿ, ‘ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು. ಆದರೆ 2 ವರ್ಷ ಕಳೆದರೂ ನೆಪ ಹೇಳಿ ಸಮುದಾಯವನ್ನು ಕಾಡಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ ಮಾದಿಗ ಸಮಾಜದ ಶತ್ರುಗಳಾಗಿದ್ದಾರೆ. ಇವರು ಇನ್ನಾದರೂ ನೆಪ ಹೇಳದೆ ಒಳ ಮೀಸಲಾತಿ ಜಾರಿಗೊಳಿಸಬೇಕು. ಇಲ್ಲವಾದರಲ್ಲಿ ತೀವ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>ಇದೇ 27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.</p>.<p>ಹೋರಾಟಗಾರ ಎಸ್. ಮಾರಪ್ಪ ಹಿರಿಯ, ಎಚ್. ಹನುಮಂತಪ್ಪ, ಅಂಬಣ್ಣ ಆರೋಲಿಕರ್, ಮಾಜಿ ಶಾಸಕ ವೀರಭದ್ರಪ್ಪ ಹಾಲರವಿ, ಪ್ರಸನ್ನ ಚಕ್ರವರ್ತಿ, ಎನ್.ಆರ್. ಚಂದ್ರಶೇಖರ್, ಸಿ.ಕೆ. ಪಾಪಯ್ಯ ಹಾಗೂ ಕೃಷ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-40-466935375</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>