<p>ಮಂಡ್ಯ: ಅವಕಾಶ ಸಿಕ್ಕಿಲ್ಲದ ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದ್ದು, ಅದನ್ನು ಅರ್ಥೈಯಿಸಿಕೊಂಡು ಅನಧಿಕೃತವಾಗಿ ‘ಸ್ಪೃಶ್ಯ ಒಬಿಸಿ’ಗೆ ಸೇರ್ಪಡೆಗೊಳಿಸಿರುವ ಜಾತಿಗಳನ್ನು ತೆಗೆದು ಹಾಕಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಸ್ವಾಭಿಮಾನ್ ಜಾಗೃತಿ ಅಭಿಯಾನ ಸಮಿತಿ ಅಧ್ಯಕ್ಷ ಸಿ.ಎಂ. ಕೃಷ್ಣ ಒತ್ತಾಯಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಎದುರು ಮೂರು ದಿನಗಳಿಂದ ಆರಂಭಿಸಿರುವ ಒಳಮೀಸಲಾತಿ ಪ್ರತಿಭಟನಾ ಸಭೆಯಲ್ಲಿ ಸೋಮವಾರ ಅವರು ಮಾತನಾಡಿದರು.</p>.<p>‘ಸ್ಪೃಶ್ಯ ಒಬಿಸಿ ಜಾತಿಗಳಾದ ಬಂಜಾರ, ಲಂಬಾಣಿ, ಭೋವಿ, ಕೊರಮ, ಕೊರಚ, ಬೇಡ ಜಂಗಮ, ಬುಡಗ ಜಂಗಮ, ಅಲೆಮಾರಿ ಸಮುದಾಯಗಳನ್ನು ಸುಪ್ರೀಂಕೋರ್ಟ್ ಆದೇಶದಂತೆ ತೆಗೆದುಹಾಕಲು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ ಸೂಕ್ತ ಪ್ರಸ್ತಾವ ರಾಜ್ಯ ಸರ್ಕಾರ ಸಲ್ಲಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ನೈಜ ಪರಿಶಿಷ್ಟ ಜಾತಿಗಳ ಹಕ್ಕು ಅವಕಾಶಗಳನ್ನು ಸಂರಕ್ಷಿಸಲು ವಿಫಲವಾಗಿರುವ ಎಸ್ಸಿ ಮೀಸಲು ಕ್ಷೇತ್ರಗಳ ಶಾಸಕರು, ಸಂಸದರು, ಸಚಿವರು ನೈತಿಕ ಹೊಣೆಗಾರಿಕೆ ಅಡಿಯಲ್ಲಿ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಸಭೆಯಲ್ಲಿ ಮುಖಂಡರಾದ ಎಚ್.ಜಿ. ಗಂಗರಾಜು, ಜೆ.ರಾಮಯ್ಯ, ಮಂಜುನಾಥ್ ನಡುಕಲಪುರ, ಪ್ರಸನ್ನ ಚಕ್ರವರ್ತಿ, ಎಂ.ಮಹೇಶ್ ಯಡಗನಹಳ್ಳಿ, ಸಿ.ವೆಂಕಟೇಶ್, ಪ್ರಶಾಂತ್, ಪೂರ್ಣಚಂದ್ರ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-40-1085945176</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಅವಕಾಶ ಸಿಕ್ಕಿಲ್ಲದ ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದ್ದು, ಅದನ್ನು ಅರ್ಥೈಯಿಸಿಕೊಂಡು ಅನಧಿಕೃತವಾಗಿ ‘ಸ್ಪೃಶ್ಯ ಒಬಿಸಿ’ಗೆ ಸೇರ್ಪಡೆಗೊಳಿಸಿರುವ ಜಾತಿಗಳನ್ನು ತೆಗೆದು ಹಾಕಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಸ್ವಾಭಿಮಾನ್ ಜಾಗೃತಿ ಅಭಿಯಾನ ಸಮಿತಿ ಅಧ್ಯಕ್ಷ ಸಿ.ಎಂ. ಕೃಷ್ಣ ಒತ್ತಾಯಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಎದುರು ಮೂರು ದಿನಗಳಿಂದ ಆರಂಭಿಸಿರುವ ಒಳಮೀಸಲಾತಿ ಪ್ರತಿಭಟನಾ ಸಭೆಯಲ್ಲಿ ಸೋಮವಾರ ಅವರು ಮಾತನಾಡಿದರು.</p>.<p>‘ಸ್ಪೃಶ್ಯ ಒಬಿಸಿ ಜಾತಿಗಳಾದ ಬಂಜಾರ, ಲಂಬಾಣಿ, ಭೋವಿ, ಕೊರಮ, ಕೊರಚ, ಬೇಡ ಜಂಗಮ, ಬುಡಗ ಜಂಗಮ, ಅಲೆಮಾರಿ ಸಮುದಾಯಗಳನ್ನು ಸುಪ್ರೀಂಕೋರ್ಟ್ ಆದೇಶದಂತೆ ತೆಗೆದುಹಾಕಲು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ ಸೂಕ್ತ ಪ್ರಸ್ತಾವ ರಾಜ್ಯ ಸರ್ಕಾರ ಸಲ್ಲಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ನೈಜ ಪರಿಶಿಷ್ಟ ಜಾತಿಗಳ ಹಕ್ಕು ಅವಕಾಶಗಳನ್ನು ಸಂರಕ್ಷಿಸಲು ವಿಫಲವಾಗಿರುವ ಎಸ್ಸಿ ಮೀಸಲು ಕ್ಷೇತ್ರಗಳ ಶಾಸಕರು, ಸಂಸದರು, ಸಚಿವರು ನೈತಿಕ ಹೊಣೆಗಾರಿಕೆ ಅಡಿಯಲ್ಲಿ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಸಭೆಯಲ್ಲಿ ಮುಖಂಡರಾದ ಎಚ್.ಜಿ. ಗಂಗರಾಜು, ಜೆ.ರಾಮಯ್ಯ, ಮಂಜುನಾಥ್ ನಡುಕಲಪುರ, ಪ್ರಸನ್ನ ಚಕ್ರವರ್ತಿ, ಎಂ.ಮಹೇಶ್ ಯಡಗನಹಳ್ಳಿ, ಸಿ.ವೆಂಕಟೇಶ್, ಪ್ರಶಾಂತ್, ಪೂರ್ಣಚಂದ್ರ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-40-1085945176</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>